Homeಕರ್ನಾಟಕಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

- Advertisement -
- Advertisement -

ಅವಕಾಶವಾದವು ನಮ್ಮ ಸಿದ್ಧಾಂತದ ಭಾಗ ಎಂದು ಬಹಿರಂಗವಾಗಿ ಘೋಷಿಸಿಕೊಂಡಿರುವ ಪಕ್ಷ ಬಹುಜನ ಸಮಾಜ ಪಕ್ಷ. ಆ ಪಕ್ಷದ ಸಿದ್ಧಾಂತದ ಕುರಿತು ಸಾವಿರಾರು ಯುವಜನರಿಗೆ ಪಾಠ ಹೇಳಿದವರು ಎನ್.ಮಹೇಶ್. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ತಮ್ಮ ಪಕ್ಷದ ಅಧಿನಾಯಕಿ ಮಾಯಾವತಿಯವರ ಸೂಚನೆಯನ್ನೂ ಧಿಕ್ಕರಿಸಿ ಗೈರು ಹಾಜರಾಗಿದ್ದಾರೆ. ಇದು ಹಲವರಿಗೆ ಶಾಕಿಂಗ್ ಇರಬಹುದು; ಆದರೆ ಆಶ್ಚರ್ಯಕರವಲ್ಲ. ಏಕೆಂದರೆ ಅವಕಾಶವಾದವು ಸಿದ್ಧಾಂತದ ಭಾಗ.

ಇನ್ನು ಕೆಲವರಿಗೆ ಶಾಕ್ ಅನಿಸಿರುವುದು ಎಚ್.ವಿಶ್ವನಾಥ್ ಅವರ ನಡವಳಿಕೆ. ಅವರು ಪುಸ್ತಕವೊಂದರಲ್ಲಿ ಬರೆದ ಕೆಲವು ಭಾಗಗಳನ್ನು ಡಿ.ಕೆ.ಶಿವಕುಮಾರ್ ಸದನದಲ್ಲಿ ಓದಿ ಹೇಳಿದರು. ಪಕ್ಷಾಂತರಿಗಳ ಯಾವುದೇ ವಾದವು ನಂಬಲರ್ಹವಲ್ಲ ಎಂದು ಸ್ವತಃ ವಿಶ್ವನಾಥ್ ಬರೆದಿರುವ ಮಾತುಗಳವು. ದೀರ್ಘಕಾಲದ ತಮ್ಮ ರಾಜಕೀಯ ವಿರೋಧಿ ಸಾ.ರಾ.ಮಹೇಶ್ ಸದನದಲ್ಲಿ ಹೇಳಿದ ನೈತಿಕತೆಯ ಪಾಠವನ್ನು ಮುಂಬೈನ ಹೋಟೆಲ್ ರೂಂನ ಟಿವಿಯಲ್ಲಿ ಎಚ್.ವಿಶ್ವನಾಥ್ ಕೇಳಿಸಿಕೊಂಡಿರುತ್ತಾರೆ. ‘ಇಂಥವರಿಂದ ತಾನು ಬುದ್ಧಿವಾದ ಕೇಳಬೇಕಾಯಿತು’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿರದಿದ್ದರೆ ಅದು ಆಶ್ಚರ್ಯ. ಆದರೆ, ವಿಶ್ವನಾಥ್ ಇಂದು ಗಟಾರದ ರಾಜಕಾರಣದ ಭಾಗವಾಗಿರುವುದರಲ್ಲಿ ಸಂಶಯವೇ ಇಲ್ಲ.

ಸದನದಲ್ಲಿ ಶಿವಲಿಂಗೇಗೌಡ ಮತ್ತು ಬಿ.ನಾರಾಯಣರಾವ್‍ರ ಮಾತುಗಳು ಒಳಗಿನಿಂದ ಬಂದ ಮಾತುಗಳು ಎಂದು ಅನಿಸಿದ್ದರಿಂದ ಅವುಗಳು ಎಲ್ಲರ ಹೃದಯಕ್ಕೆ ತಟ್ಟಿದವು. ಕೃಷ್ಣಭೈರೇಗೌಡರ ಪ್ರಾಮಾಣಿಕತೆಯನ್ನು ಅನುಮಾನಿಸಲೂ ಕಾರಣಗಳಿಲ್ಲ.
ಆದರೆ, ಇಂಥದೇ ಮಾತನ್ನು ಸ್ವತಃ ಸ್ಪೀಕರ್ ರಮೇಶ್‍ಕುಮಾರ್‍ರ ಕುರಿತು ಹೇಳುವುದು ಸಾಧ್ಯವಿಲ್ಲ. ಅಪಾರ ಅನುಭವ, ಬುದ್ಧಿವಂತಿಕೆ ಮತ್ತು ಹಣಕಾಸಿನ ವಿಚಾರದಲ್ಲಿ ಎಂದೂ ಭ್ರಷ್ಟರಾಗದ ಮತ್ತು ಜಾತಿವಾದಿಯಾಗದ ರಮೇಶ್‍ಕುಮಾರ್ ಪಕ್ಷಾಂತರ ಮಾಡದೇ ತಮ್ಮ ಪಕ್ಷದ (ಸ್ಪೀಕರ್‍ಗೆ ಪಕ್ಷ ಇರುವುದಿಲ್ಲ ಎಂಬುದು ತಾಂತ್ರಿಕವಾದ ಸಂಗತಿಯಷ್ಟೇ) ಅಭ್ಯರ್ಥಿ ಸೋಲಲು ಮೊನ್ನೆಯ ಚುನಾವಣೆಯಲ್ಲಿ ತಮ್ಮ ಕೊಡುಗೆಯನ್ನೂ ಸಲ್ಲಿಸಿದ್ದರು. ಮಿಕ್ಕಂತೆ ಸ್ವಚ್ಛ ರಾಜಕಾರಣದ ಹಾಗೂ ತತ್ವನಿಷ್ಠೆಯ ಕುರಿತು ಅವರಾಡುವ ಮಾತುಗಳಲ್ಲಿ ಇಂತಹ ದ್ವಂದ್ವಗಳು ಇದ್ದೇ ಇವೆ.

ಮುಂದೊಂದು ದಿನ ತಾನು ಮುಖ್ಯಮಂತ್ರಿಯಾಗಲೇಬೇಕು, ಬಿಜೆಪಿಗೆ ಹೋದರೆ ಅದು ಸಾಧ್ಯವೇ ಇಲ್ಲ ಎಂದು ಖಚಿತವಾಗಿ ಗೊತ್ತಿರುವ ಡಿ.ಕೆ.ಶಿವಕುಮಾರ್ ಅದಕ್ಕಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆದರೆ, ಇದೇ ಯಡಿಯೂರಪ್ಪನವರ ಜೊತೆಗಿನ ಅವರ ಸಖ್ಯ ಮತ್ತು ಇಂಧನ ಇಲಾಖೆಯ ಅವ್ಯವಹಾರದಲ್ಲಿ ಯಡಿಯೂರಪ್ಪನವರಿಗೆ ಮಾಡಿದ ಉಪಕಾರವನ್ನು ಪಕ್ಷಾಂತರ ಎಂದು ಕರೆಯಲಾಗದು. ಆದರೆ, ಪಕ್ಷ ಮೀರಿದ ಸಖ್ಯ ಕೇವಲ ಮನುಷ್ಯ ಸಂಬಂಧವಲ್ಲ. ಅದರಲ್ಲಿ ವ್ಯವಹಾರಿಕ ಮತ್ತು ಸ್ವಾರ್ಥದ ಲೆಕ್ಕಾಚಾರಗಳಿವೆ.

ದೇವೇಗೌಡರ ಕುಟುಂಬದ ಅವಕಾಶವಾದಕ್ಕೆ ಎಣೆಯೇ ಇಲ್ಲ. ಅವರಾಡುವ ಯಾವ ಮಾತುಗಳನ್ನೂ ನಂಬಬಹುದು ಎನಿಸುವುದಿಲ್ಲ. ನಿಖಿಲ್‍ನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದೇಕೆ ಎಂಬ ಕುರಿತು ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ದೇವೇಗೌಡರು ವಿವರಿಸಿದ್ದನ್ನು ಸ್ವತಃ ನಿಖಿಲ್ ನಂಬಿರುವುದಿಲ್ಲ.

ಪಕ್ಷ ಸಿದ್ಧಾಂತ, ಭಾರತೀಯ ಸಂಸ್ಕøತಿ, ಭ್ರಷ್ಟಾಚಾರಕ್ಕೆ ವಿರೋಧ, ಕಾಂಗ್ರೆಸ್ ಸಂಸ್ಕøತಿಗೆ ಪ್ರತಿರೋಧ, ಪಕ್ಷಕ್ಕೆ ಬದ್ಧರಾಗಿ ದುಡಿವ ಕಾರ್ಯಕರ್ತರಿಗೆ ಮನ್ನಣೆ ಇತ್ಯಾದಿಗಳನ್ನು ಹೇಳುತ್ತಾ ಬಂದಿರುವ ಬಿಜೆಪಿ ಈಗಲೂ ಆ ಮಾತುಗಳನ್ನು ಹೇಳಲು ಹಿಂಜರಿಯುವುದಿಲ್ಲ. ಅದೇ ಸೋಜಿಗದ ಸಂಗತಿ. ಆ ಹಿಂಜರಿಕೆಯೂ ಏಕಿಲ್ಲವೆಂದರೆ ಅದರಷ್ಟೇ ಅವಕಾಶವಾದಿಯಾದ ಮಾಧ್ಯಮ ಸಮೂಹ ಅಂತಹ ಪ್ರಶ್ನೆಗಳು ವಿರೋಧ ಪಕ್ಷಗಳಿಗೆ ಕೇಳಲು ಮಾತ್ರ ಇವೆಯೆಂದು ಭಾವಿಸಿವೆ. ಮಾಧ್ಯಮಗಳು ಮತ್ತು ಬಿಜೆಪಿ ಪಕ್ಷ ಎನ್ನುವುದು ಒಂದೇ ಪ್ಯಾಕೇಜ್‍ನ ಭಾಗ.
ಬಿಜೆಪಿ ಪಕ್ಷದಲ್ಲಿ ಸಜ್ಜನರೆಂದು ತೋರಿಸಿಕೊಳ್ಳಲು ಹಾತೊರೆಯುವ ಶಾಸಕರೊಬ್ಬರಿದ್ದಾರೆ. ರಾಜಾಜಿನಗರದ ಸುರೇಶ್‍ಕುಮಾರ್. ಅವರು ‘ವಿಶ್ವಾಸಮತ ಯಾಚನೆಗೆ ಮುಂದಾದ ಮೇಲೂ ವರ್ಗಾವಣೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಸರ್ಕಾರವನ್ನು’ ಸಕಾರಣವಾಗಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಹೊರಟಿರುವ ಯಡಿಯೂರಪ್ಪನವರು ಈ ಹಿಂದೆ ಪ್ರಮಾಣವಚನ ಸ್ವೀಕರಿಸಿ ವಿಶ್ವಾಸಮತ ಯಾಚನೆ ಮಾಡುವುದಕ್ಕೆ ಮುಂಚೆಯೇ ವರ್ಗಾವಣೆ ಮಾಡಿದ್ದನ್ನು ಮರೆಯುತ್ತಾರೆ. ಇಂತಹವರ ಅವಕಾಶವಾದಕ್ಕೆ ಸಾವಿರಾರು ಉದಾಹರಣೆಗಳು ಸಿಗುತ್ತವೆ.

ಈಗಾಗಲೇ ಹೇಳಿರುವಂತೆ ಅವಕಾಶವಾದಕ್ಕೆ ಮತ್ತೊಂದು ಹೆಸರೇ ಮಾಧ್ಯಮವಾಗಿದೆ. ಒಂದೇ ಬಗೆಯ ಎರಡು ಪ್ರಕರಣಗಳಲ್ಲಿ ಬಿಜೆಪಿ ಅಥವಾ ವಿರೋಧ ಪಕ್ಷಗಳಲ್ಲಿ ಯಾರು ಇದ್ದಾರೆ ಎಂಬುದರ ಮೇಲೆ ಅವರ ನಿಲುವೇ ಬದಲಾಗುತ್ತದೆ. ಪಕ್ಷವೊಂದರ ಪರವಾಗಿ ಪ್ರಚಾರಕ್ಕೇ ನಿಂತಿರುವ ಉಪಕರಣ ಅದು.

ಈ ರೀತಿಯಾಗಿ ಅವಕಾಶವಾದವನ್ನೇ ಬಿತ್ತಿ ಬೆಳೆದಿರುವ ಇಂದಿನ ರಾಜಕಾರಣದಲ್ಲಿ ಯಾವ ವಿಶ್ವಾಸ ಉಳಿದಿದೆ. ಕೆಲವು ಅತ್ಯುತ್ತಮ ಭಾಷಣಗಳನ್ನೂ, ಸಾಂವಿಧಾನಿಕ ನಡಾವಳಿಗಳನ್ನೂ ಕಂಡ ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ಒಂದೆರಡು ಉತ್ತಮ ಅಂಶಗಳು ಇದ್ದವು. ಆದರೆ, ಅದಕ್ಕಿಂತ ನೂರು ಪಟ್ಟು ಕೊಳಕು ಎದ್ದು ಕಾಣುತ್ತಿತ್ತು. ತಮ್ಮನ್ನು, ತಮ್ಮ ಪಕ್ಷವನ್ನು ವಾಚಾಮಗೋಚರವಾಗಿ ಬಯ್ಯುತ್ತಿದ್ದಾಗ ಅದಕ್ಕೆ ಪ್ರತ್ಯುತ್ತರವನ್ನು ಕೊಡದೇ ವಿರೋಧ ಪಕ್ಷ ಕೂತಿದ್ದು ಇತಿಹಾಸದಲ್ಲಿ ದಾಖಲಾಗಿ ನಿಲ್ಲುತ್ತದೆ. ಹಾಗಾಗಿ ರಾಜಕೀಯ ವ್ಯವಸ್ಥೆಯ ವಿರುದ್ಧವೇ ಅವಿಶ್ವಾಸವು ಮೂಡುವಂತಹ ವಾತಾವರಣ ಇಂದು ಮೇಲುಗೈ ಸಾಧಿಸಿದೆ.

ಅವಕಾಶವಾದ ಹಾಗೂ ಅನೈತಿಕ ರಾಜಕಾರಣದ ಮೂಲಕ್ಕೆ ಹೋಗಿ ಅದಕ್ಕೆ ಮದ್ದು ಕಂಡುಹಿಡಿದಾಗ ಮಾತ್ರ ವಿಶ್ವಾಸ ಹುಟ್ಟುತ್ತದೆ. ಆ ನಿಟ್ಟಿನಲ್ಲಿ ಮಾನ-ಮರ್ಯಾದೆ ಇರುವ ಎಲ್ಲರೂ ಪ್ರಯತ್ನಿಸುವ ಅಗತ್ಯ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...