Homeಕರ್ನಾಟಕ17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

- Advertisement -
- Advertisement -

17 > 105 ! ಮ್ಯಾಥ್ಸ್ ಆಫ್ ಡೆಮಾಕ್ರಸಿ!
17 ಶಾಸಕರ ಅನರ್ಹತೆ ಡೆಮಾಕ್ರಸಿಗೆ ಘನತೆ
ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

ರಾಜಕೀಯದಲ್ಲಿ ಒಂದು ಮಟ್ಟಿಗಿನ ನೈತಿಕತೆಯನ್ನು ಬಯಸುವ ರಾಜ್ಯದ ಜನರೆಲ್ಲ 17 ಶಾಸಕರ ಅನರ್ಹತೆಯ ಸಂಗತಿಯನ್ನು ಬೆಂಬಲಿಸಿದ್ದಾರೆ. ಅವರ ಆಶಯಕ್ಕೆ ಅನುಗುಣವಾಗಿಯೇ ಸ್ಪೀಕರ್ ಅವರ ನಿರ್ಧಾರವೂ ಬಂದಿದೆ ಅನಿಸುತ್ತಿದೆ ಎಂದು ದಿಟ್ಟವಾಗಿ ಹೇಳಲೂ ಆಗದ ಕಾಲದಲ್ಲಿ ನಾವಿದ್ದೇವೆ!

ಆದರೆ, ಒಬ್ಬ ಪ್ರಜೆಯಾಗಿ, ಮತದಾರನಾಗಿ ಹೇಳುವುದಾದರೆ ಹೊಣೆಗೇಡಿ 17 ಶಾಸಕರಿಗೆ ತಕ್ಕ ಶಾಸ್ತಿಯೇ ಆಗಿದೆ. ಹೀಗೆ ಪಾಠವು ದಿಟ್ಟವಾಗಿ ಹೇಳದೇ ಇದ್ದರೆ, ತಮ್ಮ ಮಿತಿಗಳಲ್ಲೇ ಅಂತಹ ಕ್ರಮಕ್ಕೆ ಮುಂದಾದ ಸ್ಪೀಕರ್‍ಗೆ ಅವಮಾನಿಸಿದಂತೆ.

2008ರಲ್ಲಿ, ಪಕ್ಷಾಂತರ ನಿಷೇಧ ಕಾಯ್ದೆ, ಸಂವಿಧಾನದ 10ನೇ ಶೆಡ್ಯೂಲ್-ಎಲ್ಲವನ್ನೂ ಮಣ್ಣು ಮಾಡಿ ಅಧಿಕಾರ ಹಿಡಿಯಬಹುದು ಎಂದು ಹೊಸ ‘ಮಾದರಿ’ಯೊಂದನ್ನು ದೇಶದ ಮುಂದಿಟ್ಟ, ಆ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಅದನ್ನು ಎತ್ತಿ ಹಿಡಿಯುತ್ತಿದ್ದ ದೇಶದ ಉನ್ನತ ನ್ಯಾಯಾಲಯಗಳನ್ನೂ ಕಾಲಕಸ ಮಾಡಿದ ಕರ್ನಾಟಕ ರಾಜ್ಯದ ಬಿಜೆಪಿಯೀಗ ಅಂಥದ್ದೇ ‘ಮಾದರಿ’ಯ ಪ್ರಯೋಗದಲ್ಲಿ ಆರೂವರೆ ವರ್ಷಗಳ ನಂತರ ಅಧಿಕಾರ ಹಿಡಿದಿದೆ.

ಆದರೆ ಈ ಸಲ ಅಂತಹ ಅನೈತಿಕ ಪ್ರಯೋಗಕ್ಕೇ ಸವಾಲು ಎನಿಸುವಂತಹ ನೈತಿಕ ನಿರ್ಧಾರಗಳು ಹಲವು ಮೂಲಗಳಿಂದ ಹೊರಬಿದ್ದಿವೆ. ಮುಂದೆ ಈ ವಿಚಾರ ಸುಪ್ರೀಂ ಕೋರ್ಟಿಗೆ ಹೋಗಬಹುದು ಎಂಬ ಅರಿವಿದ್ದರೂ, ಸ್ಪೀಕರ್ ರಮೇಶಕುಮಾರ್ ಅವರು, ‘’ಅತೃಪ್ತ” ಎಂಬ ಹಣೆಪಟ್ಟಿ ಅಂಟಿಸಿಕೊಂಡು ಕ್ಷೇತ್ರ ಮತ್ತು ರಾಜ್ಯಗಳಿಂದ ಪಲಾಯನ ಮಾಡಿದ್ದ, ಸಾಂವಿಧಾನಿಕ ಮತ್ತು ಪ್ರಜಾತಾಂತ್ರಿಕ ಆಶಯಗಳನ್ನೇ ಗೇಲಿ ಮಾಡುವಂತೆ ಟಿವಿ ಚಾನೆಲ್ಲುಗಳಿಂದ ವಿಜೃಂಭಿಸಲ್ಪಡುತ್ತಿದ್ದ 17 ಹೊಣೆಗೇಡಿ ಶಾಸಕರನ್ನು ಅನರ್ಹಗೊಳಿಸುವ ಮೂಲಕ, ದೇಶದ ಎಲ್ಲೆಡೆ ಸಾಂಕ್ರಾಮಿಕ ರೋಗದಂತೆ ಹಬ್ಬುತ್ತಿರುವ ಅಸಹ್ಯ ರಾಜಕಾರಣಕ್ಕೆ ಒಂದು ಏಟು ನೀಡಿದ್ದಾರೆ.

ಅನರ್ಹತೆ: ಮುಂದೇನು?
ಸದ್ಯ ಶೆಡ್ಯೂಲ್ 10ರ ತೀರಾ ಸೂಕ್ಷ್ಮಾತಿಸೂಕ್ಷ್ಮ ಅಂಶಗಳನ್ನು ಪರಿಗಣಿಸಿಯೇ ಸ್ಪೀಕರ್ ರಮೇಶಕುಮಾರ್ 17 ಶಾಸಕರನ್ನು ಅನರ್ಹ ಮಾಡಿದ್ದಾರೆ. ಸದ್ಯಕ್ಕೆ ಅವರು, ಈ ಸದನದ, 15ನೇ ಅಸೆಂಬ್ಲಿ ಮುಗಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಸುಪ್ರೀಂ ಕೋರ್ಟು ಮೊರೆ ಹೋಗಿರುವ ಶಾಸಕರಿಗೆ ಅಲ್ಲೂ ನಿರಾಶೆ ಕಾದಂತಿದೆ. ಈ ಹಿಂದೆ, ಹೆಚ್ಚೂಕಡಿಮೆ ಇಂಥದ್ದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತಮಿಳುನಾಡಿನ 18 ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿತ್ತು. ಈ ಅಂತಿಮ ತೀರ್ಪು ಬರಲು ಒಂದು ವರ್ಷ ಹಿಡಿದಿತ್ತು!

ಅಸಲಿ ವಿಷಯ
ಈಗ ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ, ಅದೀಗ ಪ್ರಜಾಸತ್ತಾತ್ಮಕ ವಿಷಯ ಎಂದು ಒಪ್ಪಿಕೊಳ್ಳಲು ಶುರು ಮಾಡಿಬಿಟ್ಟರೆ ಏನಾಗುತ್ತದೆ? ಇಲ್ಲೇನೂ ಆಗಲಿಕ್ಕಿಲ್ಲ. ಆದರೆ, ದೇಶದ ತುಂಬ ಹೀಗೇ ಪ್ರತಿಪಕ್ಷಗಳನ್ನೇ ನಾಶ ಮಾಡುವ ಅಜೆಂಡಾದೊಂದಿಗೆ ಒಂದು ದುಷ್ಟಶಕ್ತಿ ಹವಣಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಬೆಂಬಲವೂ ಇದೆ ಎಂಬುದೆಲ್ಲ ಗೊತ್ತಾದ ಮೇಲೂ, ‘ಕರ್ನಾಟಕದಲ್ಲಿ ಈಗ ವಿಶ್ವಾಸಮತ ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ’ ಎಂದು ಒಪ್ಪಿಕೊಂಡರೆ ಅದು ಆತ್ಮವಂಚನೆಯೇ, ಅದೆಷ್ಟರ ಮಟ್ಟಿಗಿನ ಆತ್ಮವಂಚನೆ ಎಂದರೆ ಈ ದೇಶದಲ್ಲಿ ಇನ್ನೂ ಪರಿಪೂರ್ಣ ಪ್ರಜಾಪ್ರಭುತ್ವ ಜೀವಂತ ಇದೆ ಎಂದು ಹಲುಬುವ ಮನಸ್ಸುಗಳು ತಮಗೆ ತಾವೇ ದ್ರೋಹ ಬಗೆದುಕೊಂಡಂತೆ…

ಸುಪ್ರೀಂಕೋರ್ಟಿನಲ್ಲಿ 17 ‘ಅನರ್ಹ ಶಾಸಕರು’ ಅರ್ಜಿ ಸಲ್ಲಿಸುತ್ತಾರೆ. ಅಲ್ಲಿ ಗೆಲ್ಲುವುದೇ ಅವರಿಗೆ ಡೌಟು! ಆ ಕಾರಣಕ್ಕೇ ಈಗಾಗಲೇ ಕೆಲವು ಮನೆಹಾಳ ಅನರ್ಹರು ನಿವೃತ್ತಿ ಘೋಷಿಸಿದ್ದಾರೆ. ಇವರೆಲ್ಲ ತಮ್ಮ ಮಕ್ಕಳಿಗೆ ಅಥವಾ ಪತ್ನಿಗೆ ಸಚಿವ ಸ್ಥಾನ ಕೊಡಿ ಎಂದರೆ ಯಡಿಯೂರಪ್ಪ ಏನು ಮಾಡುತ್ತಾರೆ? ಕೊಡಲೇಬೇಕು ಅಲ್ಲವೇ? ಅಲ್ಲಿಗೇ ಮತ್ತೊಮ್ಮೆ ಮತ್ತೊಂದು ವಿಧದ ಆಪರೇಷನ್ ಕಮಲ ಶುರುವಾದಂತೆ!

ಈ ಸರ್ಕಾರ, ಮುಂದೇನಾಗುತ್ತೆ?
ಸರಳ ಪ್ರಶ್ನೆ. ಆರು ತಿಂಗಳು ಬೀಳಲ್ಲ. ಈಗಿನ ಕೇಂದ್ರದ ಬಲ ಮತ್ತು ಬಿಜೆಪಿಯ ಹಣಬಲ ನೋಡಿದರೆ ಬೀಳೋದೇ ಇಲ್ಲ. ಆದರೂ. ಇಲ್ಲಿ ವಿಪಕ್ಷಗಳು ಒಂದು ದೊಡ್ಡ ಹೋರಾಟಕ್ಕೆ ಅಣಿಯಾದರೆ ಸ್ವಲ್ಪ ವ್ಯತ್ಯಾಸ ಆಗಬಹುದಷ್ಟೇ. ಈ ಮೂರ್ಖರಲ್ಲಿ ಅಂತಹ ದೃಢತೆ ಇಲ್ಲವೇ ಇಲ್ಲ ಅಲ್ಲವೇ?

ಹಾಗಾಗಿ, ಈ ಸರ್ಕಾರವನ್ನು 2023ರವರೆಗೂ ಕರೆದೊಯ್ಯುವ ಜವಾಬ್ದಾರಿಯನ್ನು ಅಮಿತ್ ಶಾ ಹೊತ್ತಿದ್ದಾರೆ. ಗೋವಾದಲ್ಲಿ ಕೇವಲ 12 ಬಿಜೆಪಿ ಶಾಸಕರಿದ್ದೂ ಅಲ್ಲಿನ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ! ಇಲ್ಲೂ ಅದರ ಪ್ರಯೋಗ ಮುಂದುವರೆಯುತ್ತದೆ ಅಷ್ಟೇ!

ಮೀಡಿಯಾ: ಈಗ ವಿಪಕ್ಷ ವಿರುದ್ಧ!
ಇಲ್ಲಿ ಪ್ರಜಾಪ್ರಭುತ್ವ ಕೊಲ್ಲುವ ಕಾನೂನುಬಾಹಿರ ಕೆಲಸಗಳಿಗೆಲ್ಲ ಮಾನ್ಯತೆ ತಂದುಕೊಟ್ಟಿರುವುದೇ ಈ ಮೀಡಿಯಾ, ಅದರಲ್ಲೂ ದೃಶ್ಯ ಮೀಡಿಯಾ. ಇಲ್ಲಿವರೆಗೂ ಸರ್ಕಾರವನ್ನು ಟೀಕಿಸುತ್ತಿದ್ದ ಅವು ಇನ್ಮುಂದೆ ವಿಪಕ್ಷಗಳನ್ನು ಟೀಕಿಸಲು ಶುರು ಮಾಡಲಿವೆ!

ಇಲ್ಲಿವರೆಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ವಿಪರೀತ ಎನಿಸುವಷ್ಟು ಟೀಕೆ, ಅಪಪ್ರಚಾರ ಮಾಡತೊಡಗಿದ ಮಾಧ್ಯಮಗಳ ಕಾರ್ಯವನ್ನು ಮೆಚ್ಚೋಣ. ಮಾಧ್ಯಮ ಯಾವತ್ತಿಗೂ ವಿಪಕ್ಷ ಎಂಬ ಹಿನ್ನೆಲೆ ಇಟ್ಟುಕೊಂಡರೆ ಅದು ಸರಿಯೇ ಅನಿಸಬಹುದು. ಆದರೆ, ಈಗ ವಿಶ್ವಾಸಮತದ ಪ್ರಕ್ರಿಯೆ ಶುರು ಆದಾಗಿಂದ ಇವೆಲ್ಲ ಪುಟ್ಟಾಪೂರಾ ‘ಅತೃಪ್ತರ’ ಪರ ಬ್ಯಾಟಿಂಗ್ ಮಾಡಿದ್ದು ರಾಜ್ಯಕ್ಕೇ ಗೊತ್ತಿದೆ.

ಸುತ್ತು ಬಳಸಿ ಬೇಡವೇ ಬೇಡ, ರಾಜ್ಯದ ಬಹುಪಾಲು ದೃಶ್ಯ ಮಾಧ್ಯಮಗಳು ಬಿಜೆಪಿಗೆ ಮಾರಿಕೊಂಡಿವೆ. ಹೀಗಾಗಿ ಅವುಗಳ ಮುಂದಿನ ಟಾರ್ಗೆಟ್ ಆಡಳಿತ ಪಕ್ಷವಲ್ಲ, ವಿರೋಧ ಪಕ್ಷಗಳೇ. ಈ ಎರಡು ದಿನಗಳ ಅವುಗಳ ವರದಿ, ವಿಶ್ಲೇಷಣೆ ನೋಡಿದರೆ ಸಾಕು, ಇದೆಲ್ಲ ಅರ್ಥವಾಗುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...