Homeಕರ್ನಾಟಕ'ಆಪರೇಷನ್ ಸಿಂಧೂರ' ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

‘ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕರ ತಾಣಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ, ಬುಧವಾರ ಕಾವೇರಿ ನಿವಾಸದಲ್ಲಿ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ. ರಾಜ್ಯದ ಪರವಾಗಿ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಹೇಳಿದರು.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸುಮಾರು 9 ಭಯೋತ್ಪಾದಕ ನೆಲೆಗಳನ್ನು ಸೇನೆ ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಪಹಲ್ಗಾಮ್‌ನಲ್ಲಿ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ, ಪಾಕಿಸ್ತಾನ ಅದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಸಿಎಂ ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ, ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲಾ ದೇಶಗಳಿಗೆ ಕೂಡಾ ಎಚ್ಚರಿಕೆಯ ಗಂಟೆಯಾಗಿದೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...