Homeಮುಖಪುಟಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

- Advertisement -
- Advertisement -

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.

ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಸ್ಥಳಾಂತಗೊಳ್ಳಲು ಬಯಸುವ ಜನರು ಯಾವುದೇ ಮನವಿಗಾಗಿ ನಮ್ಮ 24 ಗಂಟೆಗಳು ಕಾರ್ಯಾಚರಿಸುವ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರೂ ಆಗಿರುವ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತುರ್ಕಮೆನಿಸ್ತಾನ್ ಮತ್ತು ಅರ್ಮೇನಿಯಾ ಸರ್ಕಾರಗಳು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಗೆ ಬಂದಿಳಿದವರಲ್ಲಿ ಒಬ್ಬರಾದ ಕಾಶ್ಮೀರದ ವಿದ್ಯಾರ್ಥಿನಿ ವರ್ತಾ, “ಇರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ವ್ಯಕ್ತಿಗಳು ನಾವು. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು. ನಾವು ಭಯಭೀತರಾಗಿದ್ದೆವು. ನಮ್ಮನ್ನು ಇಲ್ಲಿಗೆ ಕರೆತರಲು ಅತ್ಯಂತ ತ್ವರಿತವಾಗಿ ಕೆಲಸ ಮಾಡಿದ ಭಾರತ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಮೇನಿಯನ್ ಅಧಿಕಾರಿಗಳು ಕೂಡ ತುಂಬಾ ಸಹಾಯಕ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಜೂನ್ 13ರಂದು ಪ್ರಾರಂಭಗೊಂಡ ಇರಾನ್ ಮತ್ತು ಇಸ್ರೇಲ್ ಸಂಘರ್ಷ ಮುಂದುವರಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಟೆಹ್ರಾನ್‌ನಲ್ಲಿರುವ ಇರಾನ್‌ನ ಆಂತರಿಕ ಭದ್ರತಾ ಪ್ರಧಾನ ಕಚೇರಿಯನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇರಾನ್‌ ಕೂಡ ಇಸ್ರೇಲ್ ಕಡೆಗೆ ಹೆಚ್ಚಿನ ಕ್ಷಿಪಣಿಗಳು ಹಾರಿಬಿಟ್ಟಿವೆ ಎಂದು ವರದಿಯಾಗಿದೆ.

ಎರಡೂ ದೇಶಗಳ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ಆಯ್ಕೆಗಳ ಬಗ್ಗೆ ಇನ್ನೂ ಯೋಚಿಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮೊದಲು ಹೇಳಿಕೆ ನೀಡಿರುವ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ, “ಇರಾನ್ ತನ್ನ ಮೇಲೆ ಹೇರಲ್ಪಟ್ಟ ಯುದ್ದವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಮೇಲಿನ ಯಾವುದೇ ದಾಳಿಯು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟು ಮಾಡಬಹುದು” ಎಂದು ಅಮೆರಿಕಕ್ಕೆ ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ದಾಟಿದೆ. ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...