Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...