Homeಕರ್ನಾಟಕ17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

- Advertisement -
- Advertisement -

17 > 105 ! ಮ್ಯಾಥ್ಸ್ ಆಫ್ ಡೆಮಾಕ್ರಸಿ!
17 ಶಾಸಕರ ಅನರ್ಹತೆ ಡೆಮಾಕ್ರಸಿಗೆ ಘನತೆ
ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

ರಾಜಕೀಯದಲ್ಲಿ ಒಂದು ಮಟ್ಟಿಗಿನ ನೈತಿಕತೆಯನ್ನು ಬಯಸುವ ರಾಜ್ಯದ ಜನರೆಲ್ಲ 17 ಶಾಸಕರ ಅನರ್ಹತೆಯ ಸಂಗತಿಯನ್ನು ಬೆಂಬಲಿಸಿದ್ದಾರೆ. ಅವರ ಆಶಯಕ್ಕೆ ಅನುಗುಣವಾಗಿಯೇ ಸ್ಪೀಕರ್ ಅವರ ನಿರ್ಧಾರವೂ ಬಂದಿದೆ ಅನಿಸುತ್ತಿದೆ ಎಂದು ದಿಟ್ಟವಾಗಿ ಹೇಳಲೂ ಆಗದ ಕಾಲದಲ್ಲಿ ನಾವಿದ್ದೇವೆ!

ಆದರೆ, ಒಬ್ಬ ಪ್ರಜೆಯಾಗಿ, ಮತದಾರನಾಗಿ ಹೇಳುವುದಾದರೆ ಹೊಣೆಗೇಡಿ 17 ಶಾಸಕರಿಗೆ ತಕ್ಕ ಶಾಸ್ತಿಯೇ ಆಗಿದೆ. ಹೀಗೆ ಪಾಠವು ದಿಟ್ಟವಾಗಿ ಹೇಳದೇ ಇದ್ದರೆ, ತಮ್ಮ ಮಿತಿಗಳಲ್ಲೇ ಅಂತಹ ಕ್ರಮಕ್ಕೆ ಮುಂದಾದ ಸ್ಪೀಕರ್‍ಗೆ ಅವಮಾನಿಸಿದಂತೆ.

2008ರಲ್ಲಿ, ಪಕ್ಷಾಂತರ ನಿಷೇಧ ಕಾಯ್ದೆ, ಸಂವಿಧಾನದ 10ನೇ ಶೆಡ್ಯೂಲ್-ಎಲ್ಲವನ್ನೂ ಮಣ್ಣು ಮಾಡಿ ಅಧಿಕಾರ ಹಿಡಿಯಬಹುದು ಎಂದು ಹೊಸ ‘ಮಾದರಿ’ಯೊಂದನ್ನು ದೇಶದ ಮುಂದಿಟ್ಟ, ಆ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಅದನ್ನು ಎತ್ತಿ ಹಿಡಿಯುತ್ತಿದ್ದ ದೇಶದ ಉನ್ನತ ನ್ಯಾಯಾಲಯಗಳನ್ನೂ ಕಾಲಕಸ ಮಾಡಿದ ಕರ್ನಾಟಕ ರಾಜ್ಯದ ಬಿಜೆಪಿಯೀಗ ಅಂಥದ್ದೇ ‘ಮಾದರಿ’ಯ ಪ್ರಯೋಗದಲ್ಲಿ ಆರೂವರೆ ವರ್ಷಗಳ ನಂತರ ಅಧಿಕಾರ ಹಿಡಿದಿದೆ.

ಆದರೆ ಈ ಸಲ ಅಂತಹ ಅನೈತಿಕ ಪ್ರಯೋಗಕ್ಕೇ ಸವಾಲು ಎನಿಸುವಂತಹ ನೈತಿಕ ನಿರ್ಧಾರಗಳು ಹಲವು ಮೂಲಗಳಿಂದ ಹೊರಬಿದ್ದಿವೆ. ಮುಂದೆ ಈ ವಿಚಾರ ಸುಪ್ರೀಂ ಕೋರ್ಟಿಗೆ ಹೋಗಬಹುದು ಎಂಬ ಅರಿವಿದ್ದರೂ, ಸ್ಪೀಕರ್ ರಮೇಶಕುಮಾರ್ ಅವರು, ‘’ಅತೃಪ್ತ” ಎಂಬ ಹಣೆಪಟ್ಟಿ ಅಂಟಿಸಿಕೊಂಡು ಕ್ಷೇತ್ರ ಮತ್ತು ರಾಜ್ಯಗಳಿಂದ ಪಲಾಯನ ಮಾಡಿದ್ದ, ಸಾಂವಿಧಾನಿಕ ಮತ್ತು ಪ್ರಜಾತಾಂತ್ರಿಕ ಆಶಯಗಳನ್ನೇ ಗೇಲಿ ಮಾಡುವಂತೆ ಟಿವಿ ಚಾನೆಲ್ಲುಗಳಿಂದ ವಿಜೃಂಭಿಸಲ್ಪಡುತ್ತಿದ್ದ 17 ಹೊಣೆಗೇಡಿ ಶಾಸಕರನ್ನು ಅನರ್ಹಗೊಳಿಸುವ ಮೂಲಕ, ದೇಶದ ಎಲ್ಲೆಡೆ ಸಾಂಕ್ರಾಮಿಕ ರೋಗದಂತೆ ಹಬ್ಬುತ್ತಿರುವ ಅಸಹ್ಯ ರಾಜಕಾರಣಕ್ಕೆ ಒಂದು ಏಟು ನೀಡಿದ್ದಾರೆ.

ಅನರ್ಹತೆ: ಮುಂದೇನು?
ಸದ್ಯ ಶೆಡ್ಯೂಲ್ 10ರ ತೀರಾ ಸೂಕ್ಷ್ಮಾತಿಸೂಕ್ಷ್ಮ ಅಂಶಗಳನ್ನು ಪರಿಗಣಿಸಿಯೇ ಸ್ಪೀಕರ್ ರಮೇಶಕುಮಾರ್ 17 ಶಾಸಕರನ್ನು ಅನರ್ಹ ಮಾಡಿದ್ದಾರೆ. ಸದ್ಯಕ್ಕೆ ಅವರು, ಈ ಸದನದ, 15ನೇ ಅಸೆಂಬ್ಲಿ ಮುಗಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಸುಪ್ರೀಂ ಕೋರ್ಟು ಮೊರೆ ಹೋಗಿರುವ ಶಾಸಕರಿಗೆ ಅಲ್ಲೂ ನಿರಾಶೆ ಕಾದಂತಿದೆ. ಈ ಹಿಂದೆ, ಹೆಚ್ಚೂಕಡಿಮೆ ಇಂಥದ್ದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತಮಿಳುನಾಡಿನ 18 ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿತ್ತು. ಈ ಅಂತಿಮ ತೀರ್ಪು ಬರಲು ಒಂದು ವರ್ಷ ಹಿಡಿದಿತ್ತು!

ಅಸಲಿ ವಿಷಯ
ಈಗ ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ, ಅದೀಗ ಪ್ರಜಾಸತ್ತಾತ್ಮಕ ವಿಷಯ ಎಂದು ಒಪ್ಪಿಕೊಳ್ಳಲು ಶುರು ಮಾಡಿಬಿಟ್ಟರೆ ಏನಾಗುತ್ತದೆ? ಇಲ್ಲೇನೂ ಆಗಲಿಕ್ಕಿಲ್ಲ. ಆದರೆ, ದೇಶದ ತುಂಬ ಹೀಗೇ ಪ್ರತಿಪಕ್ಷಗಳನ್ನೇ ನಾಶ ಮಾಡುವ ಅಜೆಂಡಾದೊಂದಿಗೆ ಒಂದು ದುಷ್ಟಶಕ್ತಿ ಹವಣಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಬೆಂಬಲವೂ ಇದೆ ಎಂಬುದೆಲ್ಲ ಗೊತ್ತಾದ ಮೇಲೂ, ‘ಕರ್ನಾಟಕದಲ್ಲಿ ಈಗ ವಿಶ್ವಾಸಮತ ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ’ ಎಂದು ಒಪ್ಪಿಕೊಂಡರೆ ಅದು ಆತ್ಮವಂಚನೆಯೇ, ಅದೆಷ್ಟರ ಮಟ್ಟಿಗಿನ ಆತ್ಮವಂಚನೆ ಎಂದರೆ ಈ ದೇಶದಲ್ಲಿ ಇನ್ನೂ ಪರಿಪೂರ್ಣ ಪ್ರಜಾಪ್ರಭುತ್ವ ಜೀವಂತ ಇದೆ ಎಂದು ಹಲುಬುವ ಮನಸ್ಸುಗಳು ತಮಗೆ ತಾವೇ ದ್ರೋಹ ಬಗೆದುಕೊಂಡಂತೆ…

ಸುಪ್ರೀಂಕೋರ್ಟಿನಲ್ಲಿ 17 ‘ಅನರ್ಹ ಶಾಸಕರು’ ಅರ್ಜಿ ಸಲ್ಲಿಸುತ್ತಾರೆ. ಅಲ್ಲಿ ಗೆಲ್ಲುವುದೇ ಅವರಿಗೆ ಡೌಟು! ಆ ಕಾರಣಕ್ಕೇ ಈಗಾಗಲೇ ಕೆಲವು ಮನೆಹಾಳ ಅನರ್ಹರು ನಿವೃತ್ತಿ ಘೋಷಿಸಿದ್ದಾರೆ. ಇವರೆಲ್ಲ ತಮ್ಮ ಮಕ್ಕಳಿಗೆ ಅಥವಾ ಪತ್ನಿಗೆ ಸಚಿವ ಸ್ಥಾನ ಕೊಡಿ ಎಂದರೆ ಯಡಿಯೂರಪ್ಪ ಏನು ಮಾಡುತ್ತಾರೆ? ಕೊಡಲೇಬೇಕು ಅಲ್ಲವೇ? ಅಲ್ಲಿಗೇ ಮತ್ತೊಮ್ಮೆ ಮತ್ತೊಂದು ವಿಧದ ಆಪರೇಷನ್ ಕಮಲ ಶುರುವಾದಂತೆ!

ಈ ಸರ್ಕಾರ, ಮುಂದೇನಾಗುತ್ತೆ?
ಸರಳ ಪ್ರಶ್ನೆ. ಆರು ತಿಂಗಳು ಬೀಳಲ್ಲ. ಈಗಿನ ಕೇಂದ್ರದ ಬಲ ಮತ್ತು ಬಿಜೆಪಿಯ ಹಣಬಲ ನೋಡಿದರೆ ಬೀಳೋದೇ ಇಲ್ಲ. ಆದರೂ. ಇಲ್ಲಿ ವಿಪಕ್ಷಗಳು ಒಂದು ದೊಡ್ಡ ಹೋರಾಟಕ್ಕೆ ಅಣಿಯಾದರೆ ಸ್ವಲ್ಪ ವ್ಯತ್ಯಾಸ ಆಗಬಹುದಷ್ಟೇ. ಈ ಮೂರ್ಖರಲ್ಲಿ ಅಂತಹ ದೃಢತೆ ಇಲ್ಲವೇ ಇಲ್ಲ ಅಲ್ಲವೇ?

ಹಾಗಾಗಿ, ಈ ಸರ್ಕಾರವನ್ನು 2023ರವರೆಗೂ ಕರೆದೊಯ್ಯುವ ಜವಾಬ್ದಾರಿಯನ್ನು ಅಮಿತ್ ಶಾ ಹೊತ್ತಿದ್ದಾರೆ. ಗೋವಾದಲ್ಲಿ ಕೇವಲ 12 ಬಿಜೆಪಿ ಶಾಸಕರಿದ್ದೂ ಅಲ್ಲಿನ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ! ಇಲ್ಲೂ ಅದರ ಪ್ರಯೋಗ ಮುಂದುವರೆಯುತ್ತದೆ ಅಷ್ಟೇ!

ಮೀಡಿಯಾ: ಈಗ ವಿಪಕ್ಷ ವಿರುದ್ಧ!
ಇಲ್ಲಿ ಪ್ರಜಾಪ್ರಭುತ್ವ ಕೊಲ್ಲುವ ಕಾನೂನುಬಾಹಿರ ಕೆಲಸಗಳಿಗೆಲ್ಲ ಮಾನ್ಯತೆ ತಂದುಕೊಟ್ಟಿರುವುದೇ ಈ ಮೀಡಿಯಾ, ಅದರಲ್ಲೂ ದೃಶ್ಯ ಮೀಡಿಯಾ. ಇಲ್ಲಿವರೆಗೂ ಸರ್ಕಾರವನ್ನು ಟೀಕಿಸುತ್ತಿದ್ದ ಅವು ಇನ್ಮುಂದೆ ವಿಪಕ್ಷಗಳನ್ನು ಟೀಕಿಸಲು ಶುರು ಮಾಡಲಿವೆ!

ಇಲ್ಲಿವರೆಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ವಿಪರೀತ ಎನಿಸುವಷ್ಟು ಟೀಕೆ, ಅಪಪ್ರಚಾರ ಮಾಡತೊಡಗಿದ ಮಾಧ್ಯಮಗಳ ಕಾರ್ಯವನ್ನು ಮೆಚ್ಚೋಣ. ಮಾಧ್ಯಮ ಯಾವತ್ತಿಗೂ ವಿಪಕ್ಷ ಎಂಬ ಹಿನ್ನೆಲೆ ಇಟ್ಟುಕೊಂಡರೆ ಅದು ಸರಿಯೇ ಅನಿಸಬಹುದು. ಆದರೆ, ಈಗ ವಿಶ್ವಾಸಮತದ ಪ್ರಕ್ರಿಯೆ ಶುರು ಆದಾಗಿಂದ ಇವೆಲ್ಲ ಪುಟ್ಟಾಪೂರಾ ‘ಅತೃಪ್ತರ’ ಪರ ಬ್ಯಾಟಿಂಗ್ ಮಾಡಿದ್ದು ರಾಜ್ಯಕ್ಕೇ ಗೊತ್ತಿದೆ.

ಸುತ್ತು ಬಳಸಿ ಬೇಡವೇ ಬೇಡ, ರಾಜ್ಯದ ಬಹುಪಾಲು ದೃಶ್ಯ ಮಾಧ್ಯಮಗಳು ಬಿಜೆಪಿಗೆ ಮಾರಿಕೊಂಡಿವೆ. ಹೀಗಾಗಿ ಅವುಗಳ ಮುಂದಿನ ಟಾರ್ಗೆಟ್ ಆಡಳಿತ ಪಕ್ಷವಲ್ಲ, ವಿರೋಧ ಪಕ್ಷಗಳೇ. ಈ ಎರಡು ದಿನಗಳ ಅವುಗಳ ವರದಿ, ವಿಶ್ಲೇಷಣೆ ನೋಡಿದರೆ ಸಾಕು, ಇದೆಲ್ಲ ಅರ್ಥವಾಗುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...