Homeಮುಖಪುಟಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದ 15ನೇ ವಿಧಾನಸಭೆಯ 10ನೇ ವಿಧಾನಸಭಾ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆಯಿತು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ನಂತರ ಕುಮಾರವ್ಯಾಸ ರಚಿತ ಮಹಾಭಾರತದ ಪದ್ಯವೊಂದನ್ನು ಓದಿದರು.

ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ
ಪರಿವಾರ ಹದ್ದಿನ ನೆರವಿ, ಬಡವರ ಭಿನ್ನಪವನಿನ್ಯಾರು ಕೇಳುವರು
ಉರಿ ಉರಿವುತ್ತಿದೆ, ದೇಶ ನಾವಿನ್ನನಿರಲು
ಬಾರದೆನ್ನುತ ಜನ ಬೇಸರದ ಬೇಗೆಯಲ್ಲಿರದಲೆ ಭೂಪಾಲ ಕೇಳೆಂದ.

ಭಾಮಿನಿ ಷಟ್ಪದಿ ಗೊತ್ತಲ್ಲ ನಿಮಗೆ.. ಲಘು ಗುರುಗಳು ಇರುತ್ತವೆ.

ಒಂದು ವಾಕ್ಯದಲ್ಲಿ 1,2,4,5 ನೇಯದರಲ್ಲಿ 13 ಲಘು ಗುರುಗಳಿರುತ್ತವೆ

3ನೇಯದು ಮತ್ತು 6ನೇಯದರಲ್ಲಿ 23 ಲಘು ಗುರುಗಳಿರುತ್ತವೆ ಭಾಮಿನಿ ಷಟ್ಪದಿಯಲ್ಲಿ..

ಕೊನೆಯ ಅಕ್ಷರ ಲಘುವಾದರೂ ಅದನ್ನು ಧೀರ್ಘವಾಗಿ ಉಚ್ಛರಿಸಬೇಕು, ಅದನ್ನು ಗುರು ಎಂದು ಪರಿಗಣಿಸಬೇಕು.

ಕುಮಾರವ್ಯಾಸನ ಸಭಾಪರ್ವದಲ್ಲಿ ಬರುತ್ತಕ್ಕಂತ ಪ್ರಸಂಗ ಇದು. ನಾರದ ಮಹರ್ಷಿ ಧರ್ಮರಾಯರಿಗೆ ಹೇಳಿದ ಮಾತುಗಳು. ಬಹುಶಃ ಅವತ್ತು ಕುಮಾರವ್ಯಾಸ ಈ ಥರ ಪರಿಸ್ಥಿತಿ ಈ ದೇಶದಲ್ಲಿ ಬರುಬಹುದು ಎಂದು ಈ ಪದ್ಯ ಬರೆದಿರಬಹುದು. ಆಗ ಆತ ರಾಜರಿಗೆ, ಧರ್ಮರಾಯನಿಗೆ ಹೇಳಿದ್ದ ಮಾತಿದು. ಈ ಥರ ರಾಜನೀತಿ ಇರಬೇಕಪ್ಪ, ಈ ಥರ ನಡೆದುಕೊಳ್ಳಬೇಕು, ಜನರಿಗೆ ರಕ್ಷಣೆ ಕೊಡಬೇಕು ಎಂದು ಅವತ್ತು ನಾರದ ಮುನಿಗಳು ಧರ್ಮರಾಯನಿಗೆ ಹೇಳಿದ ಮಾತುಗಳು ಇಂದಿಗೂ ಅನ್ವಯಿಸುತ್ತವೆ ಎಂದು ಪಾಠ ಮಾಡಿದರು. ಇಡೀ ಸದನ ನಿಶ್ಯಬ್ದವಾಗಿ ಆಲಿಸಿದ್ದಲ್ಲದೆ ಕೊನೆಗೆ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ವಿಡಿಯೋ ನೋಡಿ


ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...