Homeಮುಖಪುಟ2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

2024ರ ಆಸ್ಕರ್‌ ಪ್ರಶಸ್ತಿ ಪ್ರಧಾನ: 7 ಪ್ರಶಸ್ತಿಗಳನ್ನು ಗೆದ್ದುಕೊಂಡ ‘ಓಪನ್‌ ಹೈಮರ್’ ಚಿತ್ರತಂಡ

- Advertisement -
- Advertisement -

96ನೇ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಪ್ರಧಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ. ಬ್ರಿಟಿಷ್-ಅಮೆರಿಕನ್ ಚಲನಚಿತ್ರ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಭಾನುವಾರ ತಮ್ಮ ಮೊದಲ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ‘ಓಪನ್‌ ಹೈಮರ್’ ಸಿನಿಮಾವು 96ನೇ ಆಸ್ಕರ್‌ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿದೆ. ಓಪನ್‌ಹೈಮರ್’ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದಾರೆ. ಅದೇ ರೀತಿ ‘ದಿ ಹೋಲ್ಡೋವರ್ಸ್’ ಚಿತ್ರಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕ್ರಿಸ್ಟೋಫರ್ ನೋಲನ್ ಅವರ ಜೀವನಾಧಾರಿತ ಓಪನ್‌ಹೈಮರ್ ಸಿನಿಮಾಕ್ಕೆ ಈ ಬಾರಿ ಅತ್ಯುತ್ತಮ ಸಿನಿಮಾ ಸೇರಿದಂತೆ ಒಟ್ಟು ಏಳು ಆಸ್ಕರ್‌ಗಳು ದೊರಕಿವೆ. ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ ಮತ್ತು ಅತ್ಯುತ್ತಮ ಮೂಲ ಸಿನಿಮಾ ಸೇರಿದಂತೆ ಒಟ್ಟು ಏಳು ವಿಭಾಗದಲ್ಲಿ ಓಪನ್‌ಹೈಮರ್‌ ಪ್ರಶಸ್ತಿ ಗೆದ್ದುಕೊಂಡಿದೆ. ಕ್ರಿಸ್ಟಫರ್ ನೋಲನ್ ಅವರ ಲೇಟೆಸ್ಟ್ ಸಿನಿಮಾ ಓಪನ್​ಹೈಮರ್ ವಿಶ್ವಾದ್ಯಂತ ರಿಲೀಸ್ ಆಗಿದ್ದು ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಕೇಳಿ ಬಂದಿತ್ತು. ಅಟೊಮಿಕ್ ಬಾಂಬ್ ಕಂಡುಹಿಡಿದ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್​ಹೈಮರ್ ಅವರ ಜೀವನವನ್ನು ಈ ಸಿನಿಮಾ ತೋರಿಸುತ್ತದೆ. ಇವರು ಲಾಸ್ ಆಲಮೋಸ್ ಪ್ರಯೋಗಾಲಯದ ನಿರ್ದೇಕರೂ ಆಗಿದ್ದರು. ಇಲ್ಲಿಯೇ ಬಾಂಬ್​​ಗಳ ಕುರಿತು ಪ್ರಯೋಗವೂ ನಡೆದಿತ್ತು.

ಆಸ್ಕರ್‌ ಪ್ರಶಸ್ತಿ ಗೆದ್ದ ಚಲನಚಿತ್ರ ಹಾಗೂ ಕಲಾವಿದರ ಮಾಹಿತಿ…

1 ಅತ್ಯುತ್ತಮ ಚಿತ್ರ: ಓಪನ್‌ ಹೈಮರ್

2 ಅತ್ಯುತ್ತಮ ನಿರ್ದೇಶಕ: ಕ್ರಿಸ್ಟೋಫರ್ ನೋಲನ್

3 ಅತ್ಯುತ್ತಮ ನಟಿ: ಎಮ್ಮಾ ಸ್ಟೋನ್

4 ಅತ್ಯುತ್ತಮ ನಟ: ಸಿಲಿಯನ್ ಮರ್ಫಿ

4 ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ‘ದಿ ಝೋನ್ ಆಫ್ ಇಂಟರೆಸ್ಟ್’

5 ಅತ್ಯುತ್ತಮ ಪೋಷಕ ನಟ: ರಾಬರ್ಟ್ ಡೌನಿ ಜೂನಿಯರ್ (ಓಪೆನ್‌ ಹೈಮರ್)

6 ಅತ್ಯುತ್ತಮ ಪೋಷಕ ನಟಿ: ಡೇವಿನ್ ಜಾಯ್ ರಾಂಡೋಲ್ಫ್ (ದಿ ಹೋಲ್ಡವರ್ಸ್)

7 ಅತ್ಯುತ್ತಮ ಹಾಡು: ಬಾರ್ಬಿ (ವಾಟ್ ವಾಸ್ ಐ ಮೇಡ್ ಫಾರ್)

8 ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ‘ಗಾಡ್ಜಿಲ್ಲಾ ಮೈನಸ್ ಒನ್’

9 ಅತ್ಯುತ್ತಮ ಧ್ವನಿ ವಿನ್ಯಾಸ: ‘ದಿ ಝೋನ್ ಆಫ್ ಇಂಟರೆಸ್ಟ್’

10 ಅತ್ಯುತ್ತಮ ಸಂಕಲನ: ‘ಓಪನ್‌ ಹೈಮರ್’

11 ಅತ್ಯುತ್ತಮ ಛಾಯಾಗ್ರಹಣ: ‘ಓಪನ್‌ ಹೈಮರ್’

12 ಅತ್ಯುತ್ತಮ ಮೂಲ ಚಿತ್ರಕಥೆ: ಜಸ್ಟಿನ್ ಟ್ರೈಟ್ ಮತ್ತು ಆರ್ಥರ್ ಹರಾರಿ ಅವರ ‘ಅನ್ಯಾಟಮಿ ಆಫ್ ಎ ಫಾಲ್’

13 ಅತ್ಯುತ್ತಮ ಸಾಕ್ಷ್ಯಚಿತ್ರ: ಜಾನ್ ಮತ್ತು ಯೊಕೊ ಅವರ ‘ವಾರ್ ಇಸ್ ಓವರ್’

14 ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಹಯಾವೊ ಮಿಯಾಜಾಕಿ ಮತ್ತು ತೋಶಿಯೊ ಸುಜುಕ್ ಅವರ ‘ದಿ ಬಾಯ್ ಅಂಡ್ ದಿ ಹೆರಾನ್’

15 ಅತ್ಯುತ್ತಮ ಮೇಕಪ್‌ ಮತ್ತು ಕೇಶ ವಿನ್ಯಾಸ: ‘ಪೂರ್‌ ಥಿಂಗ್ಸ್‌’ (Poor Things)

16 ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಲಾಸ್ಟ್ ರಿಪೇರಿ ಶಾಪ್’

ಪ್ರಶಸ್ತಿ ನೀಡಲು ವೇದಿಕೆಗೆ ಬೆತ್ತಲಾಗಿ ಬಂದ ನಟ:

ಆಸ್ಕರ್‌ ಕಾರ್ಯಕ್ರಮ ಪ್ರತಿವರ್ಷ ಒಂದಲ್ಲ ಒಂದು ಕಾರಣಕ್ಕೆ ಚರ್ಚಾ ವಿಚಾರವಾಗುತ್ತದೆ. ಈ ವರ್ಷ ಆಸ್ಕರ್‌ ವೇದಿಕೆಗೆ ನಟನೊಬ್ಬ ಬೆತ್ತಲಾಗಿ ಬಂದಿರುವುದು ವೈರಲ್‌ ಆಗಿದೆ. WWE ಸೂಪರ್‌ ಸ್ಟಾರ್‌, ಅಮೆರಿಕಾದ ನಟ ಜಾನ್‌ ಸೇನಾ ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದು ಅಚ್ಚರಿ ಮೂಡಿಸಿದ್ದಾರೆ.

ಜಾನ್‌ ಸೇನಾ ಅವರು ವಸ್ತ್ರ ವಿನ್ಯಾಸ ಪ್ರಶಸ್ತಿ ನೀಡಲು ವೇದಿಕೆ ಬಂದಿದ್ದರು. ಈ ವೇಳೆ ಅವರು ಖಾಸಗಿ ಭಾಗಕ್ಕೆ ಸ್ಟೋರಿ ಬೋರ್ಡ್‌ನ್ನು ಅಡ್ಡ ಹಿಡಿದು ಬೆತ್ತಲಾಗಿ ವೇದಿಕೆಗೆ ಬಂದಿದ್ದಾರೆ. ಜಾನ್‌ ಸೇನಾ ಈ ರೀತಿಯಾಗಿ ಬರುವುದು ಕಾರ್ಯಕ್ರಮದ ಒಂದು ಭಾಗವಾಗಿತ್ತು. ಇದಕ್ಕಾಗಿ ಪೂರ್ವ ತಯಾರಿಯನ್ನು ನಡೆಸಲಾಗಿತ್ತು. ಬೆತ್ತಲಾಗಿ ವೇದಿಕೆಗೆ ಬಂದ ಜಾನ್‌ ಸೇನಾ ಅವರ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ.

ಸಿನಿಮಾ ರಂಗದ ಅತ್ಯುತ್ತಮ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ ಎಂದರೆ ಆಸ್ಕರ್. ಸಿನಿಮಾ ಕ್ಷೇತ್ರದ ಪ್ರತಿಭಾನ್ವಿತ ವ್ಯಕ್ತಿಗಳಿಗೆ ಗೌರವ ಸಮರ್ಪಿಸುವುದು ಈ ಪ್ರಶಸ್ತಿಯ ಪ್ರಮುಖ ಧ್ಯೇಯವಾಗಿದೆ. ಆಸ್ಕರ್ ಪುರಸ್ಕಾರದ ಮೂದಲ ಸಮಾರಂಭವು ಮೇ-16, 1929ರಂದು ಹಾಲಿವುಡ್ ರೂಸ್ವೆಲ್ಟ್ ಹೋಟಲ್ನಲ್ಲಿ 270 ಪ್ರೇಕ್ಷಕರ ಸಮ್ಮುಖದಲ್ಲಿ ನಡೆದಿದೆ. ಆಸ್ಕರ್ ಸಮಯ ಕಳೆದಂತೆ ತನ್ನ ಚಾಪನ್ನು ವಿಶ್ವದೆಲ್ಲೆಡೆ ಪಸರಿಸಿದೆ, ಪ್ರಶಸ್ತಿಯನ್ನು ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಪೋಷಕ ನಟ ಮತ್ತು ನಟಿ, ಅತ್ಯತ್ತಮ ಚಿತ್ರಕಥೆ, ಅತ್ಯುತ್ತಮ ಆನಿಮೇಟಿಡ್, ಅತ್ಯುತ್ತಮ ಕಿರುಚಿತ್ರ, ಹೀಗೆ ಪ್ರಸ್ತುತ 24 ವಿಭಾಗಗಳಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...