Homeಮುಖಪುಟಸಂಸತ್ತಿನಲ್ಲಿ ಇಂದಿನಿಂದ 'ಆಪರೇಷನ್ ಸಿಂಧೂರ್' ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಇಂದಿನಿಂದ (ಜುಲೈ 28, ಸೋಮವಾರ) ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆ ಆರಂಭಗೊಳ್ಳಲಿದೆ. ಆಡಳಿತರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಚರ್ಚೆಗೆ ಸರ್ವ ಸನ್ನದ್ದವಾಗಿದೆ.

ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯುವ ಮೂರು ದಿನಗಳ ಕಾಲ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ಭಾನುವಾರ ವಿಪ್ ಜಾರಿಗೊಳಿಸಿದೆ.

ಜುಲೈ 21ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಆದರೆ, ಇದುವರೆಗೆ ಸರಿಯಾಗಿ ಕಲಾಪಗಳು ನಡೆದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ, ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಸುವಂತೆ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಇದರಿಂದ ಉಭಯ ಸದನಗಳ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ.

ಇಂದಿನಿಂದ ಆಪರೇಷನ್ ಸಿಂಧೂರ್ ವಿಷಯದ ಮೂಲಕ ಸರಿಯಾದ ಚರ್ಚೆ ಆರಂಭಗೊಳ್ಳಲಿದೆ. ಆದರೆ, ಬಿಹಾರ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು  ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ಇದರಿಂದ ಸಂಸತ್ತಿನಲ್ಲಿ ವಾಗ್ಯುದ್ಧ ನಡೆಯುವ ಎಲ್ಲಾ ಸಾಧ್ಯತೆ ಇದೆ.

ಆಡಳಿತ ಪಕ್ಷದ ಅಥವಾ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚರ್ಚೆ ಆರಂಭಿಸಲಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರತಿಪಕ್ಷದ ಉಪನಾಯಕ ಗೌರವ್ ಗೊಗೋಯ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸಜ್ಜು ಮಾಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಸಿಂಧೂರ್ ಕುರಿತು ಮಾತನಾಡಲು ಮೂರು ಗಂಟೆಗಳ ಸಮಯ ನೀಡಲಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಮಾತನಾಡುವ ಸಾಧ್ಯತೆ ಇದೆ.

ಆಡಳಿತ ಕೂಟದಿಂದ ರಾಜನಾಥ್ ಸಿಂಗ್ ಮಾತ್ರವಲ್ಲದೆ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಮಾತನಾಡಲಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಸರ್ಕಾರದ ನಿಲುವು ಮತ್ತು ಕೈಗೊಂಡ ಕ್ರಮಗಳನ್ನು ತಿಳಿಸುವ ಸಾಧ್ಯತೆ ಇದೆ.

ಸೋಮವಾರ, ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಸದನ ಮುಂದೂಡಿಕೆಯಾಗುವವರೆಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಪಕ್ಷದ ನಿಲುವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್‌ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ನೀಡಲಾಗಿದೆ. ಮುಖ್ಯ ಸಚೇತಕ ಕೋಡಿಕುನ್ನಿಲ್ ಸುರೇಶ್ ವಿಪ್ ಜಾರಿಗೊಳಿಸಿದ್ದಾರೆ.

ಲೋಕಸಭಾ ಸಚಿವಾಲಯವು ಸೋಮವಾರದ ತನ್ನ ಕಾರ್ಯಸೂಚಿಯಲ್ಲಿ ‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ಬಲವಾದ, ಯಶಸ್ವಿ ಮತ್ತು ನಿರ್ಣಾಯಕ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಚರ್ಚೆ”ಯನ್ನು ಪಟ್ಟಿ ಮಾಡಿದೆ.

ಶಶಿ ತರೂರ್ ಮಾತಿನತ್ತ ಎಲ್ಲರ ಚಿತ್ತ

ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಯಾವ ರೀತಿ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಏಕೆಂದರೆ, ಆಪರೇಷನ್ ಸಿಂಧೂರ್ ಬಳಿಕ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ತರೂರ್ ಕೊಂಡಾಡಿದ್ದರು. ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಭಯೋತ್ಪಾದನೆಯ ಕುರಿತು ಭಾರತ ನಿಲುವು ತಿಳಿಸಲು ಕೇಂದ್ರ ಸರ್ಕಾರ ಕಳಿಸಿದ್ದ ನಿಯೋಗವೊಂದರ ನೇತೃತ್ವನ್ನು ತರೂರ್ ವಹಿಸಿದ್ದರು. ನಿಯೋಗಕ್ಕೆ ತರೂರ್ ಹೆಸರನ್ನು ಕಾಂಗ್ರೆಸ್ ಅಧಿಕೃತವಾಗಿ ನೀಡಿರಲಿಲ್ಲ. ಆದರೂ, ತರೂರ್‌ಗೆ ಸರ್ಕಾರ ಅವಕಾಶ ನೀಡಿತ್ತು. ವಿದೇಶಕ್ಕೆ ಹೋಗಿ ಬಂದ ಬಳಿಕ ತರೂರ್ ಕೇಂದ್ರ ಸರ್ಕಾರದ ಪರ ಮಾತನಾಡುವುದು ಹೆಚ್ಚಾಗಿದೆ. ಇದು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅಪರೇಷನ್ ಸಿಂಧೂರ್ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ತರೂರ್ ಅವರನ್ನು ಆಯ್ಕೆ ಮಾಡಿದೆಯೇ ಎಂಬುವುದರ ಬಗ್ಗೆ ಮಾಹಿತಿಯಿಲ್ಲ. ಒಂದು ವೇಳೆ ತರೂರ್ ಮಾತನಾಡಿದರೆ ಯಾರ ಪರ ಮಾತನಾಡಬಹುದು? ಕಾಂಗ್ರೆಸ್ ಸಂಸದರಾಗಿ ತನ್ನ ಪಕ್ಷದ ನಿಲುವನ್ನು ಬೆಂಬಲಿಸಬಹುದಾ? ಇಲ್ಲ ಸರ್ಕಾರದ ಪರ ಬ್ಯಾಟ್ ಬೀಸಬಹುದಾ? ಎಂಬ ಕುತೂಹಲ ಮೂಡಿದೆ.

ಕಾಂಗ್ರೆಸ್ ಸ್ಪೀಕರ್‌ಗೆ ಕೊಟ್ಟಿರುವ ಪಟ್ಟಿಯಲ್ಲಿ ತರೂರ್ ಹೆಸರನ್ನು ಸೇರಿಸದಿದ್ದರೂ, ಸ್ಪೀಕರ್ ಇಚ್ಛಿಸಿದರೆ ತರೂರ್ ಅವರಿಗೆ ಮಾತನಾಡಲು ಅವಕಾಶ ಕೊಡಬಹುದು. ಅದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇನ್ನು ಸಮಾಜವಾದಿ ಪಕ್ಷಕ್ಕೆ ಮಾತನಾಡಲು 65 ನಿಮಿಷಗಳ ಸಮಯ ನಿಗದಿಪಡಿಸಲಾಗಿದೆ. ಅಖಿಲೇಶ್ ಯಾದವ್ ಮತ್ತು ರಾಜೀವ್ ರೈ ಮಾತನಾಡುವ ಸಾಧ್ಯತೆ ಇದೆ.

ಅನುರಾಗ್ ಠಾಕೂರ್, ಸುಧಾಂಶು ತ್ರಿವೇದಿ ಮತ್ತು ನಿಶಿಕಾಂತ್ ದುಬೆ ಅವರಂತಹ ಸಚಿವರು ಮತ್ತು ನಾಯಕರ ತಂಡದ ಜೊತೆಗೆ, ಆಡಳಿತಾರೂಢ ಎನ್‌ಡಿಎ ಆಪರೇಷನ್ ಸಿಂಧೂರ್ ನಂತರ ಭಾರತದ ನಿಲುವನ್ನು ತಿಳಿಸಲು 30ಕ್ಕೂ ಹೆಚ್ಚು ದೇಶಗಳಿಗೆ ಪ್ರಯಾಣಿಸಿದ್ದ ಏಳು ಬಹು-ಪಕ್ಷ ನಿಯೋಗಗಳಿಂದ ತನ್ನ ಸದಸ್ಯರನ್ನು ಚರ್ಚಾ ಕಣಕ್ಕಿಳಿಸುವ ನಿರೀಕ್ಷೆಯಿದೆ. ಅವರಲ್ಲಿ ಶಿವಸೇನೆಯ ಶ್ರೀಕಾಂತ್ ಶಿಂಧೆ, ಜೆಡಿ (ಯು) ನ ಸಂಜಯ್ ಝಾ ಮತ್ತು ಟಿಡಿಪಿಯ ಹರೀಶ್ ಬಾಲಯೋಗಿ ಮತ್ತು ಇತರರು ಸೇರಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚೆ ನಡೆಸಬೇಕು ಎಂಬುವುದು ಪ್ರತಿಪಕ್ಷಗಳ ಆಗ್ರಹವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ಪ್ರತಿಯೊಂದು ವಿಷಯವನ್ನು ಸಂಸತ್ತಿನಲ್ಲಿ ಏಕಕಾಲದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ನಿಯಮಗಳಿಗೆ ಅನುಸಾರವಾಗಿ ಎಸ್‌ಐಆರ್ ಕುರಿತು ಚರ್ಚೆಯ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...