Homeಮುಖಪುಟ20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

20 ಗಂಟೆಗಳ ಕಾರ್ಯಾಚರಣೆ ಯಶಸ್ವಿ; ಕೊಳವೆ ಬಾವಿಯಿಂದ ಮಗುವನ್ನು ರಕ್ಷಿಸಿದ ಎನ್‌ಡಿಆರ್‌ಎಫ್

- Advertisement -
- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಪುಟ್ಟ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿನ್ನೆ ಅಪಾಯದಲ್ಲಿ ಸಿಲುಕಿದ್ದ ಬಾಲಕನನ್ನು 20 ಗಂಟೆಗಳ ಯಶಸ್ವಿ ಕಾರ್ಯಾಚರಣೆ ನಂತರ ಬಾಲಕನನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕ ಸಾತ್ವಿಕ್ ಸತೀಶ್ ಮುಜಗೊಂಡ್ ಅಳುವ ಶಬ್ದ ಕೇಳಿಸಿದ್ದು, ಆತನನ್ನು ತಕ್ಷಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೋರ್‌ವೆಲ್‌ನ 16 ಅಡಿ ಆಳದಲ್ಲಿ ಸಿಲುಕಿದ್ದ ಮಗುವನ್ನು ಸುರಕ್ಷಿತವಾಗಿ ಹೊರತರುತ್ತಿದ್ದಂತೆ ಸ್ಥಳದಲ್ಲಿ ಸಂಭ್ರಮಾಚರಣೆ ನಡೆಯಿತು. ಆತನನ್ನು ತಕ್ಷಣವೇ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯಕೀಯ ತಂಡವನ್ನು ಮೊದಲೇ ಇರಿಸಲಾಗಿತ್ತು.

ಮಗುವಿನ ರಕ್ಷಣಾ ಪ್ರಯತ್ನದಲ್ಲಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಮಗುವಿಗೆ ಉಸಿರಾಡಲು ಸಾಧ್ಯವಾಗುವಂತೆ ಪೈಪ್‌ಲೈನ್ ಮೂಲಕ ಆಮ್ಲಜನಕವನ್ನು ಪೂರೈಸಿದವು. ಇದರ ನಂತರ, ರಕ್ಷಣಾ ತಂಡವು ಬಾಲಕನನ್ನು ತಲುಪಲು ಮತ್ತು ರಕ್ಷಿಸಲು ಬೋರ್‌ವೆಲ್‌ಗೆ ಸಮಾನಾಂತರವಾಗಿ ಸರಿಸುಮಾರು 21 ಅಡಿ ಆಳದ ಗುಂಡಿ ಅಗೆಯಲು ಭಾರೀ ಗಾತ್ರದ ಯಂತ್ರಗಳನ್ನು ಬಳಸಿದರು.

ಮುಂಜಾಗ್ರತಾ ಕ್ರಮವಾಗಿ, ಚುಚ್ಚುಮದ್ದು, ಆಮ್ಲಜನಕ ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಗಳನ್ನು ಹೊಂದಿದ ವೈದ್ಯಕೀಯ ತಂಡವನ್ನು ಸ್ಥಳದಲ್ಲಿ ಇರಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಮಗುವನ್ನು ಸಾಗಿಸಲು ಆಂಬ್ಯುಲೆನ್ಸ್ ಅನ್ನು ಸಜ್ಜುಗೊಳಿಸಲಾಗಿತ್ತು. ಅಗತ್ಯವಿದ್ದರೆ, ಹೆಚ್ಚಿನ ಆರೈಕೆಗಾಗಿ ಮಗುವನ್ನು ಉನ್ನತ ಮಟ್ಟದ ವೈದ್ಯಕೀಯ ಸೌಲಭ್ಯಕ್ಕೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ಸಂತಸ ವ್ಯಕ್ತಪಡಿಸಿದ ಸಿಎಂ

ಬಾಲಕನನ್ನು ರಕ್ಷಿಸಿದ ಸುದ್ದಿ ಹೊರಬರುತ್ತಿದ್ದಾಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ‘ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ-ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಫಲಿಸಿದೆ! ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್‌ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್‌ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ;
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...