Homeಮುಖಪುಟಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ.

- Advertisement -
- Advertisement -

ಅಮೃತಸರದ ಸ್ವರ್ಣಮಂದಿರದಲ್ಲಿ ವಿದೇಶಿ ದೇಣಿಗೆ ಸ್ವೀಕರಿಸಲು ಇದ್ದ ತೊಡಕುಗಳನ್ನು ಕೇಂದ್ರ ಗೃಹ ಸಚಿವಾಲಯ ನಿವಾರಿಸಿದೆ. ಹಾಗಾಗಿ ಇನ್ನು ಮುಂದೆ ವಿದೇಶಿ ದೇಣಿಗೆ ಪಡೆಯಬಹುದಾಗಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

2010 ರಲ್ಲಿ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ನೋಂದಣಿಗೆ ಸಚ್‌ಖಂಡ್ ಶ್ರೀ ಹರ್ಮಂದಿರ್ ಸಾಹಿಬ್ ಶ್ರೀ ದರ್ಬಾರ್ ಸಾಹಿಬ್ ಪಂಜಾಬ್ ಅಸೋಸಿಯೇಷನ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿತು. ಅಸೋಸಿಯೇಷನ್ 1925 ರಲ್ಲಿ ಸ್ಥಾಪನೆಯಾಗಿತ್ತು. ಸಂಘದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಅಮೃತಸರದಲ್ಲಿರುವ ಸುವರ್ಣ ದೇವಾಲಯವನ್ನು ಶ್ರೀ ಹರ್ಮಂದೀರ್ ಸಾಹಿಬ್ ಎಂದೂ ಕರೆಯುತ್ತಾರೆ.

ಅಮೃತಸರದಲ್ಲಿರುವ ಸುವರ್ಣ ದೇವಾಲಯಕ್ಕೆ ವಿದೇಶಿ ಹಣವನ್ನು ಸ್ವೀಕರಿಸಲು ಅನುಮತಿ ನೀಡುವ ಸರ್ಕಾರದ ನಿರ್ಧಾರವು ಒಂದು ಮಹತ್ವದ ಕ್ರಮವಾಗಿದೆ. ಇದು ಮತ್ತೊಮ್ಮೆ ಸಿಖ್ ಸಮುದಾಯದ ಸೇವೆಯ ಮನೋಭಾವವನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್‌ಗಳನ್ನು ಮಾಡಿ ಖುಷಿ ಹಂಚಿಕೊಂಡಿದ್ದಾರೆ.

 

‘ವಾಹೆ ಗುರು ಜಿ’  ಪ್ರಧಾನಿಯವರಿಂದ ಸೇವೆ ತೆಗೆದುಕೊಂಡಿರುವುದಕ್ಕೆ ಪ್ರಧಾನಿ ಮೋದಿ ಆಶೀರ್ವಾದ ಪಡೆದವರಾಗಿದ್ದಾರೆ ಎಂದಿದ್ದಾರೆ.

“ಶ್ರೀ ದರ್ಬಾರ್ ಸಾಹಿಬ್ ಅವರ ದೈವತ್ವವು ನಮಗೆ ಬಲವನ್ನು ನೀಡುತ್ತದೆ. ದಶಕಗಳಿಂದ, ವಿಶ್ವಾದ್ಯಂತದ ಸಂಗತ್‌ಗೆ ಅಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಶ್ರೀ ಹರ್ಮಂದಿರ್ ಸಾಹಿಬ್‌ಗೆ ಎಫ್‌ಸಿಆರ್‌ಎಗೆ ಅವಕಾಶ ನೀಡುವ ಮೋದಿ ಸರ್ಕಾರದ ನಿರ್ಧಾರವು ಜಾಗತಿಕವಾಗಿ ಸಂಗತ್ ಮತ್ತು ಶ್ರೀ ದರ್ಬಾರ್ ಸಾಹಿಬ್ ನಡುವಿನ ಸೇವಾ ಸಂಪರ್ಕವನ್ನು ಗಟ್ಟಿಗೊಳಿಸಿದೆ. ಇದು ಆಶೀರ್ವಾದದ ಕ್ಷಣ! ” ಅವರು ಟ್ವೀಟ್ ಮಾಡಿದ್ದಾರೆ.

ಸುವರ್ಣ ದೇವಾಲಯಕ್ಕೆ ಎಫ್‌ಸಿಆರ್‌ಎ ನೋಂದಣಿ ನೀಡಿದ್ದಕ್ಕಾಗಿ ಕೇಂದ್ರ ಆಹಾರ ಸಂಸ್ಕರಣಾ ಸಚಿವ ಮತ್ತು ಅಕಾಲಿ ದಳದ ಮುಖಂಡೆ ಹರ್ಸಿಮ್ರತ್ ಕೌರ್ ಬಾದಲ್ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದರು.

“ಶ್ರೀ ಹರ್ಮಂದೀರ್ ಸಾಹಿಬ್‌ಗೆ ಎಫ್‌ಸಿಆರ್‌ಎ ಅಡಿಯಲ್ಲಿ ಎಂಹೆಚ್‌ಎ ಅನುಮೋದನೆ ನೀಡಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಇದು ದೇವಾಲಯಕ್ಕೆ ಪ್ರಪಂಚದಾದ್ಯಂತ ‘ಸೇವಾ’ ಸ್ವೀಕರಿಸಲು ಮತ್ತು ಗುರುಸಹಬ್‌ನ ತತ್ತ್ವಶಾಸ್ತ್ರವನ್ನು ಪ್ರಚಾರ ಮಾಡಲು ಸಹಾಯವಾಗುತ್ತದೆ. ಇದನ್ನು ಸಾಧ್ಯವಾಗಿಸಿದ ಅಮಿತ್‌ಶಾ ಜಿಗೆ ನಾನು ಆಭಾರಿಯಾಗಿದ್ದೇನೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...