Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...