Homeಮುಖಪುಟ‘ಕ್ರೂರಿಯ ಬಾಯಲ್ಲಿ ಮಾನವೀಯತೆ’ : ಗುಂಪುಹತ್ಯೆ ನಮ್ಮದಲ್ಲ ಎಂದರು ಮೋಹನ್‌ ಭಾಗವತ್

‘ಕ್ರೂರಿಯ ಬಾಯಲ್ಲಿ ಮಾನವೀಯತೆ’ : ಗುಂಪುಹತ್ಯೆ ನಮ್ಮದಲ್ಲ ಎಂದರು ಮೋಹನ್‌ ಭಾಗವತ್

- Advertisement -
- Advertisement -

‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂಬ ನುಡಿಗಟ್ಟು ಕೆಳಸಮುದಾಯಗಳನ್ನು ನಿಕೃಷ್ಟವಾಗಿ ಕಂಡಿದೆ. ಭೂತಗಳು ಕೆಳಜಾತಿ ಆರಾಧ್ಯ ದೈವ. ಅಂತ ದೈವಗಳು ಕನಿಷ್ಟ, ಭಗವದ್ಗೀತೆ ಶ್ರೇಷ್ಟ ಎಂಬಂತೆ ಬಿಂಬಿಸಿಕೊಂಡು ಬಂದಿರುವುದನ್ನು ಇತಿಹಾಸದ ಉದ್ದಕ್ಕೂ ಕಾಣುತ್ತೇವೆ. ಭೂತಗಳು ಬಹುಜನರ ರಕ್ಷಕರು. ಈ ಕಾರಣಕ್ಕಾಗಿಯೇ ಭೂತದ ಬಾಯಲ್ಲಿ ಭಗವದ್ಗೀತೆ ನುಡಿಗಟ್ಟು ಹುಟ್ಟಿಕೊಂಡಂತಿದೆ. ಸಹಜವಾಗಿಯೇ ಇಂತಹ ನುಡಿಗಟ್ಟನ್ನು ಎಲ್ಲರೂ ಅಪ್ರಜ್ಞಾಪೂರ್ವಕವಾಗಿ ಬಳಸುವುದು ರೂಢಿಯಲ್ಲಿದೆ. ಹಾಗಾಗಿಯೇ ನಾನು ‘ಕ್ರೂರಿಯ ಬಾಯಲ್ಲಿ ಮಾನವೀಯತೆ’ ಎಂಬುದಾಗಿ ಹೇಳುತ್ತೇನೆ. ಕೊಲ್ಲುವ ಕ್ರೂರಿಗಳು ಬದಲಾಗುತ್ತಾರೆ. ಮಾನಸಿಕ ಕ್ರೂರಿಗಳು ನಿತ್ಯವೂ ಕೊಲ್ಲುತ್ತಾರೆ. ಮಾನಸಿಕ ಕ್ರೂರಿಗಳು ಬದಲಾಗುವುದಿಲ್ಲ. ಮಾನಸಿಕ ಕ್ರೌರ್ಯತ್ವ ಸತ್ತರೂ ಅದರ ಶನಿಸಂತಾನ ಹಾಗೆ ಉಳಿದುಹೋಗುತ್ತದೆ.

ಕರ್ಮಠವಾದಿ ಆರ್‌ಎಸ್‍ಎಸ್ ನೀತಿಗಳೇ ದ್ವಂದ್ವ. ಅದರ ಮುಖ್ಯಸ್ಥರು ಇದರಿಂದ ಹೊರತಲ್ಲ. ನುಡಿದಂತೆ ನಡೆಯದ, ನಡೆದಂತೆ ನುಡಿಯದ ಮನಸ್ಥಿತಿ ಅವರದ್ದು. ಅವರಲ್ಲಿ ನಡೆಗೂ ನುಡಿಗೂ ಸಾಮ್ಯತೆಯನ್ನು ಕಾಣಲು ಸಾಧ್ಯವೇ ಇಲ್ಲ. ಮೇಲ್ನೋಟಕ್ಕೆ ಸಂಸ್ಕೃತಿ ವಕ್ತಾರರಂತೆ ಕಂಡರೂ ಆಳದಲ್ಲಿ ಅವರು ಆಗಿಲ್ಲ. ‘ವಸುದೈವಂ ಕುಟುಂಬಕಂ’ ಎಂದು ಉಚ್ಚರಿಸಿದರೂ ಹಾಗೆ ನಡೆಯಲೊಲ್ಲರು. ವಿಭಜಕ ಪ್ರವೃತ್ತಿ, ಅರಾಜಕತೆ ಸೃಷ್ಟಿಸುವುದನ್ನೇ ವೃತ್ತಿ ಪ್ರವೃತ್ತಿಯಾಗಿಸಿಕೊಂಡಿರುವ ಆರ್‌ಎಸ್‍ಎಸ್ ಮುಖಂಡರಿಗೆ ಮಾನವೀಯತೆ ಪರಿಕಲ್ಪನೆಯೇ ಗೊತ್ತಿಲ್ಲ ಎಂದು ಹೇಳಬಹುದು.

ಇಷ್ಟೆಲ್ಲ ಹೇಳಲು ಕಾರಣವಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಆಡಿರುವ ಮಾತುಗಳು ಸುಳ್ಳಿಗೆ ಹಿಡಿದ ಕನ್ನಡಿಯಾಗಿವೆ. ‘ಗುಂಪು ಹತ್ಯೆ’ ಪಾಶ್ಚಿಮಾತ್ಯ ದೇಶದ ಪರಿಕಲ್ಪನೆ. ನಮ್ಮ ನೀತಿಶಾಸ್ತ್ರಗಳಲ್ಲಿ ಇಂತಹ ಗುಂಪುಹತ್ಯೆಗಳಿಗೆ ಅವಕಾಶವಿಲ್ಲ. ಆದರೆ ದೇಶವನ್ನು ಕೆಣಕಲು ಭಾರತೀಯ ಸಂದರ್ಭದಲ್ಲಿ ಇದನ್ನು ಬಳಸಬಾರದು. ಗುಂಪುಹತ್ಯೆ ಪ್ರತ್ಯೇಕ ಧಾರ್ಮಿಕ ಪಠ್ಯದಿಂದ ಬಂದಿದೆ. ಅದನ್ನು ಭಾರತೀಯರ ಮೇಲೆ ಹೇರಬಾರದು’ ಎಂದು ಹೇಳಿದ್ದಾರೆ. ಅಂದರೆ ದೇಶದಲ್ಲಿ ಗುಂಪು ಹತ್ಯೆ ನಡೆಯುತ್ತಿರುವಾಗ ಬಂದ ಇಂತಹ ಮಾತುಗಳು ಹಸಿ ಸುಳ್ಳನ್ನೇ ವಿಜೃಂಭಿಸಿದೆ.

ಬ್ರಾಹ್ಮಣರ ಮಾತನ್ನು ಕೇಳಿಯೇ ರಾಮ ವಾಲಿಯನ್ನು ಕೊಂದಿದ್ದು, ಶಂಭೂಕನನ್ನು ಹತ್ಯೆಗೈದಿದ್ದು. ರಾವಣನ ಮೇಲೆ ಯುದ್ದ ಸಾರಿದ್ದು, ಅಣ್ಣತಮ್ಮಂದಿರಲ್ಲಿ ದ್ವೇಷವನ್ನು ಹುಟ್ಟು ಹಾಕಿದ್ದು, ಧರ್ಮಕ್ಕೆ ಚ್ಯುತಿ ಬಂದಾಗಲೆಲ್ಲ ಕೃಷ್ಣ ಹತ್ತು ಅವತಾರಗಳನ್ನು ಎತ್ತಿದ್ದು, ಎಲ್ಲಿ ಭೂಸುರರಾದ ಬ್ರಾಹ್ಮಣರಿಗೆ ಅಡ್ಡಿಯಾದಾಗ ಮಾತ್ರ ಧರ್ಮಕ್ಕೆ ಚ್ಯುತಿ ಬಂತು. ಇಂತಹ ಸಂದರ್ಭಗಳಲ್ಲಿ ಬಹುಜನರ ನಂಬಿಕೆಗಳಿಗೆ ಬೆಲೆ ಕೊಡಲೇ ಇಲ್ಲ. ಇಂತಹದ್ದೇ ಮಾತುಗಳ ಮೋಹನ್ ಭಾಗವತ್ ಅವರಿಂದ ಬರುತ್ತವೆ. ಆರ್‌ಎಸ್‍ಎಸ್ ಹಿಡೆನ್ ಅಜೆಂಡಾಗಳಿಗೆ ಪ್ರತಿರೋಧ ಕೇಳಿಬಂದಾಗ ಇದು ನಮ್ಮದಲ್ಲ ಎಂಬ ಸಂಸ್ಕೃತಿ ಅವರಿಗೆ ನೆನಪಾಗುತ್ತದೆ. ದೇಶದಲ್ಲಿ ಮುಸ್ಲಿಮರು, ದಲಿತರು ಮತ್ತು ಕೆಳ ಜಾತಿಗಳ ಜನರ ಹತ್ಯೆಗಳಿಗೆ ಶ್ರೇಷ್ಟತೆಯ ಲಕ್ಷಣಗಳೇ ಕಾರಣವಾಗಿದ್ದರೂ ಅವನ್ನು ಸುತಾರಾಂ ಒಪ್ಪಲು ಭಾಗವತ್ ಸಿದ್ದರಿಲ್ಲ.

ಆರ್‌ಎಸ್‍ಎಸ್ ಮೂಲ ಬೀಜವೇ ಒಡಕಿನದು. ಮುಸ್ಲಿಮರು, ಕಮ್ಯುನಿಸ್ಟರು ಮತ್ತು ಪ್ರಗತಿಪರರನ್ನು ಮುಗಿಸುವುದೇ ಹಿಂದುತ್ವದ ಉದ್ದೇಶ. ಅಖಂಡರಾಷ್ಟ್ರದ ಪರಿಕಲ್ಪನೆಯಲ್ಲಿ ಈ ಮೂರು ವರ್ಗದ ಜನ ಹಿಂದೂತ್ವದ ಅಡಿಯಾಳಾಗಿರಬೇಕು ಎಂಬುದೇ ಆಗಿದೆ. ಪಾಶ್ಚಿಮಾತ್ಯರನ್ನು ಅನುಕರಣೆ ಮಾಡಿ ನಮ್ಮ ಸಂಸ್ಕೃತಿ ಹಾಳಾಗಿದೆ ಎಂದು ಬಿಂಬಿಸುವುದರ ಭಾಗವೇ ಇದಾಗಿದೆ. ಇಂಗ್ಲೀಷ್ ಕಲಿಯದಿದ್ದರೆ, ಇಲ್ಲಿಗೆ ಆಧುನಿಕತೆ ಕಾಲಿಡದೇ ಇದ್ದರೆ ಮೂಲನಿವಾಸಿಗಳು ಹಿಂದೂತ್ವವಾದಿಗಳ ಗುಲಾಮರಾಗಬೇಕಾಗಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕು.

ಇಲ್ಲಿಯೇ ಹುಟ್ಟಿದ ಬೌದ್ಧಧರ್ಮವನ್ನು ಸಹಿಸದ ಆರ್‌‌ಎಸ್‍ಎಸ್ ಅದರ ಮೂಲೋತ್ಪಾಟನೆಗೆ ಶಪಥ ಮಾಡಿತು. ಅದರ ಮುಂದುವರಿದ ರೂಪ ಮುಸ್ಲಿಮರು ಮತ್ತು ದಲಿತರ ಮೇಲಿನ ದಾಳಿಯಾಗಿದೆ. ಇದರಿಂದ ಬೇಸತ್ತ ದಲಿತರು ಅನಿವಾರ್ಯವಾಗಿ ಬೌದ್ಧ ಧಮ್ಮ ಅನುಸರಿಸುತ್ತಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್, ಗಾಂಧಿಯಂಥ ಮಹನೀಯರ ಮಾರ್ಗದಲ್ಲಿ ನಡೆಯುತ್ತಿರುವ ಮೂಲನಿವಾಸಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಹುದ್ದೆಗಳನ್ನು ಹಿಡಿದಿದ್ದಾರೆ. ಇದನ್ನು ಸಹಿಸಲು ಭಾಗವತ್‍ಗೆ ಆಗುತ್ತಿಲ್ಲ. ಈ ಕಾರಣಕ್ಕಾಗಿಯೇ ಮೋಹನ್ ಭಾಗವತ್ ದೇಶದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಲಿಷ್ಠ ಭಾರತವಾಗಲು ಬಿಡುತ್ತಿಲ್ಲ. ಗುಂಪು ಹತ್ಯೆಯಂತಹ ಗಲಭೆಗಳನ್ನು ಸೃಷ್ಟಿಸಿ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ’ ಎಂದು ಹಸೀ ಸುಳ್ಳು ಹೇಳುತ್ತಾರೆ.

ಹಿಂದೂಗಳೆಲ್ಲ ಒಂದು ಎಂದು ಹೇಳುತ್ತಲೇ ವರ್ಣಾಶ್ರಮ ವ್ಯವಸ್ಥೆಯನ್ನು ಮುಂದುವರಿಸುತ್ತಾ, ಜಾತಿ ಜಾತಿಗಳ ನಡುವೆ ದ್ವೇಷ ಹುಟ್ಟು ಹಾಕುತ್ತ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವ ಆರ್‌ಎಸ್‍ಎಸ್ ಅಧಿಕಾರ ಹಿಡಿದು ಈ ದೇಶದ ಜನರನ್ನು ಗುಲಾಮರನ್ನಾಗಿಸಿಕೊಳ್ಳಲು ಸುಳ್ಳುಗಳ ಜಾಲವನ್ನು ಹೆಣೆಯುತ್ತಿದೆ. ಇದನ್ನು ನಂಬುತ್ತಿರುವ ಯುವ ಸಮೂಹ ಗುಂಪು ಹಲ್ಲೆ, ಗುಂಪು ಹತ್ಯೆಯಲ್ಲಿ ತೊಡಗಿದೆ. ಬಲಪಂಥೀಯ ಸಂಘಟನೆಗಳ ಜನರೇ ನೇರವಾಗಿ ಗುಂಪು ಹತ್ಯೆಗಳಲ್ಲಿ ತೊಡಗಿರುವುದು ಕಂಡು ಬಂದಿದೆ. ಹೀಗಾಗಿ ತಮ್ಮ ಮೇಲಿನ ಆರೋಪ ತೊಡೆದುಕೊಳ್ಳಲು ಆರ್‌ಎಸ್‍ಎಸ್ ಗುಂಪು ಹತ್ಯೆಗಳಿಗೆ ಪ್ರೇರಣೆ ಪಾಶ್ಚಿಮಾತ್ಯರದ್ದು ಎಂದು ಹೇಳುತ್ತಿದೆ. ಇದನ್ನು ಮೂರ್ಖರು ನಂಬುಬೇಕು ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...