Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...