Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...