Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...