Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...