Homeಕರ್ನಾಟಕಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

- Advertisement -
- Advertisement -

2022-23 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿಸಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಗಳು ಇಲ್ಲಿವೆ.

ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಕರ್ನಾಟಕ ಬಜೆಟ್: 2022-23

ಕಳೆದ ತಿಂಗಳು ಬಜೆಟ್-ಪೂರ್ವ ಸಮೀಕ್ಷೆ ಮಾಡುವಾಗ ಹಿಜಾಬ್, ಮತಾಂತರ, ಲವ್ ಜಿಹಾದ್, ದೇವಾಲಯಗಳ ಖಾಸಗೀಕರಣ, ಉಳ್ಳವರಿಗೆ ಭೂಮಿ ಮುಂತಾದವುಗಳನ್ನು ಆದ್ಯತೆಗಳನ್ನಾಗಿ ಮಾಡಿಕೊಂಡಿರುವ ಸರ್ಕಾರದಿಂದ ಎಂತಹ ಬಜೆಟ್ಟನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆ ಹಾಕಿದ್ದೆ. ಇದು ನಿಜವಾಗಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಜೆಟ್ಟಿನಲ್ಲಿ ರೂ. 100 ಕೋಟಿ ಅನುದಾನ; ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ 15 ಕೋಟಿ ಅನುದಾನ. ಈ ಸರ್ಕಾರದ ಆದ್ಯತೆಗಳೇನು ಎಂಬುದುಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ! ತಟ್ಟೆಕಾಸಿಗೆ ಉತ್ತೇಜನ: ಮಕ್ಕಳ ವಿದ್ಯಾಭ್ಯಾಸಕ್ಕೆ ನಿರುತ್ತೇಜನ.

ಒಕ್ಕೂಟ ಸರ್ಕಾರದಿಂದ 2019-20ರಲ್ಲಿ ರಾಜ್ಯಕ್ಕೆ ವರ್ಗಾವಣೆಯಾದ ಮೊತ್ತವು ಆ ವರ್ಷದ ಬಜೆಟ್ ವೆಚ್ಚದ ಶೇ. 21.73 ರಷ್ಟಿತ್ತು. ಈ ವರ್ಷ ಇದು ಶೇ. 17.71ಕ್ಕಿಳಿದಿದೆ. ನಮಗೆ ಬರಬೇಕಾಗಿದ್ದ ಜಿ ಎಸ್ ಟಿ ಪರಿಹಾರ 2021-22ರಲ್ಲಿ ರೂ. 18109 ಕೋಟಿಯನ್ನು ನಮಗೆ ಅದು ಸಾಲ ನೀಡುವ ಕ್ರಮದಲ್ಲಿ ಯಾವ ಹೆಚ್ಚುಗಾರಿಕೆಯಿದೆ ಸ್ವಾಮಿ?

ಬಜೆಟ್ಟಿನ ಶಿಸ್ತು ರೆವಿನ್ಯೂ ಖಾತೆಯಲ್ಲಿ ಆದಿಕ್ಯವನ್ನು ಸಾಧಿಸಿಕೊಳ್ಳುವುದರಲ್ಲಿದೆ. ಇದನ್ನು ಕರ್ನಾಟಕ ಕಳೆದ 15 ವರ್ಷಗಳಿಂದಲೂ ಅನುಸರಿಸಿಕೊಂಡು ಬಂದಿತ್ತು. ಆದರೆ 2022-23ರಲ್ಲಿ ರೆವಿನ್ಯೂ ಕೊರತೆ ರೂ. 14699 ಕೋಟಿ. ನಮ್ಮ ಒಟ್ಟು ಋಣಬಾರ ಇಲ್ಲಿಯವರೆಗೆ ನಮ್ಮ ಜಿ ಎಸ್ ಡಿ ಪಿಯ ಶೇ. 25ಕ್ಕಿಂತ ಕಡಿಮೆಯಿರುತ್ತಿತ್ತು. ಈಗ 2022-23ರಲ್ಲಿ ಇದು ಶೇ. 27.49ಕ್ಕೆರಿದೆ. ಎಲ್ಲಿದೆ ಬಜೆಟ್ ಶಿಸ್ತು? ಮುಂದಿನ 2022-23ರಲ್ಲಿನ ಬಜೆಟ್ ಗಾತ್ರ ರೂ.265702 ಕೋಟಿ. ಇದರಲ್ಲಿ ಸಾಲದ ಪ್ರಮಾಣ ಶೇ. 27.09. ಮುಂದೆ ಇದನ್ನು ಬಡ ನಾಗರಿಕರ ಮೇಲೆ ಹೇರಲಾಗುತ್ತದೆ.

ರಾಜ್ಯದ ಜನಸಂಖ್ಯೆಯ ಶೇ. 24.01 ರಷ್ಟಿರುವ ದಲಿತರು ಮತ್ತು ಆದಿವಾಸಿಗಳ ಉಪಯೋಜನೆಗಳಿಗೆ ನೀಡುತ್ತಿದ್ದ ಅನುದಾನ 2017-18ರಲ್ಲಿ ಬಜೆಟ್ ವೆಚ್ಚದ ಶೇ. 14.98ರಷ್ಟಿತ್ತು. ಇದೀಗ 2022-23ರಲ್ಲಿ ಇದು ಬಜೆಟ್ ವೆಚ್ಚದ ಶೇ. 10.62ಕ್ಕಿಳಿದಿದೆ. ರಾಜ್ಯದ ಜನಸಂಖ್ಯೆಯ ಶೇ. 15 ರಷ್ಟಿರುವ ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಏನಿದೆ! ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿಯಿವೆ. ಇದರ ಬಗ್ಗೆ ಬಜೆಟ್ಟಿನಲ್ಲಿ ಪ್ರಸ್ತಾಪವಿಲ್ಲ. ನರೇಗದಂತಹ ಕಾರ್ಯಯೋಜನೆ ನಗರ ಪ್ರದೇಶಗಳಿಗೂ ಬೇಕು ಎಂಬುದು ಜನರ-ತಜ್ಞರ ಅಭಿಪ್ರಾಯ. ಇದರ ಬಗ್ಗೆ ಚರ್ಚೆಯಿಲ್ಲ. ನೀತಿ ಆಯೋಗ್ ಬಹುಮುಖಿ ಬಡತನದ ವರದಿಯು ಕಲ್ಯಾಣ ಕರ್ನಾಟಕದಲ್ಲಿ ಇದು ತೀವ್ರವಾಗಿದೆ ಎಂದು ಹೇಳಿದೆ. ಇದಕ್ಕೆ ಬಜೆಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ.

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

  • ಟಿ. ಆರ್. ಚಂದ್ರಶೇಖರ, ವಿಶ್ರಾಂತ ಪ್ರಾಧ್ಯಾಪಕರು

ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಬಜೆಟ್‌ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶೇ. 12ರಷ್ಟು ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಆದರೆ ತಜ್ಞರ ಬೇಡಿಕೆ ಕನಿಷ್ಠ ಶೇ.30 ಆಗಿದೆ. ಈ ಅಲ್ಪ ಹಣದಿಂದ ಈಗಿರುವ ಸರ್ಕಾರಿ ಸಂಸ್ಥೆಗಳ ನಿರ್ವಹಣೆ ಆಗಬಹುದೇ ಹೊರತು, ಹೊಸ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆಗುವುದಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಸೀಟನ್ನು ದಕ್ಕಿಸಿಕೊಳ್ಳಲು ಸಾಲಕ್ಕಾಗಿ ನೆರವು ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಇದು ಯಾವ ನೆರವೂ ಅಲ್ಲ. ಬದಲಿಗೆ ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರವು ಉನ್ನತ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡಬೇಕಿತ್ತು. ಹೆಚ್ಚೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕಿತ್ತು. ಈ ಯೋಜನೆಗಳು ವಿದ್ಯಾರ್ಥಿಗಳಿಗೆ ನೆರವು ಆಗುತ್ತಿತ್ತು. ಆದರೆ, ಸಾಲದ ನೆರವಿನ ನೆಪದಲ್ಲಿ, ಸರ್ಕಾರ ಮತ್ತೊಮ್ಮೆ ವಿದ್ಯಾರ್ಥಿಗಳ ತಲೆಯ ಮೇಲೆ ಶುಲ್ಕದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ ವಿದ್ಯಾರ್ಥಿ ಪರವಾಗಿರುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ, ಅದು ಕೇವಲ ಘೋಷಣೆಯಾಗಿ ಉಳಿದಿರುವುದು ವಿಷಾದನೀಯ.

  • AIDSO ಕರ್ನಾಟಕ ರಾಜ್ಯ ಸಮಿತಿ

ಅರ್ಥ ಕಳೆದಕೊಂಡ ಬಜೆಟ್

ಹೊಸ ಶಿಕ್ಷಣ ನೀತಿ ಜಾರಿಯಾದರೆ ಯಾವೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂದು ನಾಲ್ಕು ವರ್ಷಗಳ ಹಿಂದೆಯೇ ಎಚ್ಚರಿಸಿದ್ದೆವೊ ಅವೆಲ್ಲವೂ ಈ ಬಜೆಟ್‌ನಲ್ಲಿ ಗೋಚರಿಸುತ್ತಿವೆ. ಅಂಗನವಾಡಿ ಎಂಬುದು ಅನೌಪಚಾರಿಕ ಶಿಕ್ಷಣವಾಗಿದೆ. ಆದರೆ ಈ ಸರ್ಕಾರ ಅದನ್ನು ಔಪಚಾರಿಕ ಶಿಕ್ಷಣ ಮಾಡಲು ಹಠತೊಟ್ಟಿದೆ. ಇನ್ನು ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳ ಸಂಕಷ್ಟದ ಹಿನ್ನೆಲೆಯಲ್ಲಿ NEET ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ನೀಟ್ ಮಾತ್ರವಲ್ಲದೇ ಸರ್ಕಾರ ಸಾರ್ವಜನಿಕ ಶಿಕ್ಷಣದಿಂದ ಹೊರನಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಣ ಕ್ಷೇತ್ರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಡಿಮೆ ಹಣ ನೀಡಲಾಗುತ್ತದೆ. ಆನಂತರ  ಅಷ್ಟನ್ನು ಖರ್ಚು ಮಾಡದೇ ಬೇರೆ ಕ್ಷೇತ್ರಗಳಿಗೆ ಹಂಚುತ್ತಾರೆ. ಬಜೆಟ್‌ಗಳು ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥ ಕಳೆದುಕೊಂಡಿವೆ. ಈ ಬಜೆಟ್‌ ಕುರಿತು ಟೀಕೆ ಮಾಡಿದರೆ ಪ್ರಯೋಜನವೇನು?

  • ಬಿ.ಶ್ರೀಪಾದ್ ಭಟ್, ಶಿಕ್ಷಣ ತಜ್ಞರು, ಹೋರಾಟಗಾರರು- ಬೆಂಗಳೂರು

ಮಧ್ಯ ಕರ್ನಾಟಕದ ಜಿಲ್ಲೆಗಳ ಕಡೆಗಣನೆ

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಗರಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ಕೊಡಲಾಗಿದೆ. ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೇ ಸ್ಥಾಪಿಸುವ ಪ್ರಯತ್ನದಲ್ಲಿ ಸರ್ಕಾರ ಪ್ರಸ್ತಾವನೆಗಳನ್ನು ಕೊಡುತ್ತಾ ಬಂದಿದೆಯೇ ಹೊರತು, ನಿರ್ಧಿಷ್ಟವಾಗಿ ಹಣಕಾಸು ಇಟ್ಟಿಲ್ಲ. ಜನರಲ್ಲಿ ಅನುಮಾನಗಳು ಮೂಡುವಂತಾಗಿದೆ.

ಕರ್ನಾಟಕದ ಬಜೆಟ್ ಎಲ್ಲಾ ಜನವರ್ಗದವರನ್ನು ಮುಂದಿನ ರಾಜ್ಯ ಚುನಾವಣೆಯತ್ತ ಸೆಳೆಯುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಇದೆ ಛಾಯೆ ಕಂಡುಬರುತ್ತಿದೆ. ನೀರಾವರಿಗೆ ಒತ್ತು, ಕೃಷಿಗೆ ಸಂಬಂಧಿಸಿ ಘೋಷಿಸಿರುವ ಅಭಿವೃದ್ದಿ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಡಬಲ್ ಇಂಜಿನ್ ಸರ್ಕಾರಗಳು ಇದ್ದಲ್ಲಿ ಅಭಿವೃದ್ದಿ ಉತ್ತೇಜನ ಪಡೆಯುತ್ತದೆ ಎನ್ನುವ ಭಾವನೆ ಕರ್ನಾಟಕ ದೃಷ್ಟಿಯಿಂದ ನಿಜಕ್ಕೂ ಸೋತಿದೆ.

  • ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು, ಚಿತ್ರದುರ್ಗ

ಇದನ್ನೂ ಓದಿ: ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...