Homeಮುಖಪುಟ20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

- Advertisement -
- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಪುಟ್ಟ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿನ್ನೆ ಅಪಾಯದಲ್ಲಿ ಸಿಲುಕಿದ್ದ ಬಾಲಕನನ್ನು 20 ಗಂಟೆಗಳ ಯಶಸ್ವಿ ಕಾರ್ಯಾಚರಣೆ ನಂತರ ಬಾಲಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕ ಸಾತ್ವಿಕ್ ಸತೀಶ್ ಮುಜಗೊಂಡ್ ಅಳುವ ಶಬ್ದ ಕೇಳಿಸಿದ್ದು, ಆತನನ್ನು ತಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೋರ್‌ವೆಲ್‌ನ 16 ಅಡಿ ಆಳದಲ್ಲಿ ಸಿಲುಕಿದ್ದ ಮಗುವನ್ನು ಸುರಕ್ಷಿತವಾಗಿ ಹೊರತರುತ್ತಿದ್ದಂತೆ ಸ್ಥಳದಲ್ಲಿ ಸಂಭ್ರಮಾಚರಣೆ ನಡೆಯಿತು. ಆತನನ್ನು ತಕ್ಷಣವೇ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯಕೀಯ ತಂಡವನ್ನು ಮೊದಲೇ ಇರಿಸಲಾಗಿತ್ತು.

ಮಗುವಿನ ರಕ್ಷಣಾ ಪ್ರಯತ್ನದಲ್ಲಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಮಗುವಿಗೆ ಉಸಿರಾಡಲು ಸಾಧ್ಯವಾಗುವಂತೆ ಪೈಪ್‌ಲೈನ್ ಮೂಲಕ ಆಮ್ಲಜನಕವನ್ನು ಪೂರೈಸಿದವು. ಇದರ ನಂತರ, ರಕ್ಷಣಾ ತಂಡವು ಬಾಲಕನನ್ನು ತಲುಪಲು ಮತ್ತು ರಕ್ಷಿಸಲು ಬೋರ್‌ವೆಲ್‌ಗೆ ಸಮಾನಾಂತರವಾಗಿ ಸರಿಸುಮಾರು 21 ಅಡಿ ಆಳದ ಗುಂಡಿ ಅಗೆಯಲು ಭಾರೀ ಗಾತ್ರದ ಯಂತ್ರಗಳನ್ನು ಬಳಸಿದರು.

ಮುಂಜಾಗ್ರತಾ ಕ್ರಮವಾಗಿ, ಚುಚ್ಚುಮದ್ದು, ಆಮ್ಲಜನಕ ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಗಳನ್ನು ಹೊಂದಿದ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ಇರಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಮಗುವನ್ನು ಸಾಗಿಸಲು ಆಂಬ್ಯುಲೆನ್ಸ್ ಅನ್ನು ಸಜ್ಜುಗೊಳಿಸಲಾಗಿತ್ತು. ಅಗತ್ಯವಿದ್ದರೆ, ಹೆಚ್ಚಿನ ಆರೈಕೆಗಾಗಿ ಮಗುವನ್ನು ಉನ್ನತ ಮಟ್ಟದ ವೈದ್ಯಕೀಯ ಸೌಲಭ್ಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಸಂತಸ ವ್ಯಕ್ತಪಡಿಸಿದ ಸಿಎಂ

ಬಾಲಕನನ್ನು ರಕ್ಷಿಸಿದ ಸುದ್ದಿ ಹೊರಬರುತ್ತಿದ್ದಾಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ‘ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ-ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಫಲಿಸಿದೆ! ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್‌ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್‌ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ;
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...