Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...