Homeಮುಖಪುಟ‘ಕ್ರೂರಿಯ ಬಾಯಲ್ಲಿ ಮಾನವೀಯತೆ’ : ಗುಂಪುಹತ್ಯೆ ನಮ್ಮದಲ್ಲ ಎಂದರು ಮೋಹನ್‌ ಭಾಗವತ್

‘ಕ್ರೂರಿಯ ಬಾಯಲ್ಲಿ ಮಾನವೀಯತೆ’ : ಗುಂಪುಹತ್ಯೆ ನಮ್ಮದಲ್ಲ ಎಂದರು ಮೋಹನ್‌ ಭಾಗವತ್

- Advertisement -
- Advertisement -

‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂಬ ನುಡಿಗಟ್ಟು ಕೆಳಸಮುದಾಯಗಳನ್ನು ನಿಕೃಷ್ಟವಾಗಿ ಕಂಡಿದೆ. ಭೂತಗಳು ಕೆಳಜಾತಿ ಆರಾಧ್ಯ ದೈವ. ಅಂತ ದೈವಗಳು ಕನಿಷ್ಟ, ಭಗವದ್ಗೀತೆ ಶ್ರೇಷ್ಟ ಎಂಬಂತೆ ಬಿಂಬಿಸಿಕೊಂಡು ಬಂದಿರುವುದನ್ನು ಇತಿಹಾಸದ ಉದ್ದಕ್ಕೂ ಕಾಣುತ್ತೇವೆ. ಭೂತಗಳು ಬಹುಜನರ ರಕ್ಷಕರು. ಈ ಕಾರಣಕ್ಕಾಗಿಯೇ ಭೂತದ ಬಾಯಲ್ಲಿ ಭಗವದ್ಗೀತೆ ನುಡಿಗಟ್ಟು ಹುಟ್ಟಿಕೊಂಡಂತಿದೆ. ಸಹಜವಾಗಿಯೇ ಇಂತಹ ನುಡಿಗಟ್ಟನ್ನು ಎಲ್ಲರೂ ಅಪ್ರಜ್ಞಾಪೂರ್ವಕವಾಗಿ ಬಳಸುವುದು ರೂಢಿಯಲ್ಲಿದೆ. ಹಾಗಾಗಿಯೇ ನಾನು ‘ಕ್ರೂರಿಯ ಬಾಯಲ್ಲಿ ಮಾನವೀಯತೆ’ ಎಂಬುದಾಗಿ ಹೇಳುತ್ತೇನೆ. ಕೊಲ್ಲುವ ಕ್ರೂರಿಗಳು ಬದಲಾಗುತ್ತಾರೆ. ಮಾನಸಿಕ ಕ್ರೂರಿಗಳು ನಿತ್ಯವೂ ಕೊಲ್ಲುತ್ತಾರೆ. ಮಾನಸಿಕ ಕ್ರೂರಿಗಳು ಬದಲಾಗುವುದಿಲ್ಲ. ಮಾನಸಿಕ ಕ್ರೌರ್ಯತ್ವ ಸತ್ತರೂ ಅದರ ಶನಿಸಂತಾನ ಹಾಗೆ ಉಳಿದುಹೋಗುತ್ತದೆ.

ಕರ್ಮಠವಾದಿ ಆರ್‌ಎಸ್‍ಎಸ್ ನೀತಿಗಳೇ ದ್ವಂದ್ವ. ಅದರ ಮುಖ್ಯಸ್ಥರು ಇದರಿಂದ ಹೊರತಲ್ಲ. ನುಡಿದಂತೆ ನಡೆಯದ, ನಡೆದಂತೆ ನುಡಿಯದ ಮನಸ್ಥಿತಿ ಅವರದ್ದು. ಅವರಲ್ಲಿ ನಡೆಗೂ ನುಡಿಗೂ ಸಾಮ್ಯತೆಯನ್ನು ಕಾಣಲು ಸಾಧ್ಯವೇ ಇಲ್ಲ. ಮೇಲ್ನೋಟಕ್ಕೆ ಸಂಸ್ಕೃತಿ ವಕ್ತಾರರಂತೆ ಕಂಡರೂ ಆಳದಲ್ಲಿ ಅವರು ಆಗಿಲ್ಲ. ‘ವಸುದೈವಂ ಕುಟುಂಬಕಂ’ ಎಂದು ಉಚ್ಚರಿಸಿದರೂ ಹಾಗೆ ನಡೆಯಲೊಲ್ಲರು. ವಿಭಜಕ ಪ್ರವೃತ್ತಿ, ಅರಾಜಕತೆ ಸೃಷ್ಟಿಸುವುದನ್ನೇ ವೃತ್ತಿ ಪ್ರವೃತ್ತಿಯಾಗಿಸಿಕೊಂಡಿರುವ ಆರ್‌ಎಸ್‍ಎಸ್ ಮುಖಂಡರಿಗೆ ಮಾನವೀಯತೆ ಪರಿಕಲ್ಪನೆಯೇ ಗೊತ್ತಿಲ್ಲ ಎಂದು ಹೇಳಬಹುದು.

ಇಷ್ಟೆಲ್ಲ ಹೇಳಲು ಕಾರಣವಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಆಡಿರುವ ಮಾತುಗಳು ಸುಳ್ಳಿಗೆ ಹಿಡಿದ ಕನ್ನಡಿಯಾಗಿವೆ. ‘ಗುಂಪು ಹತ್ಯೆ’ ಪಾಶ್ಚಿಮಾತ್ಯ ದೇಶದ ಪರಿಕಲ್ಪನೆ. ನಮ್ಮ ನೀತಿಶಾಸ್ತ್ರಗಳಲ್ಲಿ ಇಂತಹ ಗುಂಪುಹತ್ಯೆಗಳಿಗೆ ಅವಕಾಶವಿಲ್ಲ. ಆದರೆ ದೇಶವನ್ನು ಕೆಣಕಲು ಭಾರತೀಯ ಸಂದರ್ಭದಲ್ಲಿ ಇದನ್ನು ಬಳಸಬಾರದು. ಗುಂಪುಹತ್ಯೆ ಪ್ರತ್ಯೇಕ ಧಾರ್ಮಿಕ ಪಠ್ಯದಿಂದ ಬಂದಿದೆ. ಅದನ್ನು ಭಾರತೀಯರ ಮೇಲೆ ಹೇರಬಾರದು’ ಎಂದು ಹೇಳಿದ್ದಾರೆ. ಅಂದರೆ ದೇಶದಲ್ಲಿ ಗುಂಪು ಹತ್ಯೆ ನಡೆಯುತ್ತಿರುವಾಗ ಬಂದ ಇಂತಹ ಮಾತುಗಳು ಹಸಿ ಸುಳ್ಳನ್ನೇ ವಿಜೃಂಭಿಸಿದೆ.

ಬ್ರಾಹ್ಮಣರ ಮಾತನ್ನು ಕೇಳಿಯೇ ರಾಮ ವಾಲಿಯನ್ನು ಕೊಂದಿದ್ದು, ಶಂಭೂಕನನ್ನು ಹತ್ಯೆಗೈದಿದ್ದು. ರಾವಣನ ಮೇಲೆ ಯುದ್ದ ಸಾರಿದ್ದು, ಅಣ್ಣತಮ್ಮಂದಿರಲ್ಲಿ ದ್ವೇಷವನ್ನು ಹುಟ್ಟು ಹಾಕಿದ್ದು, ಧರ್ಮಕ್ಕೆ ಚ್ಯುತಿ ಬಂದಾಗಲೆಲ್ಲ ಕೃಷ್ಣ ಹತ್ತು ಅವತಾರಗಳನ್ನು ಎತ್ತಿದ್ದು, ಎಲ್ಲಿ ಭೂಸುರರಾದ ಬ್ರಾಹ್ಮಣರಿಗೆ ಅಡ್ಡಿಯಾದಾಗ ಮಾತ್ರ ಧರ್ಮಕ್ಕೆ ಚ್ಯುತಿ ಬಂತು. ಇಂತಹ ಸಂದರ್ಭಗಳಲ್ಲಿ ಬಹುಜನರ ನಂಬಿಕೆಗಳಿಗೆ ಬೆಲೆ ಕೊಡಲೇ ಇಲ್ಲ. ಇಂತಹದ್ದೇ ಮಾತುಗಳ ಮೋಹನ್ ಭಾಗವತ್ ಅವರಿಂದ ಬರುತ್ತವೆ. ಆರ್‌ಎಸ್‍ಎಸ್ ಹಿಡೆನ್ ಅಜೆಂಡಾಗಳಿಗೆ ಪ್ರತಿರೋಧ ಕೇಳಿಬಂದಾಗ ಇದು ನಮ್ಮದಲ್ಲ ಎಂಬ ಸಂಸ್ಕೃತಿ ಅವರಿಗೆ ನೆನಪಾಗುತ್ತದೆ. ದೇಶದಲ್ಲಿ ಮುಸ್ಲಿಮರು, ದಲಿತರು ಮತ್ತು ಕೆಳ ಜಾತಿಗಳ ಜನರ ಹತ್ಯೆಗಳಿಗೆ ಶ್ರೇಷ್ಟತೆಯ ಲಕ್ಷಣಗಳೇ ಕಾರಣವಾಗಿದ್ದರೂ ಅವನ್ನು ಸುತಾರಾಂ ಒಪ್ಪಲು ಭಾಗವತ್ ಸಿದ್ದರಿಲ್ಲ.

ಆರ್‌ಎಸ್‍ಎಸ್ ಮೂಲ ಬೀಜವೇ ಒಡಕಿನದು. ಮುಸ್ಲಿಮರು, ಕಮ್ಯುನಿಸ್ಟರು ಮತ್ತು ಪ್ರಗತಿಪರರನ್ನು ಮುಗಿಸುವುದೇ ಹಿಂದುತ್ವದ ಉದ್ದೇಶ. ಅಖಂಡರಾಷ್ಟ್ರದ ಪರಿಕಲ್ಪನೆಯಲ್ಲಿ ಈ ಮೂರು ವರ್ಗದ ಜನ ಹಿಂದೂತ್ವದ ಅಡಿಯಾಳಾಗಿರಬೇಕು ಎಂಬುದೇ ಆಗಿದೆ. ಪಾಶ್ಚಿಮಾತ್ಯರನ್ನು ಅನುಕರಣೆ ಮಾಡಿ ನಮ್ಮ ಸಂಸ್ಕೃತಿ ಹಾಳಾಗಿದೆ ಎಂದು ಬಿಂಬಿಸುವುದರ ಭಾಗವೇ ಇದಾಗಿದೆ. ಇಂಗ್ಲೀಷ್ ಕಲಿಯದಿದ್ದರೆ, ಇಲ್ಲಿಗೆ ಆಧುನಿಕತೆ ಕಾಲಿಡದೇ ಇದ್ದರೆ ಮೂಲನಿವಾಸಿಗಳು ಹಿಂದೂತ್ವವಾದಿಗಳ ಗುಲಾಮರಾಗಬೇಕಾಗಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕು.

ಇಲ್ಲಿಯೇ ಹುಟ್ಟಿದ ಬೌದ್ಧಧರ್ಮವನ್ನು ಸಹಿಸದ ಆರ್‌‌ಎಸ್‍ಎಸ್ ಅದರ ಮೂಲೋತ್ಪಾಟನೆಗೆ ಶಪಥ ಮಾಡಿತು. ಅದರ ಮುಂದುವರಿದ ರೂಪ ಮುಸ್ಲಿಮರು ಮತ್ತು ದಲಿತರ ಮೇಲಿನ ದಾಳಿಯಾಗಿದೆ. ಇದರಿಂದ ಬೇಸತ್ತ ದಲಿತರು ಅನಿವಾರ್ಯವಾಗಿ ಬೌದ್ಧ ಧಮ್ಮ ಅನುಸರಿಸುತ್ತಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್, ಗಾಂಧಿಯಂಥ ಮಹನೀಯರ ಮಾರ್ಗದಲ್ಲಿ ನಡೆಯುತ್ತಿರುವ ಮೂಲನಿವಾಸಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಹುದ್ದೆಗಳನ್ನು ಹಿಡಿದಿದ್ದಾರೆ. ಇದನ್ನು ಸಹಿಸಲು ಭಾಗವತ್‍ಗೆ ಆಗುತ್ತಿಲ್ಲ. ಈ ಕಾರಣಕ್ಕಾಗಿಯೇ ಮೋಹನ್ ಭಾಗವತ್ ದೇಶದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಲಿಷ್ಠ ಭಾರತವಾಗಲು ಬಿಡುತ್ತಿಲ್ಲ. ಗುಂಪು ಹತ್ಯೆಯಂತಹ ಗಲಭೆಗಳನ್ನು ಸೃಷ್ಟಿಸಿ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ’ ಎಂದು ಹಸೀ ಸುಳ್ಳು ಹೇಳುತ್ತಾರೆ.

ಹಿಂದೂಗಳೆಲ್ಲ ಒಂದು ಎಂದು ಹೇಳುತ್ತಲೇ ವರ್ಣಾಶ್ರಮ ವ್ಯವಸ್ಥೆಯನ್ನು ಮುಂದುವರಿಸುತ್ತಾ, ಜಾತಿ ಜಾತಿಗಳ ನಡುವೆ ದ್ವೇಷ ಹುಟ್ಟು ಹಾಕುತ್ತ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವ ಆರ್‌ಎಸ್‍ಎಸ್ ಅಧಿಕಾರ ಹಿಡಿದು ಈ ದೇಶದ ಜನರನ್ನು ಗುಲಾಮರನ್ನಾಗಿಸಿಕೊಳ್ಳಲು ಸುಳ್ಳುಗಳ ಜಾಲವನ್ನು ಹೆಣೆಯುತ್ತಿದೆ. ಇದನ್ನು ನಂಬುತ್ತಿರುವ ಯುವ ಸಮೂಹ ಗುಂಪು ಹಲ್ಲೆ, ಗುಂಪು ಹತ್ಯೆಯಲ್ಲಿ ತೊಡಗಿದೆ. ಬಲಪಂಥೀಯ ಸಂಘಟನೆಗಳ ಜನರೇ ನೇರವಾಗಿ ಗುಂಪು ಹತ್ಯೆಗಳಲ್ಲಿ ತೊಡಗಿರುವುದು ಕಂಡು ಬಂದಿದೆ. ಹೀಗಾಗಿ ತಮ್ಮ ಮೇಲಿನ ಆರೋಪ ತೊಡೆದುಕೊಳ್ಳಲು ಆರ್‌ಎಸ್‍ಎಸ್ ಗುಂಪು ಹತ್ಯೆಗಳಿಗೆ ಪ್ರೇರಣೆ ಪಾಶ್ಚಿಮಾತ್ಯರದ್ದು ಎಂದು ಹೇಳುತ್ತಿದೆ. ಇದನ್ನು ಮೂರ್ಖರು ನಂಬುಬೇಕು ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...