Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...