Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...