Homeಕರ್ನಾಟಕಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ - ಕೆ.ನೀಲಾ

ಆಹಾರ ಸಂಘರ್ಷಗಳ ಹಿಂದೆ ವೈದಿಕರ ಹುನ್ನಾರವಿರುತ್ತದೆ – ಕೆ.ನೀಲಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ಆಹಾರ ಕ್ರಮದ ಬಗ್ಗೆ ಚರ್ಚೆ ಹೊಸದೂ ಅಲ್ಲ, ಅಚ್ಚರಿ ಪಡುವಂಥದ್ದೂ ಅಲ್ಲ. ಇದರ ಹಿಂದೆ ಜನರನ್ನು ವಿಂಗಡಿಸುವ, ಶ್ರಮಿಕ ವರ್ಗವನ್ನು ಟೊಳ್ಳಾಗಿಸುವ ಸಂಕೀರ್ಣ ಐತಿಹಾಸಿಕ ಜಾಲ ಇರೋದ್ರಿಂದ ಇದು ಆಗಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತೆ. ವೈದಿಕ ಆಹಾರ ಪರಂಪರೆ ಮತ್ತು ಶ್ರಮಿಕ ಆಹಾರ ಪರಂಪರೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಬಂದಿದೆ.

ವಚನಕಾರರ ಕಾಲಘಟ್ಟದಲ್ಲೂ ಎದುರಾದ ಈ ಆಹಾರ ಸಾಂಸ್ಕೃತಿಕ ಮುಖಾಮುಖಿಯ ಸ್ಪಷ್ಟ ದೃಷ್ಟಾಂತ, ಕಣ್ಣೋಟ ನಮಗೆ ಹರಿಹರ ರಗಳೆಯ ಉಳ್ಳಿ ಪರ್ವದಲ್ಲಿ ಕಾಣಸಿಗುತ್ತದೆ. ಒಮ್ಮೆ ಮಹಾಮನೆಯಲ್ಲಿ ದಾಸೋಹದ ತಯಾರಿ ನಡೆಯುತ್ತಿದ್ದಾಗ ತಳಸಮುದಾಯದ ಆಹಾರ ಪದಾರ್ಥಗಳಾದ ಈರುಳ್ಳಿ, ಬೆಳ್ಳುಳ್ಳಿ, ಹಸೀಶುಂಠಿ ಉಪಯೋಗಿಸಿ ಆಹಾರ ಸಿದ್ದಪಡಿಸಲಾಗುತ್ತಿರುತ್ತೆ. ಅದೇ ಮಾರ್ಗವಾಗಿ ಬರುವ ಬಸವಣ್ಣ ಆ ವಾಸನೆ ಅಹಿತವೆನಿಸಿ, ಮೂಗು ಮುಚ್ಚಿಕೊಳ್ಳುತ್ತಾರೆ. ಬಿಸಿಲಿನಲ್ಲಿ ದುಡಿಯುವ ಶ್ರಮಜೀವಿಗಳಿಗೆ ಪೌಷ್ಠಿಕತೆ ತಂದುಕೊಡುವ ತಮ್ಮ ಆಹಾರದ ಬಗ್ಗೆ ಬಸವಣ್ಣ ಕೀಳಾಗಿ ಕಂಡಿದ್ದಾರೆ ಎಂದು ಕೋಪಿಸಿಕೊಳ್ಳುವ ಅಡುಗೆ ಮಾಡುತ್ತಿದ್ದ ಶರಣ, ಮಹಾಮನೆಯಿಂದ ಹೊರಟುಹೋಗುತ್ತಾರೆ. ಕೊನೆಗೆ ತನ್ನ ತಪ್ಪಿನ ಅರಿವಾದ ಬಸವಣ್ಣ, ಈರುಳ್ಳಿ ಖಾದ್ಯಗಳು, ಈರುಳ್ಳಿಯಿಂದ ಅಲಂಕರಿಸಿದ ಎತ್ತಿನಬಂಡಿಯ ಸಹಿತ ಆ ಶರಣರ ಬಳಿಹೋಗಿ ಕ್ಷಮೆ ಬೇಡುತ್ತಾರೆ. ಇದು ಆಹಾರ ಕ್ರಮದ ಬಗ್ಗೆ ಮಹಾಮನೆಯಲ್ಲಿ ತಳೆದಿದ್ದ ನಿಲುವು.

ಮಹಾಮನೆ ಎನ್ನುವುದೇ ನಿರಂತರ ಜಿಜ್ಞಾಸೆ, ಚರ್ಚೆಗಳ ಕೂಟವಾಗಿತ್ತು. ತಂತ್ರಜ್ಞಾನವೇ ಇಲ್ಲದ ಆ ಕಾಲಘಟ್ಟದಲ್ಲೂ ಶರಣರು ವೈಜ್ಞಾನಿಕ, ಜನಪರ ನಿಲುವುಗಳನ್ನು ತಳೆಯಲು ಸಾಧ್ಯವಾದದ್ದು ಅಂತಹ ಮುಕ್ತ ಸಂವಾದಗಳಿಂದ. ಅಂತಹ ಸಂವಾದ ಆಹಾರ ಕ್ರಮದಲ್ಲೂ ಏರ್ಪಟ್ಟಿತ್ತು. ಮೇಲ್ಜಾತಿಗಳಿಂದ ಬಂದ ವಚನಕಾರರು ಸಸ್ಯಾಹಾರವನ್ನು ಪ್ರತಿಪಾದಿಸಿದರೆ, ಶ್ರಮಿಕ ವರ್ಗದ ವಚನಕಾರರು ತಮ್ಮ ಮಾಂಸಾಹಾರ ಪದ್ಧತಿಯನ್ನು ಪ್ರತಿಪಾದಿಸಿಕೊಂಡಿದ್ದರು. ಅಂತಹ ಸಂವಾದದ ಅಂತಿಮ ತೀರ್ಮಾನವನ್ನು ಮೇಲೆ ಉಲ್ಲೇಖಿಸಲಾದ ದೃಷ್ಟಾಂತದಿಂದ ಅರ್ಥ ಮಾಡಿಕೊಳ್ಳಬಹುದು. ವಚನಕಾರರು ಯಾವುದೇ ಬಗೆಯ ಆಹಾರ ಪದ್ಧತಿಯ ಹೇವರಿಕೆ ಅಥವಾ ಅವೈಜ್ಞಾನಿಕ ಅಭಿಪ್ರಾಯಗಳನ್ನು ಇಟ್ಟುಕೊಂಡಿರಲಿಲ್ಲ. ಅಂತಿಮವಾಗಿ ಆಹಾರದ ಆಯ್ಕೆಯನ್ನು ಆಯಾ ಪ್ರದೇಶದ ಲಭ್ಯತೆ ಮತ್ತು ಅವಶ್ಯಕತೆಯ ಭಾಗವಾಗಿ ಅವರು ಗೌರವಿಸಿದ್ದರೇ ವಿನಾಃ ಅದನ್ನು ಮೇಲು-ಕೀಳರಿಮೆಯ ಮಾನದಂಡವಾಗಿ ಕಂಡಿರಲಿಲ್ಲ. ಬಸವಣ್ಣನವರ `ಎಡದ ಕೈಯಲ್ಲಿ……..’ ವಚನವೇ ಇದಕ್ಕೆ ಸಾಕ್ಷಿ.

ಅನುಭವ ಮಂಟಪದಲ್ಲಿ ನಡೆಯುತ್ತಿದ್ದ ಚಿಂತನಾ ಪ್ರಧಾನವಾದ ಚರ್ಚೆಗಳು ಶ್ರಮಿಕ ಲೋಕದ ಬದುಕಿಗೆ ಹತ್ತಿರ ಅನಿಸುತ್ತಿದ್ದವು, ಯಾಕೆಂದರೆ ಅವು ವೈಜ್ಞಾನಿಕ ಚಿಂತನೆಗಳಾಗಿರುತ್ತಿದ್ದವು. ಮೌಢ್ಯದಿಂದ ಹೊರಬರುವುದೇ ವಚನಸಾಹಿತ್ಯದ ಆಶಯವಾಗಿರುವುದರಿಂದ ಅಲ್ಲಿ ಆಹಾರದ ಬಗೆಗಿನ ತಾರತಮ್ಯದ ನಿಲುವನ್ನು ಹುಡುಕ ಹೊರಡುವುದೇ ಅತಾರ್ಕಿಕವಾದುದು, ಅವಾಸ್ತವಿಕವಾದುದು. ಈ ಆಹಾರ ಸಂಸ್ಕøತಿಯ ಮುಖಾಮುಖಿಯ ಹಿಂದೆ ಮತೀಯ ಅಜೆಂಡಾವಿರುತ್ತೆ. ಆಹಾರದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ, ಜನರಲ್ಲಿ ಕೀಳರಿಮೆ ಮೂಡಿಸಿ ಅವರೊಳಗೇ ತಿರಸ್ಕಾರ ಭಾವನೆ ಮೂಡಿಸುವ ವೈದಿಕಾ ಚಿಂತನಾ ಕ್ರಮ ಕೆಲಸ ಮಾಡಿರುತ್ತದೆ. ವೈದಿಕ ಹುನ್ನಾರಗಳನ್ನು ಖಂಡತುಂಡವಾಗಿ ಧಿಕ್ಕರಿಸುವ ಸಲುವಾಗಿ ಹುಟ್ಟಿಕೊಂಡ ವಚನಕ್ರಾಂತಿ, ಆಹಾರದ ಕುರಿತು ತಾರತಮ್ಯ ಹೊಂದಿತ್ತೆನ್ನುವುದೇ ಬಾಲಿಶವಾದುದು.

– ಕೆ.ನೀಲಾ, ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...