Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...