Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...