Homeಕರ್ನಾಟಕಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ಇಂದಿನ ರಾಜ್ಯ ಬಜೆಟ್ ಕುರಿತು ಅಭಿಪ್ರಾಯಗಳು

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

- Advertisement -
- Advertisement -

2022-23 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಮಂಡಿಸಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಗಳು ಇಲ್ಲಿವೆ.

ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಕರ್ನಾಟಕ ಬಜೆಟ್: 2022-23

ಕಳೆದ ತಿಂಗಳು ಬಜೆಟ್-ಪೂರ್ವ ಸಮೀಕ್ಷೆ ಮಾಡುವಾಗ ಹಿಜಾಬ್, ಮತಾಂತರ, ಲವ್ ಜಿಹಾದ್, ದೇವಾಲಯಗಳ ಖಾಸಗೀಕರಣ, ಉಳ್ಳವರಿಗೆ ಭೂಮಿ ಮುಂತಾದವುಗಳನ್ನು ಆದ್ಯತೆಗಳನ್ನಾಗಿ ಮಾಡಿಕೊಂಡಿರುವ ಸರ್ಕಾರದಿಂದ ಎಂತಹ ಬಜೆಟ್ಟನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆ ಹಾಕಿದ್ದೆ. ಇದು ನಿಜವಾಗಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಬಜೆಟ್ಟಿನಲ್ಲಿ ರೂ. 100 ಕೋಟಿ ಅನುದಾನ; ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ 15 ಕೋಟಿ ಅನುದಾನ. ಈ ಸರ್ಕಾರದ ಆದ್ಯತೆಗಳೇನು ಎಂಬುದುಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ! ತಟ್ಟೆಕಾಸಿಗೆ ಉತ್ತೇಜನ: ಮಕ್ಕಳ ವಿದ್ಯಾಭ್ಯಾಸಕ್ಕೆ ನಿರುತ್ತೇಜನ.

ಒಕ್ಕೂಟ ಸರ್ಕಾರದಿಂದ 2019-20ರಲ್ಲಿ ರಾಜ್ಯಕ್ಕೆ ವರ್ಗಾವಣೆಯಾದ ಮೊತ್ತವು ಆ ವರ್ಷದ ಬಜೆಟ್ ವೆಚ್ಚದ ಶೇ. 21.73 ರಷ್ಟಿತ್ತು. ಈ ವರ್ಷ ಇದು ಶೇ. 17.71ಕ್ಕಿಳಿದಿದೆ. ನಮಗೆ ಬರಬೇಕಾಗಿದ್ದ ಜಿ ಎಸ್ ಟಿ ಪರಿಹಾರ 2021-22ರಲ್ಲಿ ರೂ. 18109 ಕೋಟಿಯನ್ನು ನಮಗೆ ಅದು ಸಾಲ ನೀಡುವ ಕ್ರಮದಲ್ಲಿ ಯಾವ ಹೆಚ್ಚುಗಾರಿಕೆಯಿದೆ ಸ್ವಾಮಿ?

ಬಜೆಟ್ಟಿನ ಶಿಸ್ತು ರೆವಿನ್ಯೂ ಖಾತೆಯಲ್ಲಿ ಆದಿಕ್ಯವನ್ನು ಸಾಧಿಸಿಕೊಳ್ಳುವುದರಲ್ಲಿದೆ. ಇದನ್ನು ಕರ್ನಾಟಕ ಕಳೆದ 15 ವರ್ಷಗಳಿಂದಲೂ ಅನುಸರಿಸಿಕೊಂಡು ಬಂದಿತ್ತು. ಆದರೆ 2022-23ರಲ್ಲಿ ರೆವಿನ್ಯೂ ಕೊರತೆ ರೂ. 14699 ಕೋಟಿ. ನಮ್ಮ ಒಟ್ಟು ಋಣಬಾರ ಇಲ್ಲಿಯವರೆಗೆ ನಮ್ಮ ಜಿ ಎಸ್ ಡಿ ಪಿಯ ಶೇ. 25ಕ್ಕಿಂತ ಕಡಿಮೆಯಿರುತ್ತಿತ್ತು. ಈಗ 2022-23ರಲ್ಲಿ ಇದು ಶೇ. 27.49ಕ್ಕೆರಿದೆ. ಎಲ್ಲಿದೆ ಬಜೆಟ್ ಶಿಸ್ತು? ಮುಂದಿನ 2022-23ರಲ್ಲಿನ ಬಜೆಟ್ ಗಾತ್ರ ರೂ.265702 ಕೋಟಿ. ಇದರಲ್ಲಿ ಸಾಲದ ಪ್ರಮಾಣ ಶೇ. 27.09. ಮುಂದೆ ಇದನ್ನು ಬಡ ನಾಗರಿಕರ ಮೇಲೆ ಹೇರಲಾಗುತ್ತದೆ.

ರಾಜ್ಯದ ಜನಸಂಖ್ಯೆಯ ಶೇ. 24.01 ರಷ್ಟಿರುವ ದಲಿತರು ಮತ್ತು ಆದಿವಾಸಿಗಳ ಉಪಯೋಜನೆಗಳಿಗೆ ನೀಡುತ್ತಿದ್ದ ಅನುದಾನ 2017-18ರಲ್ಲಿ ಬಜೆಟ್ ವೆಚ್ಚದ ಶೇ. 14.98ರಷ್ಟಿತ್ತು. ಇದೀಗ 2022-23ರಲ್ಲಿ ಇದು ಬಜೆಟ್ ವೆಚ್ಚದ ಶೇ. 10.62ಕ್ಕಿಳಿದಿದೆ. ರಾಜ್ಯದ ಜನಸಂಖ್ಯೆಯ ಶೇ. 15 ರಷ್ಟಿರುವ ಅಲ್ಪಸಂಖ್ಯಾತರಿಗೆ ಬಜೆಟ್ಟಿನಲ್ಲಿ ಏನಿದೆ! ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 2.53 ಲಕ್ಷ ಹುದ್ದೆಗಳು ಖಾಲಿಯಿವೆ. ಇದರ ಬಗ್ಗೆ ಬಜೆಟ್ಟಿನಲ್ಲಿ ಪ್ರಸ್ತಾಪವಿಲ್ಲ. ನರೇಗದಂತಹ ಕಾರ್ಯಯೋಜನೆ ನಗರ ಪ್ರದೇಶಗಳಿಗೂ ಬೇಕು ಎಂಬುದು ಜನರ-ತಜ್ಞರ ಅಭಿಪ್ರಾಯ. ಇದರ ಬಗ್ಗೆ ಚರ್ಚೆಯಿಲ್ಲ. ನೀತಿ ಆಯೋಗ್ ಬಹುಮುಖಿ ಬಡತನದ ವರದಿಯು ಕಲ್ಯಾಣ ಕರ್ನಾಟಕದಲ್ಲಿ ಇದು ತೀವ್ರವಾಗಿದೆ ಎಂದು ಹೇಳಿದೆ. ಇದಕ್ಕೆ ಬಜೆಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ.

ವಾಡಿಕೆಯಂತೆ ಇದೂ ಒಂದು ಬಜೆಟ್ಟು: ನಿರ್ದಿಷ್ಟ ದಿಕ್ಕು-ದಿಶೆಯಿಲ್ಲದ ಬಜೆಟ್ಟು.

  • ಟಿ. ಆರ್. ಚಂದ್ರಶೇಖರ, ವಿಶ್ರಾಂತ ಪ್ರಾಧ್ಯಾಪಕರು

ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಬಜೆಟ್‌ನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶೇ. 12ರಷ್ಟು ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಆದರೆ ತಜ್ಞರ ಬೇಡಿಕೆ ಕನಿಷ್ಠ ಶೇ.30 ಆಗಿದೆ. ಈ ಅಲ್ಪ ಹಣದಿಂದ ಈಗಿರುವ ಸರ್ಕಾರಿ ಸಂಸ್ಥೆಗಳ ನಿರ್ವಹಣೆ ಆಗಬಹುದೇ ಹೊರತು, ಹೊಸ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆಗುವುದಿಲ್ಲ. ರಾಜ್ಯದ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಸೀಟನ್ನು ದಕ್ಕಿಸಿಕೊಳ್ಳಲು ಸಾಲಕ್ಕಾಗಿ ನೆರವು ನೀಡುತ್ತೇವೆ ಎಂದು ಸರ್ಕಾರ ಹೇಳಿದೆ. ಇದು ಯಾವ ನೆರವೂ ಅಲ್ಲ. ಬದಲಿಗೆ ಸರ್ಕಾರ ಸಂಪೂರ್ಣವಾಗಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರವು ಉನ್ನತ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡಬೇಕಿತ್ತು. ಹೆಚ್ಚೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕಿತ್ತು. ಈ ಯೋಜನೆಗಳು ವಿದ್ಯಾರ್ಥಿಗಳಿಗೆ ನೆರವು ಆಗುತ್ತಿತ್ತು. ಆದರೆ, ಸಾಲದ ನೆರವಿನ ನೆಪದಲ್ಲಿ, ಸರ್ಕಾರ ಮತ್ತೊಮ್ಮೆ ವಿದ್ಯಾರ್ಥಿಗಳ ತಲೆಯ ಮೇಲೆ ಶುಲ್ಕದ ಹೊರೆಯನ್ನು ಹೊರಿಸಿದೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ ವಿದ್ಯಾರ್ಥಿ ಪರವಾಗಿರುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ, ಅದು ಕೇವಲ ಘೋಷಣೆಯಾಗಿ ಉಳಿದಿರುವುದು ವಿಷಾದನೀಯ.

  • AIDSO ಕರ್ನಾಟಕ ರಾಜ್ಯ ಸಮಿತಿ

ಅರ್ಥ ಕಳೆದಕೊಂಡ ಬಜೆಟ್

ಹೊಸ ಶಿಕ್ಷಣ ನೀತಿ ಜಾರಿಯಾದರೆ ಯಾವೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂದು ನಾಲ್ಕು ವರ್ಷಗಳ ಹಿಂದೆಯೇ ಎಚ್ಚರಿಸಿದ್ದೆವೊ ಅವೆಲ್ಲವೂ ಈ ಬಜೆಟ್‌ನಲ್ಲಿ ಗೋಚರಿಸುತ್ತಿವೆ. ಅಂಗನವಾಡಿ ಎಂಬುದು ಅನೌಪಚಾರಿಕ ಶಿಕ್ಷಣವಾಗಿದೆ. ಆದರೆ ಈ ಸರ್ಕಾರ ಅದನ್ನು ಔಪಚಾರಿಕ ಶಿಕ್ಷಣ ಮಾಡಲು ಹಠತೊಟ್ಟಿದೆ. ಇನ್ನು ಉಕ್ರೇನ್‌ನಲ್ಲಿ ವಿದ್ಯಾರ್ಥಿಗಳ ಸಂಕಷ್ಟದ ಹಿನ್ನೆಲೆಯಲ್ಲಿ NEET ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ನೀಟ್ ಮಾತ್ರವಲ್ಲದೇ ಸರ್ಕಾರ ಸಾರ್ವಜನಿಕ ಶಿಕ್ಷಣದಿಂದ ಹೊರನಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಶಿಕ್ಷಣ ಕ್ಷೇತ್ರದಿಂದ ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಡಿಮೆ ಹಣ ನೀಡಲಾಗುತ್ತದೆ. ಆನಂತರ  ಅಷ್ಟನ್ನು ಖರ್ಚು ಮಾಡದೇ ಬೇರೆ ಕ್ಷೇತ್ರಗಳಿಗೆ ಹಂಚುತ್ತಾರೆ. ಬಜೆಟ್‌ಗಳು ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥ ಕಳೆದುಕೊಂಡಿವೆ. ಈ ಬಜೆಟ್‌ ಕುರಿತು ಟೀಕೆ ಮಾಡಿದರೆ ಪ್ರಯೋಜನವೇನು?

  • ಬಿ.ಶ್ರೀಪಾದ್ ಭಟ್, ಶಿಕ್ಷಣ ತಜ್ಞರು, ಹೋರಾಟಗಾರರು- ಬೆಂಗಳೂರು

ಮಧ್ಯ ಕರ್ನಾಟಕದ ಜಿಲ್ಲೆಗಳ ಕಡೆಗಣನೆ

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಗರಗಳ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ಕೊಡಲಾಗಿದೆ. ಚಿತ್ರದುರ್ಗದಂತಹ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೇ ಸ್ಥಾಪಿಸುವ ಪ್ರಯತ್ನದಲ್ಲಿ ಸರ್ಕಾರ ಪ್ರಸ್ತಾವನೆಗಳನ್ನು ಕೊಡುತ್ತಾ ಬಂದಿದೆಯೇ ಹೊರತು, ನಿರ್ಧಿಷ್ಟವಾಗಿ ಹಣಕಾಸು ಇಟ್ಟಿಲ್ಲ. ಜನರಲ್ಲಿ ಅನುಮಾನಗಳು ಮೂಡುವಂತಾಗಿದೆ.

ಕರ್ನಾಟಕದ ಬಜೆಟ್ ಎಲ್ಲಾ ಜನವರ್ಗದವರನ್ನು ಮುಂದಿನ ರಾಜ್ಯ ಚುನಾವಣೆಯತ್ತ ಸೆಳೆಯುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಇದೆ ಛಾಯೆ ಕಂಡುಬರುತ್ತಿದೆ. ನೀರಾವರಿಗೆ ಒತ್ತು, ಕೃಷಿಗೆ ಸಂಬಂಧಿಸಿ ಘೋಷಿಸಿರುವ ಅಭಿವೃದ್ದಿ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಡಬಲ್ ಇಂಜಿನ್ ಸರ್ಕಾರಗಳು ಇದ್ದಲ್ಲಿ ಅಭಿವೃದ್ದಿ ಉತ್ತೇಜನ ಪಡೆಯುತ್ತದೆ ಎನ್ನುವ ಭಾವನೆ ಕರ್ನಾಟಕ ದೃಷ್ಟಿಯಿಂದ ನಿಜಕ್ಕೂ ಸೋತಿದೆ.

  • ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು, ಚಿತ್ರದುರ್ಗ

ಇದನ್ನೂ ಓದಿ: ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...