Homeಮುಖಪುಟಆಪರೇಷನ್ ಸಿಂಧೂರ | 430 ವಿಮಾನಗಳು ರದ್ದು, 27 ವಿಮಾನ ನಿಲ್ದಾಣಗಳು ಬಂದ್‌

ಆಪರೇಷನ್ ಸಿಂಧೂರ | 430 ವಿಮಾನಗಳು ರದ್ದು, 27 ವಿಮಾನ ನಿಲ್ದಾಣಗಳು ಬಂದ್‌

- Advertisement -
- Advertisement -

ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ ದಾಳಿಯ ಗಂಟೆಗಳ ನಂತರ, ಬುಧವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಬರುವ ಕನಿಷ್ಠ 430 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.

ದಾಳಿ ಮುಗಿದ ಹತ್ತು ನಿಮಿಷಗಳ ನಂತರ, ವಿಮಾನ ಹಾರಾಟವನ್ನು ಟ್ರ್ಯಾಕ್‌ ಮಾಡುವ ಫ್ಲೈಟ್‌ರಾಡರ್ 24, ಪಾಕಿಸ್ತಾನದ ವಾಯುಪ್ರದೇಶದಿಂದ ಹೆಚ್ಚಿನ ವಿಮಾನಗಳು ಬೇರೆಡೆಗೆ ತಿರುಗುತ್ತಿರುವುದನ್ನು ತೋರಿಸುವ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಪಂಜಾಬ್ ಈ ಐದು ರಾಜ್ಯಗಳಲ್ಲಿ ಹರಡಿರುವ ಭಾರತದ 27 ವಿಮಾನ ನಿಲ್ದಾಣಗಳನ್ನು ನಾಗರಿಕ ಕಾರ್ಯಾಚರಣೆಗಳಿಗೆ ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ.

“ಈಗ, ನಿಲ್ದಾಣಗಳ ಮುಚ್ಚುವಿಕೆಯು ಅನಿರ್ದಿಷ್ಟಾವಧಿಗೆ ತಲುಪಿದೆ ಮತ್ತು ಮುಂದಿನ ಪ್ರಾರಂಭದ ದಿನಾಂಕಗಳನ್ನು ನಂತರ ತಿಳಿಸಲಾಗುವುದು” ಎಂದು ಮೂಲಗಳು ತಿಳಿಸಿವೆ.

ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರ್ಮಿಂಗ್ಹ್ಯಾಮ್‌ನಿಂದ ಮತ್ತು ಗ್ಯಾಟ್ವಿಕ್‌ನ ಆಗಮಿಸುತ್ತಿದ್ದ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗುತ್ತಿದೆ ಎಂದು ಏರ್ ಇಂಡಿಯಾ ನಂತರ ಘೋಷಿಸಿತು.

ಮೇ 10 ರವರೆಗೆ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ ಎಂದು ಏರ್ ಇಂಡಿಯಾ ಹೇಳಿದೆ.

“ವಾಯುಪ್ರದೇಶ ನಿರ್ಬಂಧಗಳ ಕುರಿತ ಸರ್ಕಾರದ ಅಧಿಸೂಚನೆಯಿಂದಾಗಿ, ಹಲವು ವಿಮಾನ ನಿಲ್ದಾಣಗಳಿಂದ (ಅಮೃತಸರ, ಬಿಕಾನೇರ್, ಚಂಡೀಗಢ, ಧರ್ಮಶಾಲಾ, ಗ್ವಾಲಿಯರ್, ಜಮ್ಮು, ಜೋಧ್‌ಪುರ, ಕಿಶನ್‌ಗಢ, ಲೇಹ್, ರಾಜ್‌ಕೋಟ್ ಮತ್ತು ಶ್ರೀನಗರ) 165ಕ್ಕೂ ಹೆಚ್ಚು ಇಂಡಿಗೋ ವಿಮಾನಗಳನ್ನು ಮೇ 10, 2025 ರಂದು ಬೆಳಿಗ್ಗೆ 5.29 ರವರೆಗೆ ರದ್ದುಗೊಳಿಸಲಾಗಿದೆ” ಎಂದು ಇಂಡಿಗೊ ಹೇಳಿದೆ.

ಲೇಹ್, ಶ್ರೀನಗರ, ಜಮ್ಮು, ಧರ್ಮಶಾಲಾ, ಕಾಂಡ್ಲಾ ಮತ್ತು ಅಮೃತಸರಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ರದ್ದುಗೊಳಿಸುವುದಾಗಿ ಎಂದು ಸ್ಪೈಸ್‌ಜೆಟ್ ಘೋಷಿಸಿದೆ. ಅದೇ ವೇಳೆ ಆಕಾಶ ಏರ್, ಶ್ರೀನಗರಕ್ಕೆ ಹೋಗುವ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ರದ್ದುಗೊಳಿಸಿದೆ.

ಆಪರೇಷನ್ ಸಿಂಧೂರ ಹಿನ್ನಲೆ ಫ್ರಾಂಕ್‌ಫರ್ಟ್‌ನಿಂದ ಬ್ಯಾಂಕಾಕ್‌ಗೆ ಹೋಗುವ ಥಾಯ್ ಏರ್‌ವೇಸ್ ವಿಮಾನವನ್ನು (TG-921) ದುಬೈಗೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...