Homeಕರ್ನಾಟಕಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

- Advertisement -
- Advertisement -

2022-23 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿಸಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಗಳು ಇಲ್ಲಿವೆ.

ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಕರ್ನಾಟಕ ಬಜೆಟ್: 2022-23

ಕಳೆದ ತಿಂಗಳು ಬಜೆಟ್-ಪೂರ್ವ ಸಮೀಕ್ಷೆ ಮಾಡುವಾಗ ಹಿಜಾಬ್, ಮತಾಂತರ, ಲವ್ ಜಿಹಾದ್, ದೇವಾಲಯಗಳ ಖಾಸಗೀಕರಣ, ಉಳ್ಳವರಿಗೆ ಭೂಮಿ ಮುಂತಾದವುಗಳನ್ನು ಆದ್ಯತೆಗಳನ್ನಾಗಿ ಮಾಡಿಕೊಂಡಿರುವ ಸರ್ಕಾರದಿಂದ ಎಂತಹ ಬಜೆಟ್ಟನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆ ಹಾಕಿದ್ದೆ. ಇದು ನಿಜವಾಗಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಜೆಟ್ಟಿನಲ್ಲಿ ರೂ. 100 ಕೋಟಿ ಅನುದಾನ; ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ 15 ಕೋಟಿ ಅನುದಾನ. ಈ ಸರ್ಕಾರದ ಆದ್ಯತೆಗಳೇನು ಎಂಬುದುಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ! ತಟ್ಟೆಕಾಸಿಗೆ ಉತ್ತೇಜನ: ಮಕ್ಕಳ ವಿದ್ಯಾಭ್ಯಾಸಕ್ಕೆ ನಿರುತ್ತೇಜನ.

ಒಕ್ಕೂಟ ಸರ್ಕಾರದಿಂದ 2019-20ರಲ್ಲಿ ರಾಜ್ಯಕ್ಕೆ ವರ್ಗಾವಣೆಯಾದ ಮೊತ್ತವು ಆ ವರ್ಷದ ಬಜೆಟ್ ವೆಚ್ಚದ ಶೇ. 21.73 ರಷ್ಟಿತ್ತು. ಈ ವರ್ಷ ಇದು ಶೇ. 17.71ಕ್ಕಿಳಿದಿದೆ. ನಮಗೆ ಬರಬೇಕಾಗಿದ್ದ ಜಿ ಎಸ್ ಟಿ ಪರಿಹಾರ 2021-22ರಲ್ಲಿ ರೂ. 18109 ಕೋಟಿಯನ್ನು ನಮಗೆ ಅದು ಸಾಲ ನೀಡುವ ಕ್ರಮದಲ್ಲಿ ಯಾವ ಹೆಚ್ಚುಗಾರಿಕೆಯಿದೆ ಸ್ವಾಮಿ?

ಬಜೆಟ್ಟಿನ ಶಿಸ್ತು ರೆವಿನ್ಯೂ ಖಾತೆಯಲ್ಲಿ ಆದಿಕ್ಯವನ್ನು ಸಾಧಿಸಿಕೊಳ್ಳುವುದರಲ್ಲಿದೆ. ಇದನ್ನು ಕರ್ನಾಟಕ ಕಳೆದ 15 ವರ್ಷಗಳಿಂದಲೂ ಅನುಸರಿಸಿಕೊಂಡು ಬಂದಿತ್ತು. ಆದರೆ 2022-23ರಲ್ಲಿ ರೆವಿನ್ಯೂ ಕೊರತೆ ರೂ. 14699 ಕೋಟಿ. ನಮ್ಮ ಒಟ್ಟು ಋಣಬಾರ ಇಲ್ಲಿಯವರೆಗೆ ನಮ್ಮ ಜಿ ಎಸ್ ಡಿ ಪಿಯ ಶೇ. 25ಕ್ಕಿಂತ ಕಡಿಮೆಯಿರುತ್ತಿತ್ತು. ಈಗ 2022-23ರಲ್ಲಿ ಇದು ಶೇ. 27.49ಕ್ಕೆರಿದೆ. ಎಲ್ಲಿದೆ ಬಜೆಟ್ ಶಿಸ್ತು? ಮುಂದಿನ 2022-23ರಲ್ಲಿನ ಬಜೆಟ್ ಗಾತ್ರ ರೂ.265702 ಕೋಟಿ. ಇದರಲ್ಲಿ ಸಾಲದ ಪ್ರಮಾಣ ಶೇ. 27.09. ಮುಂದೆ ಇದನ್ನು ಬಡ ನಾಗರಿಕರ ಮೇಲೆ ಹೇರಲಾಗುತ್ತದೆ.

ರಾಜ್ಯದ ಜನಸಂಖ್ಯೆಯ ಶೇ. 24.01 ರಷ್ಟಿರುವ ದಲಿತರು ಮತ್ತು ಆದಿವಾಸಿಗಳ ಉಪಯೋಜನೆಗಳಿಗೆ ನೀಡುತ್ತಿದ್ದ ಅನುದಾನ 2017-18ರಲ್ಲಿ ಬಜೆಟ್ ವೆಚ್ಚದ ಶೇ. 14.98ರಷ್ಟಿತ್ತು. ಇದೀಗ 2022-23ರಲ್ಲಿ ಇದು ಬಜೆಟ್ ವೆಚ್ಚದ ಶೇ. 10.62ಕ್ಕಿಳಿದಿದೆ. ರಾಜ್ಯದ ಜನಸಂಖ್ಯೆಯ ಶೇ. 15 ರಷ್ಟಿರುವ ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಏನಿದೆ! ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿಯಿವೆ. ಇದರ ಬಗ್ಗೆ ಬಜೆಟ್ಟಿನಲ್ಲಿ ಪ್ರಸ್ತಾಪವಿಲ್ಲ. ನರೇಗದಂತಹ ಕಾರ್ಯಯೋಜನೆ ನಗರ ಪ್ರದೇಶಗಳಿಗೂ ಬೇಕು ಎಂಬುದು ಜನರ-ತಜ್ಞರ ಅಭಿಪ್ರಾಯ. ಇದರ ಬಗ್ಗೆ ಚರ್ಚೆಯಿಲ್ಲ. ನೀತಿ ಆಯೋಗ್ ಬಹುಮುಖಿ ಬಡತನದ ವರದಿಯು ಕಲ್ಯಾಣ ಕರ್ನಾಟಕದಲ್ಲಿ ಇದು ತೀವ್ರವಾಗಿದೆ ಎಂದು ಹೇಳಿದೆ. ಇದಕ್ಕೆ ಬಜೆಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ.

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

  • ಟಿ. ಆರ್. ಚಂದ್ರಶೇಖರ, ವಿಶ್ರಾಂತ ಪ್ರಾಧ್ಯಾಪಕರು

ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಬಜೆಟ್‌ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶೇ. 12ರಷ್ಟು ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಆದರೆ ತಜ್ಞರ ಬೇಡಿಕೆ ಕನಿಷ್ಠ ಶೇ.30 ಆಗಿದೆ. ಈ ಅಲ್ಪ ಹಣದಿಂದ ಈಗಿರುವ ಸರ್ಕಾರಿ ಸಂಸ್ಥೆಗಳ ನಿರ್ವಹಣೆ ಆಗಬಹುದೇ ಹೊರತು, ಹೊಸ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆಗುವುದಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಸೀಟನ್ನು ದಕ್ಕಿಸಿಕೊಳ್ಳಲು ಸಾಲಕ್ಕಾಗಿ ನೆರವು ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಇದು ಯಾವ ನೆರವೂ ಅಲ್ಲ. ಬದಲಿಗೆ ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರವು ಉನ್ನತ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡಬೇಕಿತ್ತು. ಹೆಚ್ಚೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕಿತ್ತು. ಈ ಯೋಜನೆಗಳು ವಿದ್ಯಾರ್ಥಿಗಳಿಗೆ ನೆರವು ಆಗುತ್ತಿತ್ತು. ಆದರೆ, ಸಾಲದ ನೆರವಿನ ನೆಪದಲ್ಲಿ, ಸರ್ಕಾರ ಮತ್ತೊಮ್ಮೆ ವಿದ್ಯಾರ್ಥಿಗಳ ತಲೆಯ ಮೇಲೆ ಶುಲ್ಕದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ ವಿದ್ಯಾರ್ಥಿ ಪರವಾಗಿರುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ, ಅದು ಕೇವಲ ಘೋಷಣೆಯಾಗಿ ಉಳಿದಿರುವುದು ವಿಷಾದನೀಯ.

  • AIDSO ಕರ್ನಾಟಕ ರಾಜ್ಯ ಸಮಿತಿ

ಅರ್ಥ ಕಳೆದಕೊಂಡ ಬಜೆಟ್

ಹೊಸ ಶಿಕ್ಷಣ ನೀತಿ ಜಾರಿಯಾದರೆ ಯಾವೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂದು ನಾಲ್ಕು ವರ್ಷಗಳ ಹಿಂದೆಯೇ ಎಚ್ಚರಿಸಿದ್ದೆವೊ ಅವೆಲ್ಲವೂ ಈ ಬಜೆಟ್‌ನಲ್ಲಿ ಗೋಚರಿಸುತ್ತಿವೆ. ಅಂಗನವಾಡಿ ಎಂಬುದು ಅನೌಪಚಾರಿಕ ಶಿಕ್ಷಣವಾಗಿದೆ. ಆದರೆ ಈ ಸರ್ಕಾರ ಅದನ್ನು ಔಪಚಾರಿಕ ಶಿಕ್ಷಣ ಮಾಡಲು ಹಠತೊಟ್ಟಿದೆ. ಇನ್ನು ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳ ಸಂಕಷ್ಟದ ಹಿನ್ನೆಲೆಯಲ್ಲಿ NEET ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ನೀಟ್ ಮಾತ್ರವಲ್ಲದೇ ಸರ್ಕಾರ ಸಾರ್ವಜನಿಕ ಶಿಕ್ಷಣದಿಂದ ಹೊರನಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಣ ಕ್ಷೇತ್ರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಡಿಮೆ ಹಣ ನೀಡಲಾಗುತ್ತದೆ. ಆನಂತರ  ಅಷ್ಟನ್ನು ಖರ್ಚು ಮಾಡದೇ ಬೇರೆ ಕ್ಷೇತ್ರಗಳಿಗೆ ಹಂಚುತ್ತಾರೆ. ಬಜೆಟ್‌ಗಳು ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥ ಕಳೆದುಕೊಂಡಿವೆ. ಈ ಬಜೆಟ್‌ ಕುರಿತು ಟೀಕೆ ಮಾಡಿದರೆ ಪ್ರಯೋಜನವೇನು?

  • ಬಿ.ಶ್ರೀಪಾದ್ ಭಟ್, ಶಿಕ್ಷಣ ತಜ್ಞರು, ಹೋರಾಟಗಾರರು- ಬೆಂಗಳೂರು

ಮಧ್ಯ ಕರ್ನಾಟಕದ ಜಿಲ್ಲೆಗಳ ಕಡೆಗಣನೆ

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಗರಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ಕೊಡಲಾಗಿದೆ. ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೇ ಸ್ಥಾಪಿಸುವ ಪ್ರಯತ್ನದಲ್ಲಿ ಸರ್ಕಾರ ಪ್ರಸ್ತಾವನೆಗಳನ್ನು ಕೊಡುತ್ತಾ ಬಂದಿದೆಯೇ ಹೊರತು, ನಿರ್ಧಿಷ್ಟವಾಗಿ ಹಣಕಾಸು ಇಟ್ಟಿಲ್ಲ. ಜನರಲ್ಲಿ ಅನುಮಾನಗಳು ಮೂಡುವಂತಾಗಿದೆ.

ಕರ್ನಾಟಕದ ಬಜೆಟ್ ಎಲ್ಲಾ ಜನವರ್ಗದವರನ್ನು ಮುಂದಿನ ರಾಜ್ಯ ಚುನಾವಣೆಯತ್ತ ಸೆಳೆಯುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಇದೆ ಛಾಯೆ ಕಂಡುಬರುತ್ತಿದೆ. ನೀರಾವರಿಗೆ ಒತ್ತು, ಕೃಷಿಗೆ ಸಂಬಂಧಿಸಿ ಘೋಷಿಸಿರುವ ಅಭಿವೃದ್ದಿ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಡಬಲ್ ಇಂಜಿನ್ ಸರ್ಕಾರಗಳು ಇದ್ದಲ್ಲಿ ಅಭಿವೃದ್ದಿ ಉತ್ತೇಜನ ಪಡೆಯುತ್ತದೆ ಎನ್ನುವ ಭಾವನೆ ಕರ್ನಾಟಕ ದೃಷ್ಟಿಯಿಂದ ನಿಜಕ್ಕೂ ಸೋತಿದೆ.

  • ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು, ಚಿತ್ರದುರ್ಗ

ಇದನ್ನೂ ಓದಿ: ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...