Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...