Homeಮುಖಪುಟಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

- Advertisement -
- Advertisement -

ಬಿಹಾರ ಸರಕಾರ ದೇಶದಲ್ಲೇ ಮೊದಲ ಬಾರಿಗೆ ಜಾತಿ ಆಧಾರಿತ ಜನಗಣತಿಯ ವರದಿಯನ್ನು ಬಿಡುಗಡೆ ಮಾಡಿದ್ದು ಇದನ್ನು ಪ್ರತಿಪಕ್ಷಗಳ INDIA ಒಕ್ಕೂಟ ಸ್ವಾಗತಿಸಿದೆ.

ಸರ್ಕಾರ ನಡೆಸಿದ್ದ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದರನ್ವಯ ಬಿಹಾರದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಬಿಸಿ) ಜನರು ಶೇಕಡ 63ರಷ್ಟು ಇದ್ದಾರೆ ಎಂಬುದು ತಿಳಿದು ಬಂದಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದು, ಬಿಹಾರದ ಜಾತಿ ಗಣತಿ ಅನ್ವಯ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ಶೇಕಡ 84ರಷ್ಟು ಇದ್ದಾರೆ ಎಂಬುದು ಬಹಿರಂಗವಾಗಿದೆ. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳ ಪೈಕಿ ಕೇವಲ 3 ಮಂದಿ ಮಾತ್ರ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರು ಭಾರತದ ಬಜೆಟ್‌ನ ಶೇ. 5ರಷ್ಟನ್ನು ಮಾತ್ರ ನಿಭಾಯಿಸುತ್ತಾರೆ. ಆದ್ದರಿಂದ ದೇಶದ ಜಾತಿ ಅಂಕಿಅಂಶಗಳನ್ನು ತಿಳಿದುಕೊಳ್ಳಬೇಕಿದೆ. ಹೆಚ್ಚಿನ ಜನಸಂಖ್ಯೆ, ಹೆಚ್ಚಿನ ಹಕ್ಕುಗಳು, ಇದು ನಮ್ಮ ಪ್ರತಿಜ್ಞೆ ಎಂದು ರಾಹುಲ್ ಗಾಂಧಿ ಅವರು ಬರೆದುಕೊಂಡಿದ್ದಾರೆ.

ಕಳೆದ ಏ.16 ರಂದು ಕರ್ನಾಟಕದ ಕೋಲಾರದಲ್ಲಿ ಜಾತಿ ಗಣತಿ ಪರ ಪಕ್ಷವು ಇದೆ ಎಂದು ಹೇಳಿದ್ದು, ದಲಿತರು, ಬುಡಕಟ್ಟುಗಳು ಮತ್ತು ಒಬಿಸಿಗಳಿಗೆ ಶೇ.50 ರಷ್ಟು ಅನುಪಾತದ ಕೋಟಾವನ್ನು ಒದಗಿಸಲು ಮತ್ತು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ವಿಚಾರದಲ್ಲಿ ಪಕ್ಷವು ಧನಾತ್ಮಕ ನಿಲುವನ್ನು ಹೊಂದಿದೆ ಎಂದು ಹೇಳಿದ್ದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಬಿಹಾರ ನಡೆಸಿದ ಜಾತಿ ಸಮೀಕ್ಷೆ ಈಗಷ್ಟೇ ಬಿಡುಗಡೆಯಾಗಿದೆ. ಇದನ್ನುನಾವು ಸ್ವಾಗತಿಸುತ್ತಿದ್ದೇವೆ. ಇದಲ್ಲದೆ ಕಾಂಗ್ರೆಸ್ ಸರ್ಕಾರಗಳು ಇತರ ರಾಜ್ಯಗಳಲ್ಲಿ ಇದೇ ರೀತಿಯ ಸಮೀಕ್ಷೆಗಳನ್ನು ಈ ಹಿಂದೆ ನಡೆಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾತಿ ಗಣತಿಯನ್ನು ಆದಷ್ಟು ಬೇಗ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ.

UPA-2 ಸರ್ಕಾರವು ವಾಸ್ತವವಾಗಿ ಈ ಜನಗಣತಿಯನ್ನು ಪೂರ್ಣಗೊಳಿಸಿತ್ತು ಆದರೆ ಅದರ ಫಲಿತಾಂಶಗಳನ್ನು ಮೋದಿ ಸರ್ಕಾರವು ಪ್ರಕಟಿಸಲಿಲ್ಲ. ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಮತ್ತು ಸಾಮಾಜಿಕ ನ್ಯಾಯಕ್ಕೆ ದೃಢವಾದ ಅಡಿಪಾಯವನ್ನು ಒದಗಿಸಲು ಇಂತಹ ಜನಗಣತಿಯು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಹಿಂದುಳಿದ ವರ್ಗಗಳ(ಒಬಿಸಿ) ಜನರು ಶೇಕಡ 27.13ರಷ್ಟು, ಆರ್ಥಿಕವಾಗಿ ಹಿಂದುಳಿದ ವರ್ಗಗಳ(ಇಬಿಸಿ) ಜನರು ಶೇಕಡ 36.01ರಷ್ಟಿದ್ದರೆ, ಸಾಮಾನ್ಯ ವರ್ಗದ ಜನರು ಶೇಕಡ 15.52ರಷ್ಟಿದ್ದಾರೆ. ಬಿಹಾರದಲ್ಲಿ 13.07 ಕೋಟಿ ಜನಸಂಖ್ಯೆ ಇದೆ ಎಂದು ಈ ಸಮೀಕ್ಷೆಯು ತಿಳಿಸಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...