Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...