Homeಮುಖಪುಟಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

- Advertisement -
- Advertisement -

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.

ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಸ್ಥಳಾಂತಗೊಳ್ಳಲು ಬಯಸುವ ಜನರು ಯಾವುದೇ ಮನವಿಗಾಗಿ ನಮ್ಮ 24 ಗಂಟೆಗಳು ಕಾರ್ಯಾಚರಿಸುವ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರೂ ಆಗಿರುವ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತುರ್ಕಮೆನಿಸ್ತಾನ್ ಮತ್ತು ಅರ್ಮೇನಿಯಾ ಸರ್ಕಾರಗಳು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಗೆ ಬಂದಿಳಿದವರಲ್ಲಿ ಒಬ್ಬರಾದ ಕಾಶ್ಮೀರದ ವಿದ್ಯಾರ್ಥಿನಿ ವರ್ತಾ, “ಇರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ವ್ಯಕ್ತಿಗಳು ನಾವು. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು. ನಾವು ಭಯಭೀತರಾಗಿದ್ದೆವು. ನಮ್ಮನ್ನು ಇಲ್ಲಿಗೆ ಕರೆತರಲು ಅತ್ಯಂತ ತ್ವರಿತವಾಗಿ ಕೆಲಸ ಮಾಡಿದ ಭಾರತ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಮೇನಿಯನ್ ಅಧಿಕಾರಿಗಳು ಕೂಡ ತುಂಬಾ ಸಹಾಯಕ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಜೂನ್ 13ರಂದು ಪ್ರಾರಂಭಗೊಂಡ ಇರಾನ್ ಮತ್ತು ಇಸ್ರೇಲ್ ಸಂಘರ್ಷ ಮುಂದುವರಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಟೆಹ್ರಾನ್‌ನಲ್ಲಿರುವ ಇರಾನ್‌ನ ಆಂತರಿಕ ಭದ್ರತಾ ಪ್ರಧಾನ ಕಚೇರಿಯನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇರಾನ್‌ ಕೂಡ ಇಸ್ರೇಲ್ ಕಡೆಗೆ ಹೆಚ್ಚಿನ ಕ್ಷಿಪಣಿಗಳು ಹಾರಿಬಿಟ್ಟಿವೆ ಎಂದು ವರದಿಯಾಗಿದೆ.

ಎರಡೂ ದೇಶಗಳ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ಆಯ್ಕೆಗಳ ಬಗ್ಗೆ ಇನ್ನೂ ಯೋಚಿಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮೊದಲು ಹೇಳಿಕೆ ನೀಡಿರುವ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ, “ಇರಾನ್ ತನ್ನ ಮೇಲೆ ಹೇರಲ್ಪಟ್ಟ ಯುದ್ದವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಮೇಲಿನ ಯಾವುದೇ ದಾಳಿಯು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟು ಮಾಡಬಹುದು” ಎಂದು ಅಮೆರಿಕಕ್ಕೆ ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ದಾಟಿದೆ. ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...