Homeಮುಖಪುಟಸಂಸತ್ತಿನಲ್ಲಿ ಇಂದಿನಿಂದ 'ಆಪರೇಷನ್ ಸಿಂಧೂರ್' ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಇಂದಿನಿಂದ (ಜುಲೈ 28, ಸೋಮವಾರ) ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆ ಆರಂಭಗೊಳ್ಳಲಿದೆ. ಆಡಳಿತರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಚರ್ಚೆಗೆ ಸರ್ವ ಸನ್ನದ್ದವಾಗಿದೆ.

ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯುವ ಮೂರು ದಿನಗಳ ಕಾಲ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ಭಾನುವಾರ ವಿಪ್ ಜಾರಿಗೊಳಿಸಿದೆ.

ಜುಲೈ 21ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಆದರೆ, ಇದುವರೆಗೆ ಸರಿಯಾಗಿ ಕಲಾಪಗಳು ನಡೆದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ, ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಸುವಂತೆ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಇದರಿಂದ ಉಭಯ ಸದನಗಳ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ.

ಇಂದಿನಿಂದ ಆಪರೇಷನ್ ಸಿಂಧೂರ್ ವಿಷಯದ ಮೂಲಕ ಸರಿಯಾದ ಚರ್ಚೆ ಆರಂಭಗೊಳ್ಳಲಿದೆ. ಆದರೆ, ಬಿಹಾರ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು  ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ಇದರಿಂದ ಸಂಸತ್ತಿನಲ್ಲಿ ವಾಗ್ಯುದ್ಧ ನಡೆಯುವ ಎಲ್ಲಾ ಸಾಧ್ಯತೆ ಇದೆ.

ಆಡಳಿತ ಪಕ್ಷದ ಅಥವಾ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚರ್ಚೆ ಆರಂಭಿಸಲಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರತಿಪಕ್ಷದ ಉಪನಾಯಕ ಗೌರವ್ ಗೊಗೋಯ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸಜ್ಜು ಮಾಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಸಿಂಧೂರ್ ಕುರಿತು ಮಾತನಾಡಲು ಮೂರು ಗಂಟೆಗಳ ಸಮಯ ನೀಡಲಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಮಾತನಾಡುವ ಸಾಧ್ಯತೆ ಇದೆ.

ಆಡಳಿತ ಕೂಟದಿಂದ ರಾಜನಾಥ್ ಸಿಂಗ್ ಮಾತ್ರವಲ್ಲದೆ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಮಾತನಾಡಲಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಸರ್ಕಾರದ ನಿಲುವು ಮತ್ತು ಕೈಗೊಂಡ ಕ್ರಮಗಳನ್ನು ತಿಳಿಸುವ ಸಾಧ್ಯತೆ ಇದೆ.

ಸೋಮವಾರ, ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಸದನ ಮುಂದೂಡಿಕೆಯಾಗುವವರೆಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಪಕ್ಷದ ನಿಲುವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್‌ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ನೀಡಲಾಗಿದೆ. ಮುಖ್ಯ ಸಚೇತಕ ಕೋಡಿಕುನ್ನಿಲ್ ಸುರೇಶ್ ವಿಪ್ ಜಾರಿಗೊಳಿಸಿದ್ದಾರೆ.

ಲೋಕಸಭಾ ಸಚಿವಾಲಯವು ಸೋಮವಾರದ ತನ್ನ ಕಾರ್ಯಸೂಚಿಯಲ್ಲಿ ‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ಬಲವಾದ, ಯಶಸ್ವಿ ಮತ್ತು ನಿರ್ಣಾಯಕ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಚರ್ಚೆ”ಯನ್ನು ಪಟ್ಟಿ ಮಾಡಿದೆ.

ಶಶಿ ತರೂರ್ ಮಾತಿನತ್ತ ಎಲ್ಲರ ಚಿತ್ತ

ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಯಾವ ರೀತಿ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಏಕೆಂದರೆ, ಆಪರೇಷನ್ ಸಿಂಧೂರ್ ಬಳಿಕ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ತರೂರ್ ಕೊಂಡಾಡಿದ್ದರು. ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಭಯೋತ್ಪಾದನೆಯ ಕುರಿತು ಭಾರತ ನಿಲುವು ತಿಳಿಸಲು ಕೇಂದ್ರ ಸರ್ಕಾರ ಕಳಿಸಿದ್ದ ನಿಯೋಗವೊಂದರ ನೇತೃತ್ವನ್ನು ತರೂರ್ ವಹಿಸಿದ್ದರು. ನಿಯೋಗಕ್ಕೆ ತರೂರ್ ಹೆಸರನ್ನು ಕಾಂಗ್ರೆಸ್ ಅಧಿಕೃತವಾಗಿ ನೀಡಿರಲಿಲ್ಲ. ಆದರೂ, ತರೂರ್‌ಗೆ ಸರ್ಕಾರ ಅವಕಾಶ ನೀಡಿತ್ತು. ವಿದೇಶಕ್ಕೆ ಹೋಗಿ ಬಂದ ಬಳಿಕ ತರೂರ್ ಕೇಂದ್ರ ಸರ್ಕಾರದ ಪರ ಮಾತನಾಡುವುದು ಹೆಚ್ಚಾಗಿದೆ. ಇದು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅಪರೇಷನ್ ಸಿಂಧೂರ್ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ತರೂರ್ ಅವರನ್ನು ಆಯ್ಕೆ ಮಾಡಿದೆಯೇ ಎಂಬುವುದರ ಬಗ್ಗೆ ಮಾಹಿತಿಯಿಲ್ಲ. ಒಂದು ವೇಳೆ ತರೂರ್ ಮಾತನಾಡಿದರೆ ಯಾರ ಪರ ಮಾತನಾಡಬಹುದು? ಕಾಂಗ್ರೆಸ್ ಸಂಸದರಾಗಿ ತನ್ನ ಪಕ್ಷದ ನಿಲುವನ್ನು ಬೆಂಬಲಿಸಬಹುದಾ? ಇಲ್ಲ ಸರ್ಕಾರದ ಪರ ಬ್ಯಾಟ್ ಬೀಸಬಹುದಾ? ಎಂಬ ಕುತೂಹಲ ಮೂಡಿದೆ.

ಕಾಂಗ್ರೆಸ್ ಸ್ಪೀಕರ್‌ಗೆ ಕೊಟ್ಟಿರುವ ಪಟ್ಟಿಯಲ್ಲಿ ತರೂರ್ ಹೆಸರನ್ನು ಸೇರಿಸದಿದ್ದರೂ, ಸ್ಪೀಕರ್ ಇಚ್ಛಿಸಿದರೆ ತರೂರ್ ಅವರಿಗೆ ಮಾತನಾಡಲು ಅವಕಾಶ ಕೊಡಬಹುದು. ಅದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇನ್ನು ಸಮಾಜವಾದಿ ಪಕ್ಷಕ್ಕೆ ಮಾತನಾಡಲು 65 ನಿಮಿಷಗಳ ಸಮಯ ನಿಗದಿಪಡಿಸಲಾಗಿದೆ. ಅಖಿಲೇಶ್ ಯಾದವ್ ಮತ್ತು ರಾಜೀವ್ ರೈ ಮಾತನಾಡುವ ಸಾಧ್ಯತೆ ಇದೆ.

ಅನುರಾಗ್ ಠಾಕೂರ್, ಸುಧಾಂಶು ತ್ರಿವೇದಿ ಮತ್ತು ನಿಶಿಕಾಂತ್ ದುಬೆ ಅವರಂತಹ ಸಚಿವರು ಮತ್ತು ನಾಯಕರ ತಂಡದ ಜೊತೆಗೆ, ಆಡಳಿತಾರೂಢ ಎನ್‌ಡಿಎ ಆಪರೇಷನ್ ಸಿಂಧೂರ್ ನಂತರ ಭಾರತದ ನಿಲುವನ್ನು ತಿಳಿಸಲು 30ಕ್ಕೂ ಹೆಚ್ಚು ದೇಶಗಳಿಗೆ ಪ್ರಯಾಣಿಸಿದ್ದ ಏಳು ಬಹು-ಪಕ್ಷ ನಿಯೋಗಗಳಿಂದ ತನ್ನ ಸದಸ್ಯರನ್ನು ಚರ್ಚಾ ಕಣಕ್ಕಿಳಿಸುವ ನಿರೀಕ್ಷೆಯಿದೆ. ಅವರಲ್ಲಿ ಶಿವಸೇನೆಯ ಶ್ರೀಕಾಂತ್ ಶಿಂಧೆ, ಜೆಡಿ (ಯು) ನ ಸಂಜಯ್ ಝಾ ಮತ್ತು ಟಿಡಿಪಿಯ ಹರೀಶ್ ಬಾಲಯೋಗಿ ಮತ್ತು ಇತರರು ಸೇರಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚೆ ನಡೆಸಬೇಕು ಎಂಬುವುದು ಪ್ರತಿಪಕ್ಷಗಳ ಆಗ್ರಹವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ಪ್ರತಿಯೊಂದು ವಿಷಯವನ್ನು ಸಂಸತ್ತಿನಲ್ಲಿ ಏಕಕಾಲದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ನಿಯಮಗಳಿಗೆ ಅನುಸಾರವಾಗಿ ಎಸ್‌ಐಆರ್ ಕುರಿತು ಚರ್ಚೆಯ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...