Homeಕರ್ನಾಟಕಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

- Advertisement -
- Advertisement -

2022-23 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿಸಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಗಳು ಇಲ್ಲಿವೆ.

ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಕರ್ನಾಟಕ ಬಜೆಟ್: 2022-23

ಕಳೆದ ತಿಂಗಳು ಬಜೆಟ್-ಪೂರ್ವ ಸಮೀಕ್ಷೆ ಮಾಡುವಾಗ ಹಿಜಾಬ್, ಮತಾಂತರ, ಲವ್ ಜಿಹಾದ್, ದೇವಾಲಯಗಳ ಖಾಸಗೀಕರಣ, ಉಳ್ಳವರಿಗೆ ಭೂಮಿ ಮುಂತಾದವುಗಳನ್ನು ಆದ್ಯತೆಗಳನ್ನಾಗಿ ಮಾಡಿಕೊಂಡಿರುವ ಸರ್ಕಾರದಿಂದ ಎಂತಹ ಬಜೆಟ್ಟನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆ ಹಾಕಿದ್ದೆ. ಇದು ನಿಜವಾಗಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಜೆಟ್ಟಿನಲ್ಲಿ ರೂ. 100 ಕೋಟಿ ಅನುದಾನ; ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ 15 ಕೋಟಿ ಅನುದಾನ. ಈ ಸರ್ಕಾರದ ಆದ್ಯತೆಗಳೇನು ಎಂಬುದುಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ! ತಟ್ಟೆಕಾಸಿಗೆ ಉತ್ತೇಜನ: ಮಕ್ಕಳ ವಿದ್ಯಾಭ್ಯಾಸಕ್ಕೆ ನಿರುತ್ತೇಜನ.

ಒಕ್ಕೂಟ ಸರ್ಕಾರದಿಂದ 2019-20ರಲ್ಲಿ ರಾಜ್ಯಕ್ಕೆ ವರ್ಗಾವಣೆಯಾದ ಮೊತ್ತವು ಆ ವರ್ಷದ ಬಜೆಟ್ ವೆಚ್ಚದ ಶೇ. 21.73 ರಷ್ಟಿತ್ತು. ಈ ವರ್ಷ ಇದು ಶೇ. 17.71ಕ್ಕಿಳಿದಿದೆ. ನಮಗೆ ಬರಬೇಕಾಗಿದ್ದ ಜಿ ಎಸ್ ಟಿ ಪರಿಹಾರ 2021-22ರಲ್ಲಿ ರೂ. 18109 ಕೋಟಿಯನ್ನು ನಮಗೆ ಅದು ಸಾಲ ನೀಡುವ ಕ್ರಮದಲ್ಲಿ ಯಾವ ಹೆಚ್ಚುಗಾರಿಕೆಯಿದೆ ಸ್ವಾಮಿ?

ಬಜೆಟ್ಟಿನ ಶಿಸ್ತು ರೆವಿನ್ಯೂ ಖಾತೆಯಲ್ಲಿ ಆದಿಕ್ಯವನ್ನು ಸಾಧಿಸಿಕೊಳ್ಳುವುದರಲ್ಲಿದೆ. ಇದನ್ನು ಕರ್ನಾಟಕ ಕಳೆದ 15 ವರ್ಷಗಳಿಂದಲೂ ಅನುಸರಿಸಿಕೊಂಡು ಬಂದಿತ್ತು. ಆದರೆ 2022-23ರಲ್ಲಿ ರೆವಿನ್ಯೂ ಕೊರತೆ ರೂ. 14699 ಕೋಟಿ. ನಮ್ಮ ಒಟ್ಟು ಋಣಬಾರ ಇಲ್ಲಿಯವರೆಗೆ ನಮ್ಮ ಜಿ ಎಸ್ ಡಿ ಪಿಯ ಶೇ. 25ಕ್ಕಿಂತ ಕಡಿಮೆಯಿರುತ್ತಿತ್ತು. ಈಗ 2022-23ರಲ್ಲಿ ಇದು ಶೇ. 27.49ಕ್ಕೆರಿದೆ. ಎಲ್ಲಿದೆ ಬಜೆಟ್ ಶಿಸ್ತು? ಮುಂದಿನ 2022-23ರಲ್ಲಿನ ಬಜೆಟ್ ಗಾತ್ರ ರೂ.265702 ಕೋಟಿ. ಇದರಲ್ಲಿ ಸಾಲದ ಪ್ರಮಾಣ ಶೇ. 27.09. ಮುಂದೆ ಇದನ್ನು ಬಡ ನಾಗರಿಕರ ಮೇಲೆ ಹೇರಲಾಗುತ್ತದೆ.

ರಾಜ್ಯದ ಜನಸಂಖ್ಯೆಯ ಶೇ. 24.01 ರಷ್ಟಿರುವ ದಲಿತರು ಮತ್ತು ಆದಿವಾಸಿಗಳ ಉಪಯೋಜನೆಗಳಿಗೆ ನೀಡುತ್ತಿದ್ದ ಅನುದಾನ 2017-18ರಲ್ಲಿ ಬಜೆಟ್ ವೆಚ್ಚದ ಶೇ. 14.98ರಷ್ಟಿತ್ತು. ಇದೀಗ 2022-23ರಲ್ಲಿ ಇದು ಬಜೆಟ್ ವೆಚ್ಚದ ಶೇ. 10.62ಕ್ಕಿಳಿದಿದೆ. ರಾಜ್ಯದ ಜನಸಂಖ್ಯೆಯ ಶೇ. 15 ರಷ್ಟಿರುವ ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಏನಿದೆ! ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿಯಿವೆ. ಇದರ ಬಗ್ಗೆ ಬಜೆಟ್ಟಿನಲ್ಲಿ ಪ್ರಸ್ತಾಪವಿಲ್ಲ. ನರೇಗದಂತಹ ಕಾರ್ಯಯೋಜನೆ ನಗರ ಪ್ರದೇಶಗಳಿಗೂ ಬೇಕು ಎಂಬುದು ಜನರ-ತಜ್ಞರ ಅಭಿಪ್ರಾಯ. ಇದರ ಬಗ್ಗೆ ಚರ್ಚೆಯಿಲ್ಲ. ನೀತಿ ಆಯೋಗ್ ಬಹುಮುಖಿ ಬಡತನದ ವರದಿಯು ಕಲ್ಯಾಣ ಕರ್ನಾಟಕದಲ್ಲಿ ಇದು ತೀವ್ರವಾಗಿದೆ ಎಂದು ಹೇಳಿದೆ. ಇದಕ್ಕೆ ಬಜೆಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ.

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

  • ಟಿ. ಆರ್. ಚಂದ್ರಶೇಖರ, ವಿಶ್ರಾಂತ ಪ್ರಾಧ್ಯಾಪಕರು

ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಬಜೆಟ್‌ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶೇ. 12ರಷ್ಟು ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಆದರೆ ತಜ್ಞರ ಬೇಡಿಕೆ ಕನಿಷ್ಠ ಶೇ.30 ಆಗಿದೆ. ಈ ಅಲ್ಪ ಹಣದಿಂದ ಈಗಿರುವ ಸರ್ಕಾರಿ ಸಂಸ್ಥೆಗಳ ನಿರ್ವಹಣೆ ಆಗಬಹುದೇ ಹೊರತು, ಹೊಸ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆಗುವುದಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಸೀಟನ್ನು ದಕ್ಕಿಸಿಕೊಳ್ಳಲು ಸಾಲಕ್ಕಾಗಿ ನೆರವು ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಇದು ಯಾವ ನೆರವೂ ಅಲ್ಲ. ಬದಲಿಗೆ ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರವು ಉನ್ನತ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡಬೇಕಿತ್ತು. ಹೆಚ್ಚೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕಿತ್ತು. ಈ ಯೋಜನೆಗಳು ವಿದ್ಯಾರ್ಥಿಗಳಿಗೆ ನೆರವು ಆಗುತ್ತಿತ್ತು. ಆದರೆ, ಸಾಲದ ನೆರವಿನ ನೆಪದಲ್ಲಿ, ಸರ್ಕಾರ ಮತ್ತೊಮ್ಮೆ ವಿದ್ಯಾರ್ಥಿಗಳ ತಲೆಯ ಮೇಲೆ ಶುಲ್ಕದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ ವಿದ್ಯಾರ್ಥಿ ಪರವಾಗಿರುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ, ಅದು ಕೇವಲ ಘೋಷಣೆಯಾಗಿ ಉಳಿದಿರುವುದು ವಿಷಾದನೀಯ.

  • AIDSO ಕರ್ನಾಟಕ ರಾಜ್ಯ ಸಮಿತಿ

ಅರ್ಥ ಕಳೆದಕೊಂಡ ಬಜೆಟ್

ಹೊಸ ಶಿಕ್ಷಣ ನೀತಿ ಜಾರಿಯಾದರೆ ಯಾವೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂದು ನಾಲ್ಕು ವರ್ಷಗಳ ಹಿಂದೆಯೇ ಎಚ್ಚರಿಸಿದ್ದೆವೊ ಅವೆಲ್ಲವೂ ಈ ಬಜೆಟ್‌ನಲ್ಲಿ ಗೋಚರಿಸುತ್ತಿವೆ. ಅಂಗನವಾಡಿ ಎಂಬುದು ಅನೌಪಚಾರಿಕ ಶಿಕ್ಷಣವಾಗಿದೆ. ಆದರೆ ಈ ಸರ್ಕಾರ ಅದನ್ನು ಔಪಚಾರಿಕ ಶಿಕ್ಷಣ ಮಾಡಲು ಹಠತೊಟ್ಟಿದೆ. ಇನ್ನು ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳ ಸಂಕಷ್ಟದ ಹಿನ್ನೆಲೆಯಲ್ಲಿ NEET ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ನೀಟ್ ಮಾತ್ರವಲ್ಲದೇ ಸರ್ಕಾರ ಸಾರ್ವಜನಿಕ ಶಿಕ್ಷಣದಿಂದ ಹೊರನಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಣ ಕ್ಷೇತ್ರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಡಿಮೆ ಹಣ ನೀಡಲಾಗುತ್ತದೆ. ಆನಂತರ  ಅಷ್ಟನ್ನು ಖರ್ಚು ಮಾಡದೇ ಬೇರೆ ಕ್ಷೇತ್ರಗಳಿಗೆ ಹಂಚುತ್ತಾರೆ. ಬಜೆಟ್‌ಗಳು ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥ ಕಳೆದುಕೊಂಡಿವೆ. ಈ ಬಜೆಟ್‌ ಕುರಿತು ಟೀಕೆ ಮಾಡಿದರೆ ಪ್ರಯೋಜನವೇನು?

  • ಬಿ.ಶ್ರೀಪಾದ್ ಭಟ್, ಶಿಕ್ಷಣ ತಜ್ಞರು, ಹೋರಾಟಗಾರರು- ಬೆಂಗಳೂರು

ಮಧ್ಯ ಕರ್ನಾಟಕದ ಜಿಲ್ಲೆಗಳ ಕಡೆಗಣನೆ

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಗರಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ಕೊಡಲಾಗಿದೆ. ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೇ ಸ್ಥಾಪಿಸುವ ಪ್ರಯತ್ನದಲ್ಲಿ ಸರ್ಕಾರ ಪ್ರಸ್ತಾವನೆಗಳನ್ನು ಕೊಡುತ್ತಾ ಬಂದಿದೆಯೇ ಹೊರತು, ನಿರ್ಧಿಷ್ಟವಾಗಿ ಹಣಕಾಸು ಇಟ್ಟಿಲ್ಲ. ಜನರಲ್ಲಿ ಅನುಮಾನಗಳು ಮೂಡುವಂತಾಗಿದೆ.

ಕರ್ನಾಟಕದ ಬಜೆಟ್ ಎಲ್ಲಾ ಜನವರ್ಗದವರನ್ನು ಮುಂದಿನ ರಾಜ್ಯ ಚುನಾವಣೆಯತ್ತ ಸೆಳೆಯುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಇದೆ ಛಾಯೆ ಕಂಡುಬರುತ್ತಿದೆ. ನೀರಾವರಿಗೆ ಒತ್ತು, ಕೃಷಿಗೆ ಸಂಬಂಧಿಸಿ ಘೋಷಿಸಿರುವ ಅಭಿವೃದ್ದಿ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಡಬಲ್ ಇಂಜಿನ್ ಸರ್ಕಾರಗಳು ಇದ್ದಲ್ಲಿ ಅಭಿವೃದ್ದಿ ಉತ್ತೇಜನ ಪಡೆಯುತ್ತದೆ ಎನ್ನುವ ಭಾವನೆ ಕರ್ನಾಟಕ ದೃಷ್ಟಿಯಿಂದ ನಿಜಕ್ಕೂ ಸೋತಿದೆ.

  • ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು, ಚಿತ್ರದುರ್ಗ

ಇದನ್ನೂ ಓದಿ: ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...