Homeಮುಖಪುಟ20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

- Advertisement -
- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಪುಟ್ಟ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿನ್ನೆ ಅಪಾಯದಲ್ಲಿ ಸಿಲುಕಿದ್ದ ಬಾಲಕನನ್ನು 20 ಗಂಟೆಗಳ ಯಶಸ್ವಿ ಕಾರ್ಯಾಚರಣೆ ನಂತರ ಬಾಲಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕ ಸಾತ್ವಿಕ್ ಸತೀಶ್ ಮುಜಗೊಂಡ್ ಅಳುವ ಶಬ್ದ ಕೇಳಿಸಿದ್ದು, ಆತನನ್ನು ತಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೋರ್‌ವೆಲ್‌ನ 16 ಅಡಿ ಆಳದಲ್ಲಿ ಸಿಲುಕಿದ್ದ ಮಗುವನ್ನು ಸುರಕ್ಷಿತವಾಗಿ ಹೊರತರುತ್ತಿದ್ದಂತೆ ಸ್ಥಳದಲ್ಲಿ ಸಂಭ್ರಮಾಚರಣೆ ನಡೆಯಿತು. ಆತನನ್ನು ತಕ್ಷಣವೇ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯಕೀಯ ತಂಡವನ್ನು ಮೊದಲೇ ಇರಿಸಲಾಗಿತ್ತು.

ಮಗುವಿನ ರಕ್ಷಣಾ ಪ್ರಯತ್ನದಲ್ಲಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಮಗುವಿಗೆ ಉಸಿರಾಡಲು ಸಾಧ್ಯವಾಗುವಂತೆ ಪೈಪ್‌ಲೈನ್ ಮೂಲಕ ಆಮ್ಲಜನಕವನ್ನು ಪೂರೈಸಿದವು. ಇದರ ನಂತರ, ರಕ್ಷಣಾ ತಂಡವು ಬಾಲಕನನ್ನು ತಲುಪಲು ಮತ್ತು ರಕ್ಷಿಸಲು ಬೋರ್‌ವೆಲ್‌ಗೆ ಸಮಾನಾಂತರವಾಗಿ ಸರಿಸುಮಾರು 21 ಅಡಿ ಆಳದ ಗುಂಡಿ ಅಗೆಯಲು ಭಾರೀ ಗಾತ್ರದ ಯಂತ್ರಗಳನ್ನು ಬಳಸಿದರು.

ಮುಂಜಾಗ್ರತಾ ಕ್ರಮವಾಗಿ, ಚುಚ್ಚುಮದ್ದು, ಆಮ್ಲಜನಕ ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಗಳನ್ನು ಹೊಂದಿದ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ಇರಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಮಗುವನ್ನು ಸಾಗಿಸಲು ಆಂಬ್ಯುಲೆನ್ಸ್ ಅನ್ನು ಸಜ್ಜುಗೊಳಿಸಲಾಗಿತ್ತು. ಅಗತ್ಯವಿದ್ದರೆ, ಹೆಚ್ಚಿನ ಆರೈಕೆಗಾಗಿ ಮಗುವನ್ನು ಉನ್ನತ ಮಟ್ಟದ ವೈದ್ಯಕೀಯ ಸೌಲಭ್ಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಸಂತಸ ವ್ಯಕ್ತಪಡಿಸಿದ ಸಿಎಂ

ಬಾಲಕನನ್ನು ರಕ್ಷಿಸಿದ ಸುದ್ದಿ ಹೊರಬರುತ್ತಿದ್ದಾಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ‘ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ-ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಫಲಿಸಿದೆ! ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್‌ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್‌ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ;
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...