Homeಮುಖಪುಟಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ...

ಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ ಮಾಡಿಲ್ಲ ಎಂದು ವಿವರಣೆ

- Advertisement -
- Advertisement -

ಬುಧವಾರ (ಮೇ 7, 2025) ಬೆಳಗಿನ ಜಾವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ವಿವಿಧ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ, ಭಾರತವು ಅಮೆರಿಕ, ಯುಕೆ, ಸೌದಿ ಅರೇಬಿಯಾ, ಯುಎಇ ಮತ್ತು ರಷ್ಯಾಗೆ ದಾಳಿ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ನಿಖರವಾಗಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತಿಳಿಸಿದೆ. ಮಾಹಿತಿ ಪಡೆದ ಎಲ್ಲಾ ಐದು ದೇಶಗಳ ನಾಯಕರು ಕಳೆದ ಎರಡು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ಆಪರೇಷನ್ ಸಿಂಧೂರ ಹಿನ್ನೆಲೆ, ಇಂದಿಗೆ (ಬುಧವಾರ) ನಿಗದಿಯಾಗಿದ್ದ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರ ಭಾರತ ಭೇಟಿ ಕೊಂಚ ತಡವಾಗಬಹುದು. ಆದರೆ, ಅವರು ಪ್ರವಾಸ ರದ್ದುಗೊಳಿಸಿಲ್ಲ ಎಂದು ಇಂದು ಬೆಳಿಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಆದರೆ, ಅವರು ಭಾರತಕ್ಕೆ ಆಗಮಿಸಿದ ಬಗ್ಗೆ ಮಾಹಿತಿ ದೊರೆತಿಲ್ಲ.

ಕೇಂದ್ರೀಕೃತ, ನಿಖರ ದಾಳಿ

“ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆಪರೇಷನ್ ಸಿಂಧೂರ ಕುರಿತು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

“ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪಾಕಿಸ್ತಾನ ಕಳೆದ 15 ದಿನಗಳಿಂದ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ. ಭಾರತದ ವಿರುದ್ಧ ಸುಳ್ಳು ಕಾರ್ಯಾಚರಣೆಯ ಆರೋಪಗಳನ್ನು ಮಾಡಿದೆ” ಎಂದಿದೆ.

ಭಾರತದ ಕ್ರಮಗಳ ಬಗ್ಗೆ ಎನ್‌ಎಸ್‌ಎ ಅಜಿತ್ ದೋವಲ್ ಅವರು ಅಮೆರಿಕದ ಪ್ರಭಾರ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮಾತನಾಡಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮಾರ್ಕೊ ರೂಬಿಯೊ, “ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಸಂಘರ್ಷ ಶೀಘ್ರ ಕೊನೆಗೊಳ್ಳಲಿ ಎಂದು ಆಶಿಸುತ್ತೇವೆ. ಭಾರತ-ಪಾಕಿಸ್ತಾನದ ನಾಯಕರು ಮಾತುಕತೆ ಮೂಲಕ ಇದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಿದ್ದಾರೆ” ಎಂದಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಇಂದು ನಿನ್ನೆಯದ್ದಲ್ಲ. ಆಗಾಗ ಅವರ ನಡುವೆ ಸಂಘರ್ಷ ಉಂಟಾಗುತ್ತದೆ ಮತ್ತು ಅವರು ಅದನ್ನು ಬಗೆಹರಿಸಿಕೊಂಡು ಮುಂದುವರಿಯುತ್ತಾರೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ಹೇಳಿದ್ದರು. ಅದೇ ನಮ್ಮ ನಿಲುವು ಎಂದು ಮಾರ್ಕೊ ರೂಬಿಯೊ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಬಗ್ಗೆ ಭಾರತ ಪಕ್ಕದ ಚೀನಾಗೆ ವಿವರಣೆ ನೀಡಿಲ್ಲ. ಭಾರತದ ದಾಳಿಯನ್ನು ಚೀನಾ ‘ವಿಷಾದನೀಯ’ ಎಂದಿದೆ.

“ಈಗ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ನಮಗೆ ಕಳವಳವಿದೆ. ಚೀನಾ ಭಾರತ ಮತ್ತು ಪಾಕಿಸ್ತಾನ ಎರಡಕ್ಕೂ ನೆರೆಯ ರಾಷ್ಟ್ರವಾಗಿದೆ. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಎರಡೂ ಕಡೆಯವರು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳಬಾರದು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ಬೆಳಿಗ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....