Homeಮುಖಪುಟಸಂಸತ್ತಿನಲ್ಲಿ ಇಂದಿನಿಂದ 'ಆಪರೇಷನ್ ಸಿಂಧೂರ್' ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಇಂದಿನಿಂದ (ಜುಲೈ 28, ಸೋಮವಾರ) ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆ ಆರಂಭಗೊಳ್ಳಲಿದೆ. ಆಡಳಿತರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಚರ್ಚೆಗೆ ಸರ್ವ ಸನ್ನದ್ದವಾಗಿದೆ.

ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯುವ ಮೂರು ದಿನಗಳ ಕಾಲ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ಭಾನುವಾರ ವಿಪ್ ಜಾರಿಗೊಳಿಸಿದೆ.

ಜುಲೈ 21ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಆದರೆ, ಇದುವರೆಗೆ ಸರಿಯಾಗಿ ಕಲಾಪಗಳು ನಡೆದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ, ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಸುವಂತೆ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಇದರಿಂದ ಉಭಯ ಸದನಗಳ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ.

ಇಂದಿನಿಂದ ಆಪರೇಷನ್ ಸಿಂಧೂರ್ ವಿಷಯದ ಮೂಲಕ ಸರಿಯಾದ ಚರ್ಚೆ ಆರಂಭಗೊಳ್ಳಲಿದೆ. ಆದರೆ, ಬಿಹಾರ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು  ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ಇದರಿಂದ ಸಂಸತ್ತಿನಲ್ಲಿ ವಾಗ್ಯುದ್ಧ ನಡೆಯುವ ಎಲ್ಲಾ ಸಾಧ್ಯತೆ ಇದೆ.

ಆಡಳಿತ ಪಕ್ಷದ ಅಥವಾ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚರ್ಚೆ ಆರಂಭಿಸಲಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರತಿಪಕ್ಷದ ಉಪನಾಯಕ ಗೌರವ್ ಗೊಗೋಯ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸಜ್ಜು ಮಾಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಸಿಂಧೂರ್ ಕುರಿತು ಮಾತನಾಡಲು ಮೂರು ಗಂಟೆಗಳ ಸಮಯ ನೀಡಲಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಮಾತನಾಡುವ ಸಾಧ್ಯತೆ ಇದೆ.

ಆಡಳಿತ ಕೂಟದಿಂದ ರಾಜನಾಥ್ ಸಿಂಗ್ ಮಾತ್ರವಲ್ಲದೆ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಮಾತನಾಡಲಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಸರ್ಕಾರದ ನಿಲುವು ಮತ್ತು ಕೈಗೊಂಡ ಕ್ರಮಗಳನ್ನು ತಿಳಿಸುವ ಸಾಧ್ಯತೆ ಇದೆ.

ಸೋಮವಾರ, ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಸದನ ಮುಂದೂಡಿಕೆಯಾಗುವವರೆಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಪಕ್ಷದ ನಿಲುವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್‌ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ನೀಡಲಾಗಿದೆ. ಮುಖ್ಯ ಸಚೇತಕ ಕೋಡಿಕುನ್ನಿಲ್ ಸುರೇಶ್ ವಿಪ್ ಜಾರಿಗೊಳಿಸಿದ್ದಾರೆ.

ಲೋಕಸಭಾ ಸಚಿವಾಲಯವು ಸೋಮವಾರದ ತನ್ನ ಕಾರ್ಯಸೂಚಿಯಲ್ಲಿ ‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ಬಲವಾದ, ಯಶಸ್ವಿ ಮತ್ತು ನಿರ್ಣಾಯಕ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಚರ್ಚೆ”ಯನ್ನು ಪಟ್ಟಿ ಮಾಡಿದೆ.

ಶಶಿ ತರೂರ್ ಮಾತಿನತ್ತ ಎಲ್ಲರ ಚಿತ್ತ

ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಯಾವ ರೀತಿ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಏಕೆಂದರೆ, ಆಪರೇಷನ್ ಸಿಂಧೂರ್ ಬಳಿಕ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ತರೂರ್ ಕೊಂಡಾಡಿದ್ದರು. ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಭಯೋತ್ಪಾದನೆಯ ಕುರಿತು ಭಾರತ ನಿಲುವು ತಿಳಿಸಲು ಕೇಂದ್ರ ಸರ್ಕಾರ ಕಳಿಸಿದ್ದ ನಿಯೋಗವೊಂದರ ನೇತೃತ್ವನ್ನು ತರೂರ್ ವಹಿಸಿದ್ದರು. ನಿಯೋಗಕ್ಕೆ ತರೂರ್ ಹೆಸರನ್ನು ಕಾಂಗ್ರೆಸ್ ಅಧಿಕೃತವಾಗಿ ನೀಡಿರಲಿಲ್ಲ. ಆದರೂ, ತರೂರ್‌ಗೆ ಸರ್ಕಾರ ಅವಕಾಶ ನೀಡಿತ್ತು. ವಿದೇಶಕ್ಕೆ ಹೋಗಿ ಬಂದ ಬಳಿಕ ತರೂರ್ ಕೇಂದ್ರ ಸರ್ಕಾರದ ಪರ ಮಾತನಾಡುವುದು ಹೆಚ್ಚಾಗಿದೆ. ಇದು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅಪರೇಷನ್ ಸಿಂಧೂರ್ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ತರೂರ್ ಅವರನ್ನು ಆಯ್ಕೆ ಮಾಡಿದೆಯೇ ಎಂಬುವುದರ ಬಗ್ಗೆ ಮಾಹಿತಿಯಿಲ್ಲ. ಒಂದು ವೇಳೆ ತರೂರ್ ಮಾತನಾಡಿದರೆ ಯಾರ ಪರ ಮಾತನಾಡಬಹುದು? ಕಾಂಗ್ರೆಸ್ ಸಂಸದರಾಗಿ ತನ್ನ ಪಕ್ಷದ ನಿಲುವನ್ನು ಬೆಂಬಲಿಸಬಹುದಾ? ಇಲ್ಲ ಸರ್ಕಾರದ ಪರ ಬ್ಯಾಟ್ ಬೀಸಬಹುದಾ? ಎಂಬ ಕುತೂಹಲ ಮೂಡಿದೆ.

ಕಾಂಗ್ರೆಸ್ ಸ್ಪೀಕರ್‌ಗೆ ಕೊಟ್ಟಿರುವ ಪಟ್ಟಿಯಲ್ಲಿ ತರೂರ್ ಹೆಸರನ್ನು ಸೇರಿಸದಿದ್ದರೂ, ಸ್ಪೀಕರ್ ಇಚ್ಛಿಸಿದರೆ ತರೂರ್ ಅವರಿಗೆ ಮಾತನಾಡಲು ಅವಕಾಶ ಕೊಡಬಹುದು. ಅದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇನ್ನು ಸಮಾಜವಾದಿ ಪಕ್ಷಕ್ಕೆ ಮಾತನಾಡಲು 65 ನಿಮಿಷಗಳ ಸಮಯ ನಿಗದಿಪಡಿಸಲಾಗಿದೆ. ಅಖಿಲೇಶ್ ಯಾದವ್ ಮತ್ತು ರಾಜೀವ್ ರೈ ಮಾತನಾಡುವ ಸಾಧ್ಯತೆ ಇದೆ.

ಅನುರಾಗ್ ಠಾಕೂರ್, ಸುಧಾಂಶು ತ್ರಿವೇದಿ ಮತ್ತು ನಿಶಿಕಾಂತ್ ದುಬೆ ಅವರಂತಹ ಸಚಿವರು ಮತ್ತು ನಾಯಕರ ತಂಡದ ಜೊತೆಗೆ, ಆಡಳಿತಾರೂಢ ಎನ್‌ಡಿಎ ಆಪರೇಷನ್ ಸಿಂಧೂರ್ ನಂತರ ಭಾರತದ ನಿಲುವನ್ನು ತಿಳಿಸಲು 30ಕ್ಕೂ ಹೆಚ್ಚು ದೇಶಗಳಿಗೆ ಪ್ರಯಾಣಿಸಿದ್ದ ಏಳು ಬಹು-ಪಕ್ಷ ನಿಯೋಗಗಳಿಂದ ತನ್ನ ಸದಸ್ಯರನ್ನು ಚರ್ಚಾ ಕಣಕ್ಕಿಳಿಸುವ ನಿರೀಕ್ಷೆಯಿದೆ. ಅವರಲ್ಲಿ ಶಿವಸೇನೆಯ ಶ್ರೀಕಾಂತ್ ಶಿಂಧೆ, ಜೆಡಿ (ಯು) ನ ಸಂಜಯ್ ಝಾ ಮತ್ತು ಟಿಡಿಪಿಯ ಹರೀಶ್ ಬಾಲಯೋಗಿ ಮತ್ತು ಇತರರು ಸೇರಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚೆ ನಡೆಸಬೇಕು ಎಂಬುವುದು ಪ್ರತಿಪಕ್ಷಗಳ ಆಗ್ರಹವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ಪ್ರತಿಯೊಂದು ವಿಷಯವನ್ನು ಸಂಸತ್ತಿನಲ್ಲಿ ಏಕಕಾಲದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ನಿಯಮಗಳಿಗೆ ಅನುಸಾರವಾಗಿ ಎಸ್‌ಐಆರ್ ಕುರಿತು ಚರ್ಚೆಯ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...