Homeಮುಖಪುಟ2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

- Advertisement -
- Advertisement -

96ನೇ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಪ್ರಧಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ. ಬ್ರಿಟಿಷ್-ಅಮೆರಿಕನ್ ಚಲನಚಿತ್ರ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಭಾನುವಾರ ತಮ್ಮ ಮೊದಲ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ‘ಓಪನ್‌ ಹೈಮರ್’ ಸಿನಿಮಾವು 96ನೇ ಆಸ್ಕರ್‌ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿದೆ. ಓಪನ್‌ಹೈಮರ್’ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದಾರೆ. ಅದೇ ರೀತಿ ‘ದಿ ಹೋಲ್ಡೋವರ್ಸ್’ ಚಿತ್ರಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕ್ರಿಸ್ಟೋಫರ್ ನೋಲನ್ ಅವರ ಜೀವನಾಧಾರಿತ ಓಪನ್‌ಹೈಮರ್ ಸಿನಿಮಾಕ್ಕೆ ಈ ಬಾರಿ ಅತ್ಯುತ್ತಮ ಸಿನಿಮಾ ಸೇರಿದಂತೆ ಒಟ್ಟು ಏಳು ಆಸ್ಕರ್‌ಗಳು ದೊರಕಿವೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ ಮತ್ತು ಅತ್ಯುತ್ತಮ ಮೂಲ ಸಿನಿಮಾ ಸೇರಿದಂತೆ ಒಟ್ಟು ಏಳು ವಿಭಾಗದಲ್ಲಿ ಓಪನ್‌ಹೈಮರ್‌ ಪ್ರಶಸ್ತಿ ಗೆದ್ದುಕೊಂಡಿದೆ. ಕ್ರಿಸ್ಟಫರ್ ನೋಲನ್ ಅವರ ಲೇಟೆಸ್ಟ್ ಸಿನಿಮಾ ಓಪನ್​ಹೈಮರ್ ವಿಶ್ವಾದ್ಯಂತ ರಿಲೀಸ್ ಆಗಿದ್ದು ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಕೇಳಿ ಬಂದಿತ್ತು. ಅಟೊಮಿಕ್ ಬಾಂಬ್ ಕಂಡುಹಿಡಿದ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್​ಹೈಮರ್ ಅವರ ಜೀವನವನ್ನು ಈ ಸಿನಿಮಾ ತೋರಿಸುತ್ತದೆ. ಇವರು ಲಾಸ್ ಆಲಮೋಸ್ ಪ್ರಯೋಗಾಲಯದ ನಿರ್ದೇಕರೂ ಆಗಿದ್ದರು. ಇಲ್ಲಿಯೇ ಬಾಂಬ್​​ಗಳ ಕುರಿತು ಪ್ರಯೋಗವೂ ನಡೆದಿತ್ತು.

ಆಸ್ಕರ್‌ ಪ್ರಶಸ್ತಿ ಗೆದ್ದ ಚಲನಚಿತ್ರ ಹಾಗೂ ಕಲಾವಿದರ ಮಾಹಿತಿ…

1 ಅತ್ಯುತ್ತಮ ಚಿತ್ರ: ಓಪನ್‌ ಹೈಮರ್

2 ಅತ್ಯುತ್ತಮ ನಿರ್ದೇಶಕ: ಕ್ರಿಸ್ಟೋಫರ್ ನೋಲನ್

3 ಅತ್ಯುತ್ತಮ ನಟಿ: ಎಮ್ಮಾ ಸ್ಟೋನ್

4 ಅತ್ಯುತ್ತಮ ನಟ: ಸಿಲಿಯನ್ ಮರ್ಫಿ

4 ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ‘ದಿ ಝೋನ್ ಆಫ್ ಇಂಟರೆಸ್ಟ್’

5 ಅತ್ಯುತ್ತಮ ಪೋಷಕ ನಟ: ರಾಬರ್ಟ್ ಡೌನಿ ಜೂನಿಯರ್ (ಓಪೆನ್‌ ಹೈಮರ್)

6 ಅತ್ಯುತ್ತಮ ಪೋಷಕ ನಟಿ: ಡೇವಿನ್ ಜಾಯ್ ರಾಂಡೋಲ್ಫ್ (ದಿ ಹೋಲ್ಡವರ್ಸ್)

7 ಅತ್ಯುತ್ತಮ ಹಾಡು: ಬಾರ್ಬಿ (ವಾಟ್ ವಾಸ್ ಐ ಮೇಡ್ ಫಾರ್)

8 ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ‘ಗಾಡ್ಜಿಲ್ಲಾ ಮೈನಸ್ ಒನ್’

9 ಅತ್ಯುತ್ತಮ ಧ್ವನಿ ವಿನ್ಯಾಸ: ‘ದಿ ಝೋನ್ ಆಫ್ ಇಂಟರೆಸ್ಟ್’

10 ಅತ್ಯುತ್ತಮ ಸಂಕಲನ: ‘ಓಪನ್‌ ಹೈಮರ್’

11 ಅತ್ಯುತ್ತಮ ಛಾಯಾಗ್ರಹಣ: ‘ಓಪನ್‌ ಹೈಮರ್’

12 ಅತ್ಯುತ್ತಮ ಮೂಲ ಚಿತ್ರಕಥೆ: ಜಸ್ಟಿನ್ ಟ್ರೈಟ್ ಮತ್ತು ಆರ್ಥರ್ ಹರಾರಿ ಅವರ ‘ಅನ್ಯಾಟಮಿ ಆಫ್ ಎ ಫಾಲ್’

13 ಅತ್ಯುತ್ತಮ ಸಾಕ್ಷ್ಯಚಿತ್ರ: ಜಾನ್ ಮತ್ತು ಯೊಕೊ ಅವರ ‘ವಾರ್ ಇಸ್ ಓವರ್’

14 ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಹಯಾವೊ ಮಿಯಾಜಾಕಿ ಮತ್ತು ತೋಶಿಯೊ ಸುಜುಕ್ ಅವರ ‘ದಿ ಬಾಯ್ ಅಂಡ್ ದಿ ಹೆರಾನ್’

15 ಅತ್ಯುತ್ತಮ ಮೇಕಪ್‌ ಮತ್ತು ಕೇಶ ವಿನ್ಯಾಸ: ‘ಪೂರ್‌ ಥಿಂಗ್ಸ್‌’ (Poor Things)

16 ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಲಾಸ್ಟ್ ರಿಪೇರಿ ಶಾಪ್’

ಪ್ರಶಸ್ತಿ ನೀಡಲು ವೇದಿಕೆಗೆ ಬೆತ್ತಲಾಗಿ ಬಂದ ನಟ:

ಆಸ್ಕರ್‌ ಕಾರ್ಯಕ್ರಮ ಪ್ರತಿವರ್ಷ ಒಂದಲ್ಲ ಒಂದು ಕಾರಣಕ್ಕೆ ಚರ್ಚಾ ವಿಚಾರವಾಗುತ್ತದೆ. ಈ ವರ್ಷ ಆಸ್ಕರ್‌ ವೇದಿಕೆಗೆ ನಟನೊಬ್ಬ ಬೆತ್ತಲಾಗಿ ಬಂದಿರುವುದು ವೈರಲ್‌ ಆಗಿದೆ. WWE ಸೂಪರ್‌ ಸ್ಟಾರ್‌, ಅಮೆರಿಕಾದ ನಟ ಜಾನ್‌ ಸೇನಾ ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದು ಅಚ್ಚರಿ ಮೂಡಿಸಿದ್ದಾರೆ.

ಜಾನ್‌ ಸೇನಾ ಅವರು ವಸ್ತ್ರ ವಿನ್ಯಾಸ ಪ್ರಶಸ್ತಿ ನೀಡಲು ವೇದಿಕೆ ಬಂದಿದ್ದರು. ಈ ವೇಳೆ ಅವರು ಖಾಸಗಿ ಭಾಗಕ್ಕೆ ಸ್ಟೋರಿ ಬೋರ್ಡ್‌ನ್ನು ಅಡ್ಡ ಹಿಡಿದು ಬೆತ್ತಲಾಗಿ ವೇದಿಕೆಗೆ ಬಂದಿದ್ದಾರೆ. ಜಾನ್‌ ಸೇನಾ ಈ ರೀತಿಯಾಗಿ ಬರುವುದು ಕಾರ್ಯಕ್ರಮದ ಒಂದು ಭಾಗವಾಗಿತ್ತು. ಇದಕ್ಕಾಗಿ ಪೂರ್ವ ತಯಾರಿಯನ್ನು ನಡೆಸಲಾಗಿತ್ತು. ಬೆತ್ತಲಾಗಿ ವೇದಿಕೆಗೆ ಬಂದ ಜಾನ್‌ ಸೇನಾ ಅವರ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ.

ಸಿನಿಮಾ ರಂಗದ ಅತ್ಯುತ್ತಮ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ ಎಂದರೆ ಆಸ್ಕರ್. ಸಿನಿಮಾ ಕ್ಷೇತ್ರದ ಪ್ರತಿಭಾನ್ವಿತ ವ್ಯಕ್ತಿಗಳಿಗೆ ಗೌರವ ಸಮರ್ಪಿಸುವುದು ಈ ಪ್ರಶಸ್ತಿಯ ಪ್ರಮುಖ ಧ್ಯೇಯವಾಗಿದೆ. ಆಸ್ಕರ್ ಪುರಸ್ಕಾರದ ಮೂದಲ ಸಮಾರಂಭವು ಮೇ-16, 1929ರಂದು ಹಾಲಿವುಡ್ ರೂಸ್ವೆಲ್ಟ್ ಹೋಟಲ್ನಲ್ಲಿ 270 ಪ್ರೇಕ್ಷಕರ ಸಮ್ಮುಖದಲ್ಲಿ ನಡೆದಿದೆ. ಆಸ್ಕರ್ ಸಮಯ ಕಳೆದಂತೆ ತನ್ನ ಚಾಪನ್ನು ವಿಶ್ವದೆಲ್ಲೆಡೆ ಪಸರಿಸಿದೆ, ಪ್ರಶಸ್ತಿಯನ್ನು ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಪೋಷಕ ನಟ ಮತ್ತು ನಟಿ, ಅತ್ಯತ್ತಮ ಚಿತ್ರಕಥೆ, ಅತ್ಯುತ್ತಮ ಆನಿಮೇಟಿಡ್, ಅತ್ಯುತ್ತಮ ಕಿರುಚಿತ್ರ, ಹೀಗೆ ಪ್ರಸ್ತುತ 24 ವಿಭಾಗಗಳಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...