Homeಮುಖಪುಟ20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

- Advertisement -
- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಪುಟ್ಟ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿನ್ನೆ ಅಪಾಯದಲ್ಲಿ ಸಿಲುಕಿದ್ದ ಬಾಲಕನನ್ನು 20 ಗಂಟೆಗಳ ಯಶಸ್ವಿ ಕಾರ್ಯಾಚರಣೆ ನಂತರ ಬಾಲಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕ ಸಾತ್ವಿಕ್ ಸತೀಶ್ ಮುಜಗೊಂಡ್ ಅಳುವ ಶಬ್ದ ಕೇಳಿಸಿದ್ದು, ಆತನನ್ನು ತಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೋರ್‌ವೆಲ್‌ನ 16 ಅಡಿ ಆಳದಲ್ಲಿ ಸಿಲುಕಿದ್ದ ಮಗುವನ್ನು ಸುರಕ್ಷಿತವಾಗಿ ಹೊರತರುತ್ತಿದ್ದಂತೆ ಸ್ಥಳದಲ್ಲಿ ಸಂಭ್ರಮಾಚರಣೆ ನಡೆಯಿತು. ಆತನನ್ನು ತಕ್ಷಣವೇ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯಕೀಯ ತಂಡವನ್ನು ಮೊದಲೇ ಇರಿಸಲಾಗಿತ್ತು.

ಮಗುವಿನ ರಕ್ಷಣಾ ಪ್ರಯತ್ನದಲ್ಲಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಮಗುವಿಗೆ ಉಸಿರಾಡಲು ಸಾಧ್ಯವಾಗುವಂತೆ ಪೈಪ್‌ಲೈನ್ ಮೂಲಕ ಆಮ್ಲಜನಕವನ್ನು ಪೂರೈಸಿದವು. ಇದರ ನಂತರ, ರಕ್ಷಣಾ ತಂಡವು ಬಾಲಕನನ್ನು ತಲುಪಲು ಮತ್ತು ರಕ್ಷಿಸಲು ಬೋರ್‌ವೆಲ್‌ಗೆ ಸಮಾನಾಂತರವಾಗಿ ಸರಿಸುಮಾರು 21 ಅಡಿ ಆಳದ ಗುಂಡಿ ಅಗೆಯಲು ಭಾರೀ ಗಾತ್ರದ ಯಂತ್ರಗಳನ್ನು ಬಳಸಿದರು.

ಮುಂಜಾಗ್ರತಾ ಕ್ರಮವಾಗಿ, ಚುಚ್ಚುಮದ್ದು, ಆಮ್ಲಜನಕ ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಗಳನ್ನು ಹೊಂದಿದ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ಇರಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಮಗುವನ್ನು ಸಾಗಿಸಲು ಆಂಬ್ಯುಲೆನ್ಸ್ ಅನ್ನು ಸಜ್ಜುಗೊಳಿಸಲಾಗಿತ್ತು. ಅಗತ್ಯವಿದ್ದರೆ, ಹೆಚ್ಚಿನ ಆರೈಕೆಗಾಗಿ ಮಗುವನ್ನು ಉನ್ನತ ಮಟ್ಟದ ವೈದ್ಯಕೀಯ ಸೌಲಭ್ಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಸಂತಸ ವ್ಯಕ್ತಪಡಿಸಿದ ಸಿಎಂ

ಬಾಲಕನನ್ನು ರಕ್ಷಿಸಿದ ಸುದ್ದಿ ಹೊರಬರುತ್ತಿದ್ದಾಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ‘ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ-ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಫಲಿಸಿದೆ! ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್‌ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್‌ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ;
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...