Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...