Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...