Homeಮುಖಪುಟಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ.

- Advertisement -
- Advertisement -

ಅಮೃತಸರದ ಸ್ವರ್ಣಮಂದಿರದಲ್ಲಿ ವಿದೇಶಿ ದೇಣಿಗೆ ಸ್ವೀಕರಿಸಲು ಇದ್ದ ತೊಡಕುಗಳನ್ನು ಕೇಂದ್ರ ಗೃಹ ಸಚಿವಾಲಯ ನಿವಾರಿಸಿದೆ. ಹಾಗಾಗಿ ಇನ್ನು ಮುಂದೆ ವಿದೇಶಿ ದೇಣಿಗೆ ಪಡೆಯಬಹುದಾಗಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

2010 ರಲ್ಲಿ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ನೋಂದಣಿಗೆ ಸಚ್‌ಖಂಡ್ ಶ್ರೀ ಹರ್ಮಂದಿರ್ ಸಾಹಿಬ್ ಶ್ರೀ ದರ್ಬಾರ್ ಸಾಹಿಬ್ ಪಂಜಾಬ್ ಅಸೋಸಿಯೇಷನ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿತು. ಅಸೋಸಿಯೇಷನ್ 1925 ರಲ್ಲಿ ಸ್ಥಾಪನೆಯಾಗಿತ್ತು. ಸಂಘದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಅಮೃತಸರದಲ್ಲಿರುವ ಸುವರ್ಣ ದೇವಾಲಯವನ್ನು ಶ್ರೀ ಹರ್ಮಂದೀರ್ ಸಾಹಿಬ್ ಎಂದೂ ಕರೆಯುತ್ತಾರೆ.

ಅಮೃತಸರದಲ್ಲಿರುವ ಸುವರ್ಣ ದೇವಾಲಯಕ್ಕೆ ವಿದೇಶಿ ಹಣವನ್ನು ಸ್ವೀಕರಿಸಲು ಅನುಮತಿ ನೀಡುವ ಸರ್ಕಾರದ ನಿರ್ಧಾರವು ಒಂದು ಮಹತ್ವದ ಕ್ರಮವಾಗಿದೆ. ಇದು ಮತ್ತೊಮ್ಮೆ ಸಿಖ್ ಸಮುದಾಯದ ಸೇವೆಯ ಮನೋಭಾವವನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್‌ಗಳನ್ನು ಮಾಡಿ ಖುಷಿ ಹಂಚಿಕೊಂಡಿದ್ದಾರೆ.

 

‘ವಾಹೆ ಗುರು ಜಿ’  ಪ್ರಧಾನಿಯವರಿಂದ ಸೇವೆ ತೆಗೆದುಕೊಂಡಿರುವುದಕ್ಕೆ ಪ್ರಧಾನಿ ಮೋದಿ ಆಶೀರ್ವಾದ ಪಡೆದವರಾಗಿದ್ದಾರೆ ಎಂದಿದ್ದಾರೆ.

“ಶ್ರೀ ದರ್ಬಾರ್ ಸಾಹಿಬ್ ಅವರ ದೈವತ್ವವು ನಮಗೆ ಬಲವನ್ನು ನೀಡುತ್ತದೆ. ದಶಕಗಳಿಂದ, ವಿಶ್ವಾದ್ಯಂತದ ಸಂಗತ್‌ಗೆ ಅಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಶ್ರೀ ಹರ್ಮಂದಿರ್ ಸಾಹಿಬ್‌ಗೆ ಎಫ್‌ಸಿಆರ್‌ಎಗೆ ಅವಕಾಶ ನೀಡುವ ಮೋದಿ ಸರ್ಕಾರದ ನಿರ್ಧಾರವು ಜಾಗತಿಕವಾಗಿ ಸಂಗತ್ ಮತ್ತು ಶ್ರೀ ದರ್ಬಾರ್ ಸಾಹಿಬ್ ನಡುವಿನ ಸೇವಾ ಸಂಪರ್ಕವನ್ನು ಗಟ್ಟಿಗೊಳಿಸಿದೆ. ಇದು ಆಶೀರ್ವಾದದ ಕ್ಷಣ! ” ಅವರು ಟ್ವೀಟ್ ಮಾಡಿದ್ದಾರೆ.

ಸುವರ್ಣ ದೇವಾಲಯಕ್ಕೆ ಎಫ್‌ಸಿಆರ್‌ಎ ನೋಂದಣಿ ನೀಡಿದ್ದಕ್ಕಾಗಿ ಕೇಂದ್ರ ಆಹಾರ ಸಂಸ್ಕರಣಾ ಸಚಿವ ಮತ್ತು ಅಕಾಲಿ ದಳದ ಮುಖಂಡೆ ಹರ್ಸಿಮ್ರತ್ ಕೌರ್ ಬಾದಲ್ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದರು.

“ಶ್ರೀ ಹರ್ಮಂದೀರ್ ಸಾಹಿಬ್‌ಗೆ ಎಫ್‌ಸಿಆರ್‌ಎ ಅಡಿಯಲ್ಲಿ ಎಂಹೆಚ್‌ಎ ಅನುಮೋದನೆ ನೀಡಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಇದು ದೇವಾಲಯಕ್ಕೆ ಪ್ರಪಂಚದಾದ್ಯಂತ ‘ಸೇವಾ’ ಸ್ವೀಕರಿಸಲು ಮತ್ತು ಗುರುಸಹಬ್‌ನ ತತ್ತ್ವಶಾಸ್ತ್ರವನ್ನು ಪ್ರಚಾರ ಮಾಡಲು ಸಹಾಯವಾಗುತ್ತದೆ. ಇದನ್ನು ಸಾಧ್ಯವಾಗಿಸಿದ ಅಮಿತ್‌ಶಾ ಜಿಗೆ ನಾನು ಆಭಾರಿಯಾಗಿದ್ದೇನೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...