Homeಕರ್ನಾಟಕಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

- Advertisement -
- Advertisement -

2022-23 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿಸಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಗಳು ಇಲ್ಲಿವೆ.

ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಕರ್ನಾಟಕ ಬಜೆಟ್: 2022-23

ಕಳೆದ ತಿಂಗಳು ಬಜೆಟ್-ಪೂರ್ವ ಸಮೀಕ್ಷೆ ಮಾಡುವಾಗ ಹಿಜಾಬ್, ಮತಾಂತರ, ಲವ್ ಜಿಹಾದ್, ದೇವಾಲಯಗಳ ಖಾಸಗೀಕರಣ, ಉಳ್ಳವರಿಗೆ ಭೂಮಿ ಮುಂತಾದವುಗಳನ್ನು ಆದ್ಯತೆಗಳನ್ನಾಗಿ ಮಾಡಿಕೊಂಡಿರುವ ಸರ್ಕಾರದಿಂದ ಎಂತಹ ಬಜೆಟ್ಟನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆ ಹಾಕಿದ್ದೆ. ಇದು ನಿಜವಾಗಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಜೆಟ್ಟಿನಲ್ಲಿ ರೂ. 100 ಕೋಟಿ ಅನುದಾನ; ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ 15 ಕೋಟಿ ಅನುದಾನ. ಈ ಸರ್ಕಾರದ ಆದ್ಯತೆಗಳೇನು ಎಂಬುದುಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ! ತಟ್ಟೆಕಾಸಿಗೆ ಉತ್ತೇಜನ: ಮಕ್ಕಳ ವಿದ್ಯಾಭ್ಯಾಸಕ್ಕೆ ನಿರುತ್ತೇಜನ.

ಒಕ್ಕೂಟ ಸರ್ಕಾರದಿಂದ 2019-20ರಲ್ಲಿ ರಾಜ್ಯಕ್ಕೆ ವರ್ಗಾವಣೆಯಾದ ಮೊತ್ತವು ಆ ವರ್ಷದ ಬಜೆಟ್ ವೆಚ್ಚದ ಶೇ. 21.73 ರಷ್ಟಿತ್ತು. ಈ ವರ್ಷ ಇದು ಶೇ. 17.71ಕ್ಕಿಳಿದಿದೆ. ನಮಗೆ ಬರಬೇಕಾಗಿದ್ದ ಜಿ ಎಸ್ ಟಿ ಪರಿಹಾರ 2021-22ರಲ್ಲಿ ರೂ. 18109 ಕೋಟಿಯನ್ನು ನಮಗೆ ಅದು ಸಾಲ ನೀಡುವ ಕ್ರಮದಲ್ಲಿ ಯಾವ ಹೆಚ್ಚುಗಾರಿಕೆಯಿದೆ ಸ್ವಾಮಿ?

ಬಜೆಟ್ಟಿನ ಶಿಸ್ತು ರೆವಿನ್ಯೂ ಖಾತೆಯಲ್ಲಿ ಆದಿಕ್ಯವನ್ನು ಸಾಧಿಸಿಕೊಳ್ಳುವುದರಲ್ಲಿದೆ. ಇದನ್ನು ಕರ್ನಾಟಕ ಕಳೆದ 15 ವರ್ಷಗಳಿಂದಲೂ ಅನುಸರಿಸಿಕೊಂಡು ಬಂದಿತ್ತು. ಆದರೆ 2022-23ರಲ್ಲಿ ರೆವಿನ್ಯೂ ಕೊರತೆ ರೂ. 14699 ಕೋಟಿ. ನಮ್ಮ ಒಟ್ಟು ಋಣಬಾರ ಇಲ್ಲಿಯವರೆಗೆ ನಮ್ಮ ಜಿ ಎಸ್ ಡಿ ಪಿಯ ಶೇ. 25ಕ್ಕಿಂತ ಕಡಿಮೆಯಿರುತ್ತಿತ್ತು. ಈಗ 2022-23ರಲ್ಲಿ ಇದು ಶೇ. 27.49ಕ್ಕೆರಿದೆ. ಎಲ್ಲಿದೆ ಬಜೆಟ್ ಶಿಸ್ತು? ಮುಂದಿನ 2022-23ರಲ್ಲಿನ ಬಜೆಟ್ ಗಾತ್ರ ರೂ.265702 ಕೋಟಿ. ಇದರಲ್ಲಿ ಸಾಲದ ಪ್ರಮಾಣ ಶೇ. 27.09. ಮುಂದೆ ಇದನ್ನು ಬಡ ನಾಗರಿಕರ ಮೇಲೆ ಹೇರಲಾಗುತ್ತದೆ.

ರಾಜ್ಯದ ಜನಸಂಖ್ಯೆಯ ಶೇ. 24.01 ರಷ್ಟಿರುವ ದಲಿತರು ಮತ್ತು ಆದಿವಾಸಿಗಳ ಉಪಯೋಜನೆಗಳಿಗೆ ನೀಡುತ್ತಿದ್ದ ಅನುದಾನ 2017-18ರಲ್ಲಿ ಬಜೆಟ್ ವೆಚ್ಚದ ಶೇ. 14.98ರಷ್ಟಿತ್ತು. ಇದೀಗ 2022-23ರಲ್ಲಿ ಇದು ಬಜೆಟ್ ವೆಚ್ಚದ ಶೇ. 10.62ಕ್ಕಿಳಿದಿದೆ. ರಾಜ್ಯದ ಜನಸಂಖ್ಯೆಯ ಶೇ. 15 ರಷ್ಟಿರುವ ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಏನಿದೆ! ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿಯಿವೆ. ಇದರ ಬಗ್ಗೆ ಬಜೆಟ್ಟಿನಲ್ಲಿ ಪ್ರಸ್ತಾಪವಿಲ್ಲ. ನರೇಗದಂತಹ ಕಾರ್ಯಯೋಜನೆ ನಗರ ಪ್ರದೇಶಗಳಿಗೂ ಬೇಕು ಎಂಬುದು ಜನರ-ತಜ್ಞರ ಅಭಿಪ್ರಾಯ. ಇದರ ಬಗ್ಗೆ ಚರ್ಚೆಯಿಲ್ಲ. ನೀತಿ ಆಯೋಗ್ ಬಹುಮುಖಿ ಬಡತನದ ವರದಿಯು ಕಲ್ಯಾಣ ಕರ್ನಾಟಕದಲ್ಲಿ ಇದು ತೀವ್ರವಾಗಿದೆ ಎಂದು ಹೇಳಿದೆ. ಇದಕ್ಕೆ ಬಜೆಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ.

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

  • ಟಿ. ಆರ್. ಚಂದ್ರಶೇಖರ, ವಿಶ್ರಾಂತ ಪ್ರಾಧ್ಯಾಪಕರು

ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಬಜೆಟ್‌ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶೇ. 12ರಷ್ಟು ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಆದರೆ ತಜ್ಞರ ಬೇಡಿಕೆ ಕನಿಷ್ಠ ಶೇ.30 ಆಗಿದೆ. ಈ ಅಲ್ಪ ಹಣದಿಂದ ಈಗಿರುವ ಸರ್ಕಾರಿ ಸಂಸ್ಥೆಗಳ ನಿರ್ವಹಣೆ ಆಗಬಹುದೇ ಹೊರತು, ಹೊಸ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆಗುವುದಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಸೀಟನ್ನು ದಕ್ಕಿಸಿಕೊಳ್ಳಲು ಸಾಲಕ್ಕಾಗಿ ನೆರವು ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಇದು ಯಾವ ನೆರವೂ ಅಲ್ಲ. ಬದಲಿಗೆ ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರವು ಉನ್ನತ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡಬೇಕಿತ್ತು. ಹೆಚ್ಚೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕಿತ್ತು. ಈ ಯೋಜನೆಗಳು ವಿದ್ಯಾರ್ಥಿಗಳಿಗೆ ನೆರವು ಆಗುತ್ತಿತ್ತು. ಆದರೆ, ಸಾಲದ ನೆರವಿನ ನೆಪದಲ್ಲಿ, ಸರ್ಕಾರ ಮತ್ತೊಮ್ಮೆ ವಿದ್ಯಾರ್ಥಿಗಳ ತಲೆಯ ಮೇಲೆ ಶುಲ್ಕದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ ವಿದ್ಯಾರ್ಥಿ ಪರವಾಗಿರುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ, ಅದು ಕೇವಲ ಘೋಷಣೆಯಾಗಿ ಉಳಿದಿರುವುದು ವಿಷಾದನೀಯ.

  • AIDSO ಕರ್ನಾಟಕ ರಾಜ್ಯ ಸಮಿತಿ

ಅರ್ಥ ಕಳೆದಕೊಂಡ ಬಜೆಟ್

ಹೊಸ ಶಿಕ್ಷಣ ನೀತಿ ಜಾರಿಯಾದರೆ ಯಾವೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂದು ನಾಲ್ಕು ವರ್ಷಗಳ ಹಿಂದೆಯೇ ಎಚ್ಚರಿಸಿದ್ದೆವೊ ಅವೆಲ್ಲವೂ ಈ ಬಜೆಟ್‌ನಲ್ಲಿ ಗೋಚರಿಸುತ್ತಿವೆ. ಅಂಗನವಾಡಿ ಎಂಬುದು ಅನೌಪಚಾರಿಕ ಶಿಕ್ಷಣವಾಗಿದೆ. ಆದರೆ ಈ ಸರ್ಕಾರ ಅದನ್ನು ಔಪಚಾರಿಕ ಶಿಕ್ಷಣ ಮಾಡಲು ಹಠತೊಟ್ಟಿದೆ. ಇನ್ನು ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳ ಸಂಕಷ್ಟದ ಹಿನ್ನೆಲೆಯಲ್ಲಿ NEET ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ನೀಟ್ ಮಾತ್ರವಲ್ಲದೇ ಸರ್ಕಾರ ಸಾರ್ವಜನಿಕ ಶಿಕ್ಷಣದಿಂದ ಹೊರನಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಣ ಕ್ಷೇತ್ರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಡಿಮೆ ಹಣ ನೀಡಲಾಗುತ್ತದೆ. ಆನಂತರ  ಅಷ್ಟನ್ನು ಖರ್ಚು ಮಾಡದೇ ಬೇರೆ ಕ್ಷೇತ್ರಗಳಿಗೆ ಹಂಚುತ್ತಾರೆ. ಬಜೆಟ್‌ಗಳು ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥ ಕಳೆದುಕೊಂಡಿವೆ. ಈ ಬಜೆಟ್‌ ಕುರಿತು ಟೀಕೆ ಮಾಡಿದರೆ ಪ್ರಯೋಜನವೇನು?

  • ಬಿ.ಶ್ರೀಪಾದ್ ಭಟ್, ಶಿಕ್ಷಣ ತಜ್ಞರು, ಹೋರಾಟಗಾರರು- ಬೆಂಗಳೂರು

ಮಧ್ಯ ಕರ್ನಾಟಕದ ಜಿಲ್ಲೆಗಳ ಕಡೆಗಣನೆ

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಗರಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ಕೊಡಲಾಗಿದೆ. ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೇ ಸ್ಥಾಪಿಸುವ ಪ್ರಯತ್ನದಲ್ಲಿ ಸರ್ಕಾರ ಪ್ರಸ್ತಾವನೆಗಳನ್ನು ಕೊಡುತ್ತಾ ಬಂದಿದೆಯೇ ಹೊರತು, ನಿರ್ಧಿಷ್ಟವಾಗಿ ಹಣಕಾಸು ಇಟ್ಟಿಲ್ಲ. ಜನರಲ್ಲಿ ಅನುಮಾನಗಳು ಮೂಡುವಂತಾಗಿದೆ.

ಕರ್ನಾಟಕದ ಬಜೆಟ್ ಎಲ್ಲಾ ಜನವರ್ಗದವರನ್ನು ಮುಂದಿನ ರಾಜ್ಯ ಚುನಾವಣೆಯತ್ತ ಸೆಳೆಯುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಇದೆ ಛಾಯೆ ಕಂಡುಬರುತ್ತಿದೆ. ನೀರಾವರಿಗೆ ಒತ್ತು, ಕೃಷಿಗೆ ಸಂಬಂಧಿಸಿ ಘೋಷಿಸಿರುವ ಅಭಿವೃದ್ದಿ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಡಬಲ್ ಇಂಜಿನ್ ಸರ್ಕಾರಗಳು ಇದ್ದಲ್ಲಿ ಅಭಿವೃದ್ದಿ ಉತ್ತೇಜನ ಪಡೆಯುತ್ತದೆ ಎನ್ನುವ ಭಾವನೆ ಕರ್ನಾಟಕ ದೃಷ್ಟಿಯಿಂದ ನಿಜಕ್ಕೂ ಸೋತಿದೆ.

  • ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು, ಚಿತ್ರದುರ್ಗ

ಇದನ್ನೂ ಓದಿ: ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...