Homeಮುಖಪುಟಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

- Advertisement -
- Advertisement -

ಬಿಹಾರ ಸರಕಾರ ದೇಶದಲ್ಲೇ ಮೊದಲ ಬಾರಿಗೆ ಜಾತಿ ಆಧಾರಿತ ಜನಗಣತಿಯ ವರದಿಯನ್ನು ಬಿಡುಗಡೆ ಮಾಡಿದ್ದು ಇದನ್ನು ಪ್ರತಿಪಕ್ಷಗಳ INDIA ಒಕ್ಕೂಟ ಸ್ವಾಗತಿಸಿದೆ.

ಸರ್ಕಾರ ನಡೆಸಿದ್ದ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದರನ್ವಯ ಬಿಹಾರದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಬಿಸಿ) ಜನರು ಶೇಕಡ 63ರಷ್ಟು ಇದ್ದಾರೆ ಎಂಬುದು ತಿಳಿದು ಬಂದಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದು, ಬಿಹಾರದ ಜಾತಿ ಗಣತಿ ಅನ್ವಯ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ಶೇಕಡ 84ರಷ್ಟು ಇದ್ದಾರೆ ಎಂಬುದು ಬಹಿರಂಗವಾಗಿದೆ. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳ ಪೈಕಿ ಕೇವಲ 3 ಮಂದಿ ಮಾತ್ರ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರು ಭಾರತದ ಬಜೆಟ್‌ನ ಶೇ. 5ರಷ್ಟನ್ನು ಮಾತ್ರ ನಿಭಾಯಿಸುತ್ತಾರೆ. ಆದ್ದರಿಂದ ದೇಶದ ಜಾತಿ ಅಂಕಿಅಂಶಗಳನ್ನು ತಿಳಿದುಕೊಳ್ಳಬೇಕಿದೆ. ಹೆಚ್ಚಿನ ಜನಸಂಖ್ಯೆ, ಹೆಚ್ಚಿನ ಹಕ್ಕುಗಳು, ಇದು ನಮ್ಮ ಪ್ರತಿಜ್ಞೆ ಎಂದು ರಾಹುಲ್ ಗಾಂಧಿ ಅವರು ಬರೆದುಕೊಂಡಿದ್ದಾರೆ.

ಕಳೆದ ಏ.16 ರಂದು ಕರ್ನಾಟಕದ ಕೋಲಾರದಲ್ಲಿ ಜಾತಿ ಗಣತಿ ಪರ ಪಕ್ಷವು ಇದೆ ಎಂದು ಹೇಳಿದ್ದು, ದಲಿತರು, ಬುಡಕಟ್ಟುಗಳು ಮತ್ತು ಒಬಿಸಿಗಳಿಗೆ ಶೇ.50 ರಷ್ಟು ಅನುಪಾತದ ಕೋಟಾವನ್ನು ಒದಗಿಸಲು ಮತ್ತು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ವಿಚಾರದಲ್ಲಿ ಪಕ್ಷವು ಧನಾತ್ಮಕ ನಿಲುವನ್ನು ಹೊಂದಿದೆ ಎಂದು ಹೇಳಿದ್ದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಬಿಹಾರ ನಡೆಸಿದ ಜಾತಿ ಸಮೀಕ್ಷೆ ಈಗಷ್ಟೇ ಬಿಡುಗಡೆಯಾಗಿದೆ. ಇದನ್ನುನಾವು ಸ್ವಾಗತಿಸುತ್ತಿದ್ದೇವೆ. ಇದಲ್ಲದೆ ಕಾಂಗ್ರೆಸ್ ಸರ್ಕಾರಗಳು ಇತರ ರಾಜ್ಯಗಳಲ್ಲಿ ಇದೇ ರೀತಿಯ ಸಮೀಕ್ಷೆಗಳನ್ನು ಈ ಹಿಂದೆ ನಡೆಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾತಿ ಗಣತಿಯನ್ನು ಆದಷ್ಟು ಬೇಗ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ.

UPA-2 ಸರ್ಕಾರವು ವಾಸ್ತವವಾಗಿ ಈ ಜನಗಣತಿಯನ್ನು ಪೂರ್ಣಗೊಳಿಸಿತ್ತು ಆದರೆ ಅದರ ಫಲಿತಾಂಶಗಳನ್ನು ಮೋದಿ ಸರ್ಕಾರವು ಪ್ರಕಟಿಸಲಿಲ್ಲ. ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಮತ್ತು ಸಾಮಾಜಿಕ ನ್ಯಾಯಕ್ಕೆ ದೃಢವಾದ ಅಡಿಪಾಯವನ್ನು ಒದಗಿಸಲು ಇಂತಹ ಜನಗಣತಿಯು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಹಿಂದುಳಿದ ವರ್ಗಗಳ(ಒಬಿಸಿ) ಜನರು ಶೇಕಡ 27.13ರಷ್ಟು, ಆರ್ಥಿಕವಾಗಿ ಹಿಂದುಳಿದ ವರ್ಗಗಳ(ಇಬಿಸಿ) ಜನರು ಶೇಕಡ 36.01ರಷ್ಟಿದ್ದರೆ, ಸಾಮಾನ್ಯ ವರ್ಗದ ಜನರು ಶೇಕಡ 15.52ರಷ್ಟಿದ್ದಾರೆ. ಬಿಹಾರದಲ್ಲಿ 13.07 ಕೋಟಿ ಜನಸಂಖ್ಯೆ ಇದೆ ಎಂದು ಈ ಸಮೀಕ್ಷೆಯು ತಿಳಿಸಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...