Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...