Homeಮುಖಪುಟಖಾಸಗಿ ವಲಯಕ್ಕೆ ಬಾಹ್ಯಾಕಾಶ ಚಟುವಟಿಕೆಯಲ್ಲಿ ಅವಕಾಶ: ಇಸ್ರೋ ಮುಖ್ಯಸ್ಥ ಕೆ.ಶಿವನ್

ಖಾಸಗಿ ವಲಯಕ್ಕೆ ಬಾಹ್ಯಾಕಾಶ ಚಟುವಟಿಕೆಯಲ್ಲಿ ಅವಕಾಶ: ಇಸ್ರೋ ಮುಖ್ಯಸ್ಥ ಕೆ.ಶಿವನ್

- Advertisement -
- Advertisement -

ರಾಕೆಟ್, ಉಪಗ್ರಹಗಳ ನಿರ್ಮಾಣ ಮತ್ತು ಉಡಾವಣಾ ಸೇವೆಗಳನ್ನು ಒದಗಿಸುವಂತಹ ಬಾಹ್ಯಾಕಾಶ ಚಟುವಟಿಕೆಗಳನ್ನು ನಡೆಸಲು ಖಾಸಗಿ ವಲಯಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ.ಶಿವನ್ ಗುರುವಾರ ಪ್ರಕಟಿಸಿದ್ದಾರೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಉದ್ಯಮದ ಚಟುವಟಿಕೆಗಳನ್ನು ಅನುಮತಿಸಲು ಮತ್ತು ನಿಯಂತ್ರಿಸಲು ಪ್ರತ್ಯೇಕ ಶೃಂಗೀಯ ಬಾಹ್ಯಾಕಾಶ ಇಲಾಖೆಯಡಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ದೃಡೀಕರಣ ಕೇಂದ್ರವನ್ನು ( IN-SPACe) ಸ್ಥಾಪಿಸುವುದಾಗಿ ಡಾ. ಶಿವನ್ ಘೋಷಿಸಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಪ್ರಯತ್ನಗಳನ್ನು ಆಸರೆಯಾಗಲು ಮತ್ತು ಉತ್ತೇಜಿಸಲು IN-SPACe ರಾಷ್ಟ್ರೀಯ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇದಕ್ಕಾಗಿ ಇಸ್ರೋ ತನ್ನ ತಾಂತ್ರಿಕ ಪರಿಣತಿಯನ್ನು ಮತ್ತು ಸೌಲಭ್ಯಗಳನ್ನು ಹಂಚಿಕೊಳ್ಳಲಿದೆ.


ಓದಿ: ಚಂದ್ರಯಾನ -3 ಕ್ಕೆ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ.


ಖಾಸಗಿ ಉದ್ಯಮದ ಅವಶ್ಯಕತೆಗಳನ್ನು ನಿರ್ಣಯಿಸಲು ಮತ್ತು ಚಟುವಟಿಕೆಗಳನ್ನು ಮತ್ತಷ್ಟು ಸಮನ್ವಯಗೊಳಿಸಲು ತಾಂತ್ರಿಕ, ಕಾನೂನು, ಸುರಕ್ಷತೆ ಮತ್ತು ಭದ್ರತೆ, ಮಾನಿಟರಿಂಗ್ ಮತ್ತು ಚಟುವಟಿಕೆಗಳ ಪ್ರಚಾರಕ್ಕಾಗಿ IN-SPACe ತನ್ನದೇ ಆದ ಸ್ವತಂತ್ರ ನಿರ್ದೇಶನಾಲಯಗಳನ್ನು ಹೊಂದಿರುತ್ತದೆ.

ಖಾಸಗಿ ವಲಯವು ಇಸ್ರೋನ ಅಂತರ-ಗ್ರಹಗಳ ಕಾರ್ಯಾಚರಣೆಯ ಭಾಗವಾಗಬಹುದು ಎನ್ನಲಾಗಿದೆ.

ಗ್ರಹಗಳ ಪರಿಶೋಧನಾ ಕಾರ್ಯಾಚರಣೆಗಳು ಸೇರಿದಂತೆ ಸಂಪೂರ್ಣ ಶ್ರೇಣಿಯ ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಕ್ಯಾಬಿನೆಟ್ ಬುಧವಾರ ಅನುಮೋದಿಸಿದೆ.

ಈ ನಿರ್ಧಾರದಿಂದಾಗಿ ಇಸ್ರೋ ಚಟುವಟಿಕೆಗಳು ಕಡಿಮೆಯಾಗುವುದಿಲ್ಲ, ಸುಧಾರಿತ ಸಂಶೋಧನೆ ಮತ್ತು ಅಭಿವೃದ್ಧಿ, ಅಂತರ ಗ್ರಹಗಳು ಮತ್ತು ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಾಚರಣೆಗಳು ಸೇರಿದಂತೆ ಬಾಹ್ಯಾಕಾಶ ಆಧಾರಿತ ಚಟುವಟಿಕೆಗಳನ್ನು ಮುಂದುವರಿಸಲಿದೆ ಎಂದು ಶಿವನ್ ಹೇಳಿದರು.

ಬಾಹ್ಯಾಕಾಶ ವಲಯದಲ್ಲಿನ ಸುಧಾರಣೆಗಳು ಖಾಸಗಿ ಉದ್ಯಮಗಳು ಮತ್ತು ಸ್ಟಾರ್ಟ್ ಅಪ್ ಗಳಿಗೆ ಪ್ರತಿಯೊಂದು ಬಾಹ್ಯಾಕಾಶ ಚಟುವಟಿಕೆಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುವ ಮೂಲಕ ಇಡೀ ದೇಶದ ಸಾಮರ್ಥ್ಯವನ್ನು ಅನ್ಲಾಕ್ ಮಾಡಿ ಟ್ಯಾಪ್ ಮಾಡುವ ಗುರಿಯನ್ನು ಹೊಂದಿವೆ ಎಂದು ಅದು ಗುರುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಸೋತದ್ದು ಇಸ್ರೋ  ‘ಚಂದ್ರಯಾನ’ವಲ್ಲ, ಬಿಜೆಪಿಯ ‘ಮೋದಿಯಾನ’!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...