Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...