Homeಮುಖಪುಟಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ...

ಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ ಮಾಡಿಲ್ಲ ಎಂದು ವಿವರಣೆ

- Advertisement -
- Advertisement -

ಬುಧವಾರ (ಮೇ 7, 2025) ಬೆಳಗಿನ ಜಾವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ವಿವಿಧ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ, ಭಾರತವು ಅಮೆರಿಕ, ಯುಕೆ, ಸೌದಿ ಅರೇಬಿಯಾ, ಯುಎಇ ಮತ್ತು ರಷ್ಯಾಗೆ ದಾಳಿ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ನಿಖರವಾಗಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತಿಳಿಸಿದೆ. ಮಾಹಿತಿ ಪಡೆದ ಎಲ್ಲಾ ಐದು ದೇಶಗಳ ನಾಯಕರು ಕಳೆದ ಎರಡು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ಆಪರೇಷನ್ ಸಿಂಧೂರ ಹಿನ್ನೆಲೆ, ಇಂದಿಗೆ (ಬುಧವಾರ) ನಿಗದಿಯಾಗಿದ್ದ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರ ಭಾರತ ಭೇಟಿ ಕೊಂಚ ತಡವಾಗಬಹುದು. ಆದರೆ, ಅವರು ಪ್ರವಾಸ ರದ್ದುಗೊಳಿಸಿಲ್ಲ ಎಂದು ಇಂದು ಬೆಳಿಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಆದರೆ, ಅವರು ಭಾರತಕ್ಕೆ ಆಗಮಿಸಿದ ಬಗ್ಗೆ ಮಾಹಿತಿ ದೊರೆತಿಲ್ಲ.

ಕೇಂದ್ರೀಕೃತ, ನಿಖರ ದಾಳಿ

“ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆಪರೇಷನ್ ಸಿಂಧೂರ ಕುರಿತು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

“ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪಾಕಿಸ್ತಾನ ಕಳೆದ 15 ದಿನಗಳಿಂದ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ. ಭಾರತದ ವಿರುದ್ಧ ಸುಳ್ಳು ಕಾರ್ಯಾಚರಣೆಯ ಆರೋಪಗಳನ್ನು ಮಾಡಿದೆ” ಎಂದಿದೆ.

ಭಾರತದ ಕ್ರಮಗಳ ಬಗ್ಗೆ ಎನ್‌ಎಸ್‌ಎ ಅಜಿತ್ ದೋವಲ್ ಅವರು ಅಮೆರಿಕದ ಪ್ರಭಾರ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮಾತನಾಡಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮಾರ್ಕೊ ರೂಬಿಯೊ, “ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಸಂಘರ್ಷ ಶೀಘ್ರ ಕೊನೆಗೊಳ್ಳಲಿ ಎಂದು ಆಶಿಸುತ್ತೇವೆ. ಭಾರತ-ಪಾಕಿಸ್ತಾನದ ನಾಯಕರು ಮಾತುಕತೆ ಮೂಲಕ ಇದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಿದ್ದಾರೆ” ಎಂದಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಇಂದು ನಿನ್ನೆಯದ್ದಲ್ಲ. ಆಗಾಗ ಅವರ ನಡುವೆ ಸಂಘರ್ಷ ಉಂಟಾಗುತ್ತದೆ ಮತ್ತು ಅವರು ಅದನ್ನು ಬಗೆಹರಿಸಿಕೊಂಡು ಮುಂದುವರಿಯುತ್ತಾರೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ಹೇಳಿದ್ದರು. ಅದೇ ನಮ್ಮ ನಿಲುವು ಎಂದು ಮಾರ್ಕೊ ರೂಬಿಯೊ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಬಗ್ಗೆ ಭಾರತ ಪಕ್ಕದ ಚೀನಾಗೆ ವಿವರಣೆ ನೀಡಿಲ್ಲ. ಭಾರತದ ದಾಳಿಯನ್ನು ಚೀನಾ ‘ವಿಷಾದನೀಯ’ ಎಂದಿದೆ.

“ಈಗ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ನಮಗೆ ಕಳವಳವಿದೆ. ಚೀನಾ ಭಾರತ ಮತ್ತು ಪಾಕಿಸ್ತಾನ ಎರಡಕ್ಕೂ ನೆರೆಯ ರಾಷ್ಟ್ರವಾಗಿದೆ. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಎರಡೂ ಕಡೆಯವರು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳಬಾರದು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ಬೆಳಿಗ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...