Homeಕರ್ನಾಟಕ17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

17 ಶಾಸಕರ ಅನರ್ಹತೆ, ಡೆಮಾಕ್ರಸಿಗೆ ಘನತೆ. ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

- Advertisement -
- Advertisement -

17 > 105 ! ಮ್ಯಾಥ್ಸ್ ಆಫ್ ಡೆಮಾಕ್ರಸಿ!
17 ಶಾಸಕರ ಅನರ್ಹತೆ ಡೆಮಾಕ್ರಸಿಗೆ ಘನತೆ
ಅದೇ ಹೊಸ ಸರ್ಕಾರಕ್ಕೆ ಮಾನ್ಯತೆ!

ರಾಜಕೀಯದಲ್ಲಿ ಒಂದು ಮಟ್ಟಿಗಿನ ನೈತಿಕತೆಯನ್ನು ಬಯಸುವ ರಾಜ್ಯದ ಜನರೆಲ್ಲ 17 ಶಾಸಕರ ಅನರ್ಹತೆಯ ಸಂಗತಿಯನ್ನು ಬೆಂಬಲಿಸಿದ್ದಾರೆ. ಅವರ ಆಶಯಕ್ಕೆ ಅನುಗುಣವಾಗಿಯೇ ಸ್ಪೀಕರ್ ಅವರ ನಿರ್ಧಾರವೂ ಬಂದಿದೆ ಅನಿಸುತ್ತಿದೆ ಎಂದು ದಿಟ್ಟವಾಗಿ ಹೇಳಲೂ ಆಗದ ಕಾಲದಲ್ಲಿ ನಾವಿದ್ದೇವೆ!

ಆದರೆ, ಒಬ್ಬ ಪ್ರಜೆಯಾಗಿ, ಮತದಾರನಾಗಿ ಹೇಳುವುದಾದರೆ ಹೊಣೆಗೇಡಿ 17 ಶಾಸಕರಿಗೆ ತಕ್ಕ ಶಾಸ್ತಿಯೇ ಆಗಿದೆ. ಹೀಗೆ ಪಾಠವು ದಿಟ್ಟವಾಗಿ ಹೇಳದೇ ಇದ್ದರೆ, ತಮ್ಮ ಮಿತಿಗಳಲ್ಲೇ ಅಂತಹ ಕ್ರಮಕ್ಕೆ ಮುಂದಾದ ಸ್ಪೀಕರ್‍ಗೆ ಅವಮಾನಿಸಿದಂತೆ.

2008ರಲ್ಲಿ, ಪಕ್ಷಾಂತರ ನಿಷೇಧ ಕಾಯ್ದೆ, ಸಂವಿಧಾನದ 10ನೇ ಶೆಡ್ಯೂಲ್-ಎಲ್ಲವನ್ನೂ ಮಣ್ಣು ಮಾಡಿ ಅಧಿಕಾರ ಹಿಡಿಯಬಹುದು ಎಂದು ಹೊಸ ‘ಮಾದರಿ’ಯೊಂದನ್ನು ದೇಶದ ಮುಂದಿಟ್ಟ, ಆ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಅದನ್ನು ಎತ್ತಿ ಹಿಡಿಯುತ್ತಿದ್ದ ದೇಶದ ಉನ್ನತ ನ್ಯಾಯಾಲಯಗಳನ್ನೂ ಕಾಲಕಸ ಮಾಡಿದ ಕರ್ನಾಟಕ ರಾಜ್ಯದ ಬಿಜೆಪಿಯೀಗ ಅಂಥದ್ದೇ ‘ಮಾದರಿ’ಯ ಪ್ರಯೋಗದಲ್ಲಿ ಆರೂವರೆ ವರ್ಷಗಳ ನಂತರ ಅಧಿಕಾರ ಹಿಡಿದಿದೆ.

ಆದರೆ ಈ ಸಲ ಅಂತಹ ಅನೈತಿಕ ಪ್ರಯೋಗಕ್ಕೇ ಸವಾಲು ಎನಿಸುವಂತಹ ನೈತಿಕ ನಿರ್ಧಾರಗಳು ಹಲವು ಮೂಲಗಳಿಂದ ಹೊರಬಿದ್ದಿವೆ. ಮುಂದೆ ಈ ವಿಚಾರ ಸುಪ್ರೀಂ ಕೋರ್ಟಿಗೆ ಹೋಗಬಹುದು ಎಂಬ ಅರಿವಿದ್ದರೂ, ಸ್ಪೀಕರ್ ರಮೇಶಕುಮಾರ್ ಅವರು, ‘’ಅತೃಪ್ತ” ಎಂಬ ಹಣೆಪಟ್ಟಿ ಅಂಟಿಸಿಕೊಂಡು ಕ್ಷೇತ್ರ ಮತ್ತು ರಾಜ್ಯಗಳಿಂದ ಪಲಾಯನ ಮಾಡಿದ್ದ, ಸಾಂವಿಧಾನಿಕ ಮತ್ತು ಪ್ರಜಾತಾಂತ್ರಿಕ ಆಶಯಗಳನ್ನೇ ಗೇಲಿ ಮಾಡುವಂತೆ ಟಿವಿ ಚಾನೆಲ್ಲುಗಳಿಂದ ವಿಜೃಂಭಿಸಲ್ಪಡುತ್ತಿದ್ದ 17 ಹೊಣೆಗೇಡಿ ಶಾಸಕರನ್ನು ಅನರ್ಹಗೊಳಿಸುವ ಮೂಲಕ, ದೇಶದ ಎಲ್ಲೆಡೆ ಸಾಂಕ್ರಾಮಿಕ ರೋಗದಂತೆ ಹಬ್ಬುತ್ತಿರುವ ಅಸಹ್ಯ ರಾಜಕಾರಣಕ್ಕೆ ಒಂದು ಏಟು ನೀಡಿದ್ದಾರೆ.

ಅನರ್ಹತೆ: ಮುಂದೇನು?
ಸದ್ಯ ಶೆಡ್ಯೂಲ್ 10ರ ತೀರಾ ಸೂಕ್ಷ್ಮಾತಿಸೂಕ್ಷ್ಮ ಅಂಶಗಳನ್ನು ಪರಿಗಣಿಸಿಯೇ ಸ್ಪೀಕರ್ ರಮೇಶಕುಮಾರ್ 17 ಶಾಸಕರನ್ನು ಅನರ್ಹ ಮಾಡಿದ್ದಾರೆ. ಸದ್ಯಕ್ಕೆ ಅವರು, ಈ ಸದನದ, 15ನೇ ಅಸೆಂಬ್ಲಿ ಮುಗಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಸುಪ್ರೀಂ ಕೋರ್ಟು ಮೊರೆ ಹೋಗಿರುವ ಶಾಸಕರಿಗೆ ಅಲ್ಲೂ ನಿರಾಶೆ ಕಾದಂತಿದೆ. ಈ ಹಿಂದೆ, ಹೆಚ್ಚೂಕಡಿಮೆ ಇಂಥದ್ದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತಮಿಳುನಾಡಿನ 18 ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿತ್ತು. ಈ ಅಂತಿಮ ತೀರ್ಪು ಬರಲು ಒಂದು ವರ್ಷ ಹಿಡಿದಿತ್ತು!

ಅಸಲಿ ವಿಷಯ
ಈಗ ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ, ಅದೀಗ ಪ್ರಜಾಸತ್ತಾತ್ಮಕ ವಿಷಯ ಎಂದು ಒಪ್ಪಿಕೊಳ್ಳಲು ಶುರು ಮಾಡಿಬಿಟ್ಟರೆ ಏನಾಗುತ್ತದೆ? ಇಲ್ಲೇನೂ ಆಗಲಿಕ್ಕಿಲ್ಲ. ಆದರೆ, ದೇಶದ ತುಂಬ ಹೀಗೇ ಪ್ರತಿಪಕ್ಷಗಳನ್ನೇ ನಾಶ ಮಾಡುವ ಅಜೆಂಡಾದೊಂದಿಗೆ ಒಂದು ದುಷ್ಟಶಕ್ತಿ ಹವಣಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಬೆಂಬಲವೂ ಇದೆ ಎಂಬುದೆಲ್ಲ ಗೊತ್ತಾದ ಮೇಲೂ, ‘ಕರ್ನಾಟಕದಲ್ಲಿ ಈಗ ವಿಶ್ವಾಸಮತ ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ’ ಎಂದು ಒಪ್ಪಿಕೊಂಡರೆ ಅದು ಆತ್ಮವಂಚನೆಯೇ, ಅದೆಷ್ಟರ ಮಟ್ಟಿಗಿನ ಆತ್ಮವಂಚನೆ ಎಂದರೆ ಈ ದೇಶದಲ್ಲಿ ಇನ್ನೂ ಪರಿಪೂರ್ಣ ಪ್ರಜಾಪ್ರಭುತ್ವ ಜೀವಂತ ಇದೆ ಎಂದು ಹಲುಬುವ ಮನಸ್ಸುಗಳು ತಮಗೆ ತಾವೇ ದ್ರೋಹ ಬಗೆದುಕೊಂಡಂತೆ…

ಸುಪ್ರೀಂಕೋರ್ಟಿನಲ್ಲಿ 17 ‘ಅನರ್ಹ ಶಾಸಕರು’ ಅರ್ಜಿ ಸಲ್ಲಿಸುತ್ತಾರೆ. ಅಲ್ಲಿ ಗೆಲ್ಲುವುದೇ ಅವರಿಗೆ ಡೌಟು! ಆ ಕಾರಣಕ್ಕೇ ಈಗಾಗಲೇ ಕೆಲವು ಮನೆಹಾಳ ಅನರ್ಹರು ನಿವೃತ್ತಿ ಘೋಷಿಸಿದ್ದಾರೆ. ಇವರೆಲ್ಲ ತಮ್ಮ ಮಕ್ಕಳಿಗೆ ಅಥವಾ ಪತ್ನಿಗೆ ಸಚಿವ ಸ್ಥಾನ ಕೊಡಿ ಎಂದರೆ ಯಡಿಯೂರಪ್ಪ ಏನು ಮಾಡುತ್ತಾರೆ? ಕೊಡಲೇಬೇಕು ಅಲ್ಲವೇ? ಅಲ್ಲಿಗೇ ಮತ್ತೊಮ್ಮೆ ಮತ್ತೊಂದು ವಿಧದ ಆಪರೇಷನ್ ಕಮಲ ಶುರುವಾದಂತೆ!

ಈ ಸರ್ಕಾರ, ಮುಂದೇನಾಗುತ್ತೆ?
ಸರಳ ಪ್ರಶ್ನೆ. ಆರು ತಿಂಗಳು ಬೀಳಲ್ಲ. ಈಗಿನ ಕೇಂದ್ರದ ಬಲ ಮತ್ತು ಬಿಜೆಪಿಯ ಹಣಬಲ ನೋಡಿದರೆ ಬೀಳೋದೇ ಇಲ್ಲ. ಆದರೂ. ಇಲ್ಲಿ ವಿಪಕ್ಷಗಳು ಒಂದು ದೊಡ್ಡ ಹೋರಾಟಕ್ಕೆ ಅಣಿಯಾದರೆ ಸ್ವಲ್ಪ ವ್ಯತ್ಯಾಸ ಆಗಬಹುದಷ್ಟೇ. ಈ ಮೂರ್ಖರಲ್ಲಿ ಅಂತಹ ದೃಢತೆ ಇಲ್ಲವೇ ಇಲ್ಲ ಅಲ್ಲವೇ?

ಹಾಗಾಗಿ, ಈ ಸರ್ಕಾರವನ್ನು 2023ರವರೆಗೂ ಕರೆದೊಯ್ಯುವ ಜವಾಬ್ದಾರಿಯನ್ನು ಅಮಿತ್ ಶಾ ಹೊತ್ತಿದ್ದಾರೆ. ಗೋವಾದಲ್ಲಿ ಕೇವಲ 12 ಬಿಜೆಪಿ ಶಾಸಕರಿದ್ದೂ ಅಲ್ಲಿನ 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ! ಇಲ್ಲೂ ಅದರ ಪ್ರಯೋಗ ಮುಂದುವರೆಯುತ್ತದೆ ಅಷ್ಟೇ!

ಮೀಡಿಯಾ: ಈಗ ವಿಪಕ್ಷ ವಿರುದ್ಧ!
ಇಲ್ಲಿ ಪ್ರಜಾಪ್ರಭುತ್ವ ಕೊಲ್ಲುವ ಕಾನೂನುಬಾಹಿರ ಕೆಲಸಗಳಿಗೆಲ್ಲ ಮಾನ್ಯತೆ ತಂದುಕೊಟ್ಟಿರುವುದೇ ಈ ಮೀಡಿಯಾ, ಅದರಲ್ಲೂ ದೃಶ್ಯ ಮೀಡಿಯಾ. ಇಲ್ಲಿವರೆಗೂ ಸರ್ಕಾರವನ್ನು ಟೀಕಿಸುತ್ತಿದ್ದ ಅವು ಇನ್ಮುಂದೆ ವಿಪಕ್ಷಗಳನ್ನು ಟೀಕಿಸಲು ಶುರು ಮಾಡಲಿವೆ!

ಇಲ್ಲಿವರೆಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ವಿಪರೀತ ಎನಿಸುವಷ್ಟು ಟೀಕೆ, ಅಪಪ್ರಚಾರ ಮಾಡತೊಡಗಿದ ಮಾಧ್ಯಮಗಳ ಕಾರ್ಯವನ್ನು ಮೆಚ್ಚೋಣ. ಮಾಧ್ಯಮ ಯಾವತ್ತಿಗೂ ವಿಪಕ್ಷ ಎಂಬ ಹಿನ್ನೆಲೆ ಇಟ್ಟುಕೊಂಡರೆ ಅದು ಸರಿಯೇ ಅನಿಸಬಹುದು. ಆದರೆ, ಈಗ ವಿಶ್ವಾಸಮತದ ಪ್ರಕ್ರಿಯೆ ಶುರು ಆದಾಗಿಂದ ಇವೆಲ್ಲ ಪುಟ್ಟಾಪೂರಾ ‘ಅತೃಪ್ತರ’ ಪರ ಬ್ಯಾಟಿಂಗ್ ಮಾಡಿದ್ದು ರಾಜ್ಯಕ್ಕೇ ಗೊತ್ತಿದೆ.

ಸುತ್ತು ಬಳಸಿ ಬೇಡವೇ ಬೇಡ, ರಾಜ್ಯದ ಬಹುಪಾಲು ದೃಶ್ಯ ಮಾಧ್ಯಮಗಳು ಬಿಜೆಪಿಗೆ ಮಾರಿಕೊಂಡಿವೆ. ಹೀಗಾಗಿ ಅವುಗಳ ಮುಂದಿನ ಟಾರ್ಗೆಟ್ ಆಡಳಿತ ಪಕ್ಷವಲ್ಲ, ವಿರೋಧ ಪಕ್ಷಗಳೇ. ಈ ಎರಡು ದಿನಗಳ ಅವುಗಳ ವರದಿ, ವಿಶ್ಲೇಷಣೆ ನೋಡಿದರೆ ಸಾಕು, ಇದೆಲ್ಲ ಅರ್ಥವಾಗುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...